Webdunia - Bharat's app for daily news and videos

Install App

ನಕಲಿ ದಾಖಲಾತಿ ಸೃಷ್ಟಿಸಿ ವಿದೇಶಿ ಪ್ರಜೆ ಆಕ್ರಮ ವಾಸ

Webdunia
ಶನಿವಾರ, 30 ಜುಲೈ 2022 (10:44 IST)
ನಕಲಿ ದಾಖಲಾತಿ ಸೃಷ್ಟಿಸಿ ವಿದೇಶಿ ಪ್ರಜೆಗಳ ವೀಸಾ ಮತ್ತು ಪಾಸ್‌ಪೋರ್ಟ್ ನವೀಕರಿಸಲು ಭಾರತದಲ್ಲಿ ಸುಮಾರು 17 ವರ್ಷಗಳಿಂದ ಅಕ್ರಮವಾಗಿ ವಾಸ್ತವಿಕವಾಗಿ ಹೂಡಿದ್ದ ಉಗಾಂಡ ದೇಶದ ಪ್ರಜೆಯನ್ನು ಗಡೀಪಾರು ಮಾಡಲಾಗಿದೆ.
 ಬೋಸ್ಕೋ ಕಾವೇಸಿ ಗಡಿಪಾರಾದ ಉಗಾಂಡ ಮೂಲದ ಅರೋಪಿಯಾಗಿದ್ದಾನೆ‌. ಈತನ ವೀಸಾ ಅವಧಿ 2005ರಲ್ಲಿ ಮುಗಿದರೂ ಅಕ್ರಮವಾಗಿ ವಾಸವಾಗಿದ್ದ. ಭಾರತೀಯ ಯುವತಿಯನ್ನು ಮದುವೆಯಾಗಿದ್ದ. ದೇಶದಲ್ಲಿ ನೆಲೆಸಲು ಅವಕಾಶ ಕೋರಿ ಹೈಕೋರ್ಟ್ ಮೊರೆ ಹೋಗಿದ್ದ. ಈತನ ಅರ್ಜಿಯನ್ನ 2022ರಲ್ಲಿ ಅರ್ಜಿ ತಿರಸ್ಕರಿಸಿತ್ತು. ಈ ಸಂಬಂಧ ವಿದೇಶಿ ನೋಂದಣಿ‌ ಕೇಂದ್ರ(ಎಫ್ಐಆರ್ ಓ) ಕೇಂದ್ರ ಗೃಹ ಸಚಿವಾಲಯಕ್ಕೆ‌ ನೀಡಿದ ಮಾಹಿತಿ ಮೇರೆಗೆ ದೆಹಲಿ ಇಮಿಗ್ರೇಷನ್‌ ಅಧಿಕಾರಿಗಳು ಜುಲೈ19ರಂದು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದರು. ಬಾಣಸವಾಡಿ ಪೊಲೀಸರ ಸಹಾಯದಿಂದ  ಕೋರ್ಟ್ ನಿಂದ ಸರ್ಚ್ ವಾರೆಂಟ್ ಪಡೆದು ಪರಿಶೀಲಿಸಿದಾಗ 26 ವಿದೇಶಿಯರ ಪಾಸ್ ಪೋರ್ಟ್  ಗಳನ್ನ ಜಪ್ತಿ ಮಾಡಿಕೊಂಡಿರುವುದಾಗಿ ನಗರ ಪೊಲೀಸ್ ಆಯುಕ್ತ ಪ್ರತಾಪ್‌ ರೆಡ್ಡಿ ತಿಳಿಸಿದ್ದಾರೆ.
 
1995ರಲ್ಲಿ ಸ್ಟೂಡೆಂಟ್ ವೀಸಾದಡಿ ಭಾರತಕ್ಕೆ ಬೋಸ್ಕೋ ಕಾವೇಸಿ ಬಂದಿದ್ದ. ಈತನ ವೀಸಾ ಅವಧಿ 2005ರಲ್ಲಿ ಮುಗಿದಿತ್ತು 2006 ರಲ್ಲಿ ಅನಧಿಕೃತ ವಾಸ ಆರು ತಿಂಗಳ ಸಜೆಯಾಗಿತ್ತು. ದೇಶ ಬಿಟ್ಟು ಹೋಗುವಂತೆ ನೋಟಿಸ್ ಜಾರಿ ಮಾಡಿದರೂ ಅಕ್ರಮವಾಗಿ ಇಲ್ಲೇ ಉಳಿದುಕೊಂಡಿದ್ದ. ನೋಟಿಸ್ ಪ್ರಶ್ನಿಸಿ ಮೆಟ್ಟಿಲೇರಿದ್ದ. ಭಾರತೀಯ ಯುವತಿಯನ್ನು ಮದುವೆಯಾಗಿದ್ದು ದೇಶದಲ್ಲಿ ನೆಲೆಸಿದ್ದರು. ವಿಚಾರಣೆ ನಡೆಸಿದ್ದ ಕೋರ್ಟ್ 2022 ರಲ್ಲಿ ಈತನ ಅರ್ಜಿ ತಿರಸ್ಕೃತಗೊಳಿಸಿತ್ತು ಎಂದು ನ್ಯಾಯಾಲಯ ಆದೇಶ ಹೊರಡಿಸಿದೆ.
ವೈಯಕ್ತಿಕ ಲಾಭಕ್ಕಾಗಿ ವಿದೇಶಿಯರಿಗೆ ಅನುಕೂಲ ಮಾಡಿಕೊಡುವುದಾಗಿ ನಟಿಸುವುದು ಅನಗತ್ಯವಾಗಿ ಅವರಿಂದ ಹಣ ಪಡೆಯುತ್ತಿತ್ತು. ಅಕ್ರಮವಾಗಿ ನೆಲೆಸಿರುವ ವಿದೇಶಿಯರಿಗೆ ನಕಲಿ ದಾಖಲಾತಿ ನೀಡುತ್ತಿದ್ದ. ಮಾನವ ಕಳ್ಳಸಾಗಣೆ, ಬಲವಂತವಾಗಿ ಹಣ ಪಡೆಯುವುದು, ವಂಚನೆ ಸೇರಿದಂತೆ ಕಾನೂನುಬಾಹಿರವಾಗಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಮುಂದಿನ ಸುದ್ದಿ
Show comments