ಅನೈತಿಕ ಸಂಬಂಧಕ್ಕೆ ಆಕ್ಷೇಪಿಸಿ ಕೊಲೆ!

Webdunia
ಮಂಗಳವಾರ, 9 ನವೆಂಬರ್ 2021 (11:33 IST)
ಬೆಂಗಳೂರು : ಮಹಿಳೆಯ ಜೊತೆಗೆ ಅನೈತಿಕ ಸಂಬಂಧ ಬೆಳೆಸಿದ್ದ ಗಾರ್ಮೆಂಟ್ಸ್ ನೌಕರನನ್ನು ಹತ್ಯೆ ಮಾಡಿದ ಮಹಿಳೆಯ ಸಹೋದರ ಸೇರಿ ನಾಲ್ವರನ್ನು ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕೊಲೆ ಮಾಡಿದ ಬಳಿಕ ಆರೋಪಿಗಳು ಆಟೋದಲ್ಲಿ ಶವದೊಂದಿಗೆ ಬಂದು ಠಾಣೆಗೆ ಶರಣಾಗಿದ್ದಾರೆ.
ಹೊಸೂರು ಮದನಪಲ್ಲಿ ನಿವಾಸಿ ಗಾರ್ಮೆಂಟ್ಸ್ ಕಾರ್ಖಾನೆ ನೌಕರ ಭಾಸ್ಕರ್ (31) ಕೊಲೆಯಾದ ವ್ಯಕ್ತಿ. ಮಹಿಳೆಯ ಸಹೋದರ ಮುನಿರಾಜು (28) ಹಾಗೂ ಸಹಚರರಾದ ಮಾರುತಿ (22), ನಾಗೇಶ್ (22), ಪ್ರಶಾಂತ್ (20) ಎಂಬವರನ್ನು ಬಂಧಿಸಲಾಗಿದೆ.
ಮುನಿರಾಜು ಸಹೋದರಿಯು ಪತಿ ಹಾಗೂ ಇಬ್ಬರು ಮಕ್ಕಳ ಜತೆಗೆ ಮಾಲೂರಿನಲ್ಲಿ ವಾಸಿಸುತ್ತಿದ್ದರು. ಹೊಸೂರು ಬಳಿಯ ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಮುನಿರಾಜು ಸಹೋದರಿ ಜತೆಗೆ ಭಾಸ್ಕರ್ ಸಲುಗೆ ಬೆಳೆಸಿಕೊಂಡಿದ್ದ. ಕಳೆದ 15 ದಿನಗಳ ಹಿಂದೆ ಇದೇ ವಿಚಾರಕ್ಕೆ ಪತಿಯೊಂದಿಗೆ ಜಗಳ ಮಾಡಿದ ಮಹಿಳೆ, ಅನ್ನಪೂರ್ಣೇಶ್ವರಿ ನಗರದ ಚಂದ್ರಶೇಖರ ಲೇಔಟ್ನಲ್ಲಿರುವ ತನ್ನ ತವರು ಮನೆಗೆ ಮಕ್ಕಳೊಂದಿಗೆ ಬಂದಿದ್ದಳು.
ಶನಿವಾರ ರಾತ್ರಿ ಭಾಸ್ಕರ್ ಮಹಿಳೆ ಮನೆಗೆ ಬಂದು ಬೇರೆ ಮನೆ ಮಾಡಿಕೊಡುವುದಾಗಿ ಭರವಸೆ ನೀಡಿ, ಆಕೆಯನ್ನು ಮಕ್ಕಳ ಜತೆ ಆಟೋದಲ್ಲಿ ಕರೆದುಕೊಂಡು ಹೋಗುತ್ತಿದ್ದ. ಇಬ್ಬರು ಮಕ್ಕಳ ಪೈಕಿ ಹಿರಿಯ ಮಗ ಆಟೋದಿಂದಿಳಿದು, ಸೋದರ ಮಾವ ಮುನಿರಾಜುಗೆ ಕರೆ ಮಾಡಿ ಮಾಹಿತಿ ನೀಡಿದ್ದ. ಮುನಿರಾಜು ತನ್ನ ಆಟೋದಲ್ಲಿಇತರ ಸ್ನೇಹಿತರನ್ನು ಕರೆದುಕೊಂಡು ಸುಂಕದಕಟ್ಟೆ ಬಳಿ ಸಹೋದರಿ ಮತ್ತು ಭಾಸ್ಕರ್ ಇದ್ದ ಆಟೋವನ್ನು ಅಡ್ಡಗಟ್ಟಿದ್ದ. ನಂತರ ಸಹೋದರಿಯನ್ನು ಮನೆಯಲ್ಲಿ ಬಿಟ್ಟು ಭಾಸ್ಕರ್ನನ್ನು ಕೆಬ್ಬೇ ಹಳ್ಳದ ಬಳಿಯ ನಿರ್ಜನ ಪ್ರದೇಶಕ್ಕೆ ಆಟೋದಲ್ಲಿ ಕರೆದೊಯ್ದು ಸಹಚರರ ಜತೆ ಸೇರಿ ಹಲ್ಲೆ ನಡೆಸಿದ್ದ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಎಂಕೆ ನಿರ್ಗಮನಕ್ಕೆ ಕ್ಷಣಗಣನೆ ಆರಂಭ, ಎನ್‌ಡಿಎ ಸರ್ಕಾರ ರಚನೆ: ಪ್ರಧಾನಿ ನರೇಂದ್ರ ಮೋದಿ

ಪವಿತ್ರಾ ಗೌಡಗೆ ಮನೆಯೂಟಕ್ಕೆ ಕೋರ್ಟ್ ನಿರಾಕರಣೆ, ಅಲೋಕ್ ಕುಮಾರ್ ಅಚ್ಚರಿ ಹೇಳಿಕೆ

ಮಕ್ಕಳ ಸುರಕ್ಷತೆಗಾಗಿ ಬೆಳ್ಳಂಬೆಳ್ಳಗ್ಗೆ ಡ್ಯೂಟಿಗಿಳಿದ ಖಾಕಿ, ಸಿಕ್ಕಿಬಿದ್ದವರಾರು ಗೊತ್ತಾ

ಇದೆಲ್ಲಾ ಕಾಂಗ್ರೆಸ್‌ನವರ ರಾಜಕೀಯ ನಾಟಕ: ಎಚ್‌ಡಿ ಕುಮಾರಸ್ವಾಮಿ

ಚುನಾವಣೆಯಲ್ಲಿ ಬಿಜೆಪಿಗೆ ಅಧಿಕಾರ ಕೊಡಿ, ಶಬರಿಮಲೆ ಚಿನ್ನ ಕಳವು ತನಿಖೆ, ಮೋದಿ

ಮುಂದಿನ ಸುದ್ದಿ
Show comments