Webdunia - Bharat's app for daily news and videos

Install App

ಬೊಮ್ಮಾಯಿಗೆ ಒಬಿಸಿ ಮೀಸಲು ಅಗ್ನಿಪರೀಕ್ಷೆ

Webdunia
ಮಂಗಳವಾರ, 10 ಆಗಸ್ಟ್ 2021 (12:20 IST)
ಬೆಂಗಳೂರು (ಆ.10):  ಅರ್ಹ ಸಮುದಾಯಗಳಿಗೆ ಹಿಂದುಳಿದ ವರ್ಗಗಳ ಮಾನ್ಯತೆ ನೀಡುವ ಅಧಿಕಾರವನ್ನು ರಾಜ್ಯ ಸರ್ಕಾರ,ಗಳಿಗೆ ವಹಿಸುವ ಕೇಂದ್ರ ಸರ್ಕಾರದ ನಿರ್ಧಾರ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಗ್ನಿ ಪರೀಕ್ಷೆಯಾಗಿ ಕಾಡಲಿದೆ.

ಕೇಂದ್ರ ಸರ್ಕಾರವು ಒಬಿಸಿ ಮಾನ್ಯತೆಗೆ ಸಮುದಾಯಗಳನ್ನು ಗುರುತಿಸುವ ಅಧಿಕಾರವನ್ನು ಒಬಿಸಿ ಕಾಯ್ದೆ ತಿದ್ದುಪಡಿ ಮೂಲಕ ರಾಜ್ಯಗಳಿಗೆ ನೀಡಲು ಈಗಾಗಲೇ ಸಚಿವ ಸಂಪುಟ ನಿರ್ಧಾರ ತೆಗೆದುಕೊಂಡಿದೆ. ಇದೇ ಅಧಿವೇಶನದಲ್ಲಿ ತಿದ್ದುಪಡಿ ಕಾಯ್ದೆಯನ್ನು ಮಂಡಿಸಿ ಅಂಗೀಕಾರ ಪಡೆಯಲು ಮುಂದಾಗಿದೆ. ಈಗಾಗಲೇ ಹಿಂದುಳಿದ ವರ್ಗಗಳ 2-ಎ ಮೀಸಲಾತಿಗಾಗಿ ಪಂಚಮ ಸಾಲಿ ಹಾಗೂ ಒಕ್ಕಲಿಗ ಸಮುದಾಯಗಳು ಒತ್ತಾಯ ಮಾಡಿವೆ. ಅಲ್ಲದೆ, ಮುಂದಿನ ಒಂದು ತಿಂಗಳಲ್ಲಿ ಸರ್ಕಾರ ಅಂತಿಮ ನಿರ್ಧಾರ ತೆಗೆದುಕೊಳ್ಳದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ರೂಪಿಸುವುದಾಗಿ ಪಂಚಮಸಾಲಿ ಸಮುದಾಯ ಎಚ್ಚರಿಕೆ ನೀಡಿದೆ.
ಎರಡೂ ಸಮುದಾಯಗಳನ್ನು 2-ಎ ಮೀಸಲಾತಿಗೆ ಸೇರಿಸಿದರೆ 2-ಎ ಮೀಸಲಾತಿಯಲ್ಲಿರುವ 102 ಜಾತಿಗಳ ಜೇನು ಗೂಡಿನ ಮೇಲೆ ಕಲ್ಲೆಸದಂತಾಗಲಿದೆ. ಹೀಗಾಗಿ ಬಸವರಾಜ ಬೊಮ್ಮಾಯಿ ಅವರು ಇಕ್ಕಟ್ಟಿಗೆ ಸಿಲುಕಲಿದ್ದು, ಮುಖ್ಯಮಂತ್ರಿ ಆಗಿ ಅಧಿಕಾರ ಪಡೆದ ತಕ್ಷಣ ಸವಾಲಿನ ಸ್ಥಿತಿ ಎದುರಾಗಿದೆ. ಈ ಸಂಕಷ್ಟದ ಸ್ಥಿತಿಯನ್ನು ಹೇಗೆ ನಿಭಾಯಿಸಲಿದ್ದಾರೆ ಎಂಬುದು ಕುತೂಹಲ ಕೆರಳಿಸಿದೆ.
ಏನಿದು ಮೀಸಲಾತಿ ಸಮಸ್ಯೆ?:  ಪಂಚಮಸಾಲಿ ಸಮುದಾಯವು ಪ್ರಸ್ತುತ ಪ್ರವರ್ಗ 3 - ಬಿ ಯಲ್ಲಿದ್ದು ಶೇ.5ರಷ್ಟುಮೀಸಲಾತಿ ಪಡೆಯುತ್ತಿದೆ. ಇದೀಗ ಸಮುದಾಯದ ಗಾತ್ರ ಆಧರಿಸಿ ಶೇ.15 ರಷ್ಟುಮೀಸಲಾತಿ ಇರುವ 2-ಎ ಮೀಸಲಾತಿಗೆ ಸೇರಿಸುವಂತೆ ಬೇಡಿಕೆ ಇಟ್ಟಿದೆ. ರಾಜ್ಯಮಟ್ಟದ ಹೋರಾಟ ರೂಪಿಸಿ ಈಗ್ಥಾಗಲೇ ಹಲವು ಹಂತದಲ್ಲಿ ಎಚ್ಚರಿಕೆ ರವಾನಿಸಿದ್ದು, ಸರ್ಕಾರಕ್ಕೆ ಆರು ತಿಂಗಳು ಗಡುವು ನೀಡಿದೆ. ಆ ಗಡುವು ಮುಂದಿನ ತಿಂಗಳಿನ ವೇಳೆಗೆ ಮುಗಿಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

UP Encounter: 3 ವರ್ಷದ ಬಾಲಕಿಯನ್ನು ರೇಪ್ ಮಾಡಿದ ಆರೋಪಿ ಯುಪಿ ಪೊಲೀಸರಿಂದ ಎನ್ ಕೌಂಟರ್

Bengaluru Stampede: ಡಿಸಿಎಂ ವಿರುದ್ದವೇ ಆರೋಪಿಸಿ, ಪತಿಯ ಬಂಧನ ಪ್ರಶ್ನಿಸಿದ ನಿಖಿಲ್ ಸೋಸಲೆ ಪತ್ನಿ

ದುರ್ಘಟನೆಯಲ್ಲಿ ಪೊಲೀಸರನ್ನು ಹರಕೆಯ ಕುರಿ ಮಾಡಿದ್ದಾರೆ: ವಿಜಯೇಂದ್ರ

Chenab bridge inauguration, ಬ್ರಿಟಿಷರು ಮಾಡಲು ಸಾಧ್ಯವಾಗದ್ದನ್ನು, ಮೋದಿ ಮಾಡಿ ತೋರಿಸಿದ್ದಾರೆ: ಸಿಎಂ ಒಮರ್‌ ಅಬ್ದುಲ್ಲಾ

Bengaluru Stampede: ನಾವಲ್ಲ ನೀವೇ ಮಾಡಿರೋದು.. ಸರ್ಕಾರದ ವಿರುದ್ಧ ತಿರುಗಿಬಿದ್ದ ಕೆಎಸ್ ಸಿಎ

ಮುಂದಿನ ಸುದ್ದಿ
Show comments