ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರು ರವರಿಂದ ಮತ ಎಣಿಕೆ ಕೇಂದ್ರಗಳ ವೀಕ್ಷಣೆ

Webdunia
ಸೋಮವಾರ, 8 ಮೇ 2023 (17:40 IST)
bbmp
ಜಿಲ್ಲಾ ಚುನಾವಣಾಧಿಕಾರಿ-ಬೆಂಗಳೂರು ವ್ಯಾಪ್ತಿಯಲ್ಲಿ 28 ವಿಧಾನಸಭಾ ಕ್ಷೇತ್ರಗಳ ಪೈಕಿ ಮತ ಎಣಿಕೆ ಕಾರ್ಯವು 4 ವಿವಿಧ ಸ್ಥಳಗಳಲ್ಲಿ ನಡೆಯಲಿದೆ. ಈ ಪೈಕಿ ನಾಲ್ಕೂ ಮತ ಎಣಿಕೆ ಕೇಂದ್ರಗಳಲ್ಲಿ ಮತ ಎಣಿಕೆ ಕಾರ್ಯಕ್ಕೆ ಸಂಬಂಧಿಸಿದ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಮಾನ್ಯ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ತಿಳಿಸಿದರು. 
 
ನಗರದಲ್ಲಿರುವ ಸೆಂ. ಜೋಸೆಫ್ ಇಂಡಿಯನ್ ಹೈ ಸ್ಕೂಲ್ ನಲ್ಲಿರುವ ಮತ ಎಣಿಕೆ ಕೇಂದ್ರಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತ ಎಣಿಕೆಯ ಸಿಬ್ಬಂದಿ 3 ವಿಧದಲ್ಲಿ ಇರಲಿದ್ದು, ಪ್ರತಿ ಟೇಬಲ್ ಗೆ ಮೈಕ್ರೋ ಅಬ್ಸರ್ವರ್, ಮತ ಎಣಿಕೆ ಮೇಲ್ವಿಚಾರಕರು ಮತ್ತು ಮತ ಎಣಿಕೆ ಸಹಾಯಕರನ್ನು ನಿಯೋಜನೆ ಮಾಡಲಾಗುತ್ತದೆ. ಪ್ರತಿ ಎಣಿಕಾ ಕೊಠಡಿಗೆ ಸಾಮಾನ್ಯವಾಗಿ 10 ರಿಂದ 14 ಟೇಬಲ್ ಗಳ ವ್ಯವಸ್ಥೆ ಮಾಡಲಾಗಿರುತ್ತದೆ. ಅದರಲ್ಲಿ 2 ಟೇಬಲ್ ಗಳನ್ನು ಪೋಸ್ಟಲ್ ಬ್ಯಾಲೆಟ್ ಮತಗಳ ಎಣಿಕೆಗೆ ಮೀಸಲಿಡಲಾಗಿರುತ್ತದೆ ಎಂದು ಹೇಳಿದರು.
 
ಬೆಂಗಳೂರು ನಗರದ ಅಪರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿಯಾದ ಡಾ. ದಯಾನಂದ್ ರವರು ಮಾತನಾಡಿ, ಸಾರ್ವತ್ರಿಕ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯವು ಮೇ. 13 ರಂದು ನಡೆಯಲಿದ್ದು, ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಪ್ರತಿ ಟೇಬಲ್ ಗಳಿಗೂ ವೆಬ್ ಕಾಸ್ಟಿಂಗ್ ವ್ಯವಸ್ಥೆಯಿರುತ್ತದೆ. ಎಣಿಕಾ ಮೇಲ್ವಿಚಾರಕರು ಹಾಗೂ ಎಣಿಕಾ ಸಹಾಕರಿಗೆ ಈಗಾಗಲೇ ತರಬೇತಿಯನ್ನು ಸಹಾ ನೀಡಲಾಗಿದೆ. ಮೇ 12 ರಂದು, ಮೈಕ್ರೋ ಅಬ್ಸರ್ವರ್ಸ್, ಎಣಿಕಾ ಮೇಲ್ವಿಚಾರಕರು ಹಾಗೂ ಎಣಿಕಾ ಸಹಾಕರಿಗೆ ಮತ್ತೊಂದು ಬಾರಿ ತರಬೇತಿಯನ್ನು ನೀಡಲಾಗುವುದು. ಎಲ್ಲಾ ಕಡೆ ಸಿಸಿ ಕ್ಯಾಮೆರಾಗಳ ಅಳವಡಿಕೆ ಮಾಡಿದ್ದು, ಮೂರು ಹಂತದದಲ್ಲಿ ಪೊಲೀಸ್ ಭದ್ರತಾ ವ್ಯವಸ್ಥೆ ಮಾಡಲಾಗುತ್ತದೆ. ಆವರಣದಲ್ಲಿ ಪಾರ್ಕಿಂಗ್ ವ್ಯಸವ್ಥೆ ಮಾಡಲಾಗಿದೆ ಎಂದು ಹೇಳಿದರು.
 
ಬೆಂಗಳೂರು ನಗರ ವ್ಯಾಪ್ತಿಯಲ್ಲಿ 7 ವಿಧಾನಸಭಾ ಕ್ಷೇತ್ರಗಳು ಬರಲಿದ್ದು, ಯಲಹಂಕ ಹಾಗೂ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರಗಳಲ್ಲಿ 16ಕ್ಕೂ ಹೆಚ್ಚು ಅಭ್ಯರ್ಥಿಗಳಿರುವುದರಿಂದ 2 ಬ್ಯಾಲೇಟ್ ಯುನಿಟ್ ಗಳು ಬರಲಿವೆ. ಉಳಿದ ವಿಧಾನಸಭಾ ಕ್ಷೇತ್ರಗಳಿಗೆ 1 ಬ್ಯಾಲೇಟ್ ಯುನಿಟ್ ಗಳು ಬರಲಿವೆ ಎಂದು ತಿಳಿಸಿದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿಗಣತಿ ನೆಪ, ಫ್ರೀ ಕರೆಂಟ್ ಕಟ್ ಮಾಡಲು ಸರ್ಕಾರದಿಂದ ಪ್ಲ್ಯಾನ್: ಆರ್ ಅಶೋಕ್ ವಾಗ್ದಾಳಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ರಸ್ತೆ ಬಗ್ಗೆ ಪ್ರಶ್ನೆ ಕೇಳಿದ್ರೆ ಪತ್ರಕರ್ತರನ್ನೇ ಬಿಜೆಪಿಗೆ ಸೇರ್ಕೊಳ್ಳಿ ಎಂದ ಪ್ರದೀಪ್ ಈಶ್ವರ್ ವಿರುದ್ಧ ಭಾರೀ ಆಕ್ರೋಶ

ಎಸ್ ಎಲ್ ಭೈರಪ್ಪನವರಿಗೆ ನಾಳೆ ಅಂತಿಮ ವಿದಾಯ

Karnataka Weather: ಬೆಂಗಳೂರು ಸೇರಿ ಈ ಜಿಲ್ಲೆಗಳಿಗೆ ಇಂದು ಭಾರೀ ಮಳೆ ನಿರೀಕ್ಷೆ

ಮುಂದಿನ ಸುದ್ದಿ
Show comments