Webdunia - Bharat's app for daily news and videos

Install App

ಕಪಾಳಕ್ಕೆ ಬಾರಿಸಿದರೆ ಹಲ್ಲುದುರುತ್ತದೆ: ಅಧಿಕಾರಿಗೆ ಶಾಸಕ

Webdunia
ಶನಿವಾರ, 30 ಜುಲೈ 2016 (08:38 IST)
'ಕಪಾಳಕ್ಕೆ ಬಾರಿಸಿದರೆ ಹಲ್ಲುದುರುತ್ತದೆ', ಅರಣ್ಯ ಇಲಾಖೆ ಅಧಿಕಾರಿಗಳೊಬ್ಬರಿಗೆ ಶಾಸಕ ಸತೀಶ್ ರೆಡ್ಡಿ ತರಾಟೆ ತೆಗೆದುಕೊಂಡ ರೀತಿ ಇದು.

ಅಬ್ಬರಿಸುತ್ತಿರುವ ಮಳೆಯಿಂದಾಗಿ  ಜಲಾವೃತವಾಗಿರುವ ಕೋಡಿಚಿಕ್ಕನಹಳ್ಳಿ, ಪುಟ್ಟೆಗನಹಳ್ಳಿಯಲ್ಲಿ ಶಾಸಕರು ನಿನ್ನೆ ಮುಂಜಾನೆಯಿಂದಲೇ ಪರಿವೀಕ್ಷಣೆಯಲ್ಲಿ ತೊಡಗಿದ್ದರು. ಆದರೆ ಅರಣ್ಯ ಇಲಾಖೆಯಿಂದ ಯಾರೊಬ್ಬರು ಅಲ್ಲಿಗೆ ಭೇಟಿ ನೀಡದೆ ಬೇಜವಾಬ್ದಾರಿ ತೋರಿಸಿದ್ದಾರೆ.ಅಷ್ಟೊಂದು ಸಮಸ್ಯೆಯಾದರೂ ಪತ್ತೆಯೇ ಇಲ್ಲದ ಅಧಿಕಾರಿಗಳು ಸಂಜೆಹೊತ್ತಿಗೆ ಆಗಮಿಸಿದಾಗ ಶಾಸಕರ ಕೋಪ ನೆತ್ತಿಗೇರಿದೆ. ಸ್ಥಳಕ್ಕಾಗಮಿಸಿದ ಅರಣ್ಯಾಧಿಕಾರಿಗಳಾದ ಡಿಸಿಎಫ್ ದೀಪಿಕಾ ಮತ್ತು ಅಧಿಕಾರಿ ಹರ್ಷವರ್ಧನ್ ವಿರುದ್ಧ ಜನರು ಧಿಕ್ಕಾರ ಕೂಗಲು ಆರಂಭಿಸಿದರು. ಎಲ್ಲ ಮುಗಿದು ಹೋದ ಮೇಲೆ ಬಂದೇನು ಪ್ರಯೋಜನ ಎಂದು ಪ್ರಶ್ನಿಸಿದರು.

ಜನರ ಆಕ್ರೋಶಕ್ಕೆ ಸಾಥ್ ನೀಡಿದ ಶಾಸಕರು ನಾನು ಹಲವು ಬಾರಿ ಕಾಲ್ ಮಾಡಿದ್ದೇನೆ. ಯಾಕೆ ಕಾಲ್ ರಿಸಿವ್ ಮಾಡಿಲ್ಲ. ಕೆನ್ನೆಗೆ ಬಾರಿಸಿದರೆ ಹಲ್ಲು ಉದುರುತ್ತದೆ, ಎಂದು ಅರಣ್ಯ ಇಲಾಖೆ ಅಧಿಕಾರಿ ಹರ್ಷವರ್ಧನ್ ಅವರನ್ನು ತರಾಟೆಗೆ ತೆಗೆದುಕೊಂಡರು.

ತಾವಾಡಿದ ಒರಟು ಮಾತುಗಳನ್ನು ಸಮರ್ಥಿಸಿಕೊಂಡ ಶಾಸಕರು 350ಕ್ಕಿಂತ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಕರೆ ಮಾಡಿದರೆ ಅರಣ್ಯ ಇಲಾಖೆಯಲ್ಲಿ ಯಾರೂ ಪ್ರತಿಕ್ರಿಯಿಸುವುದಿಲ್ಲ. ಬಿಸಿ ಮುಟ್ಟಿಸದಿದ್ದರೆ ಅವರು ಕೆಲಸವನ್ನು ಸರಿಯಾಗಿ ಮಾಡುವುದಿಲ್ಲ. ಜನರಿಂದ ನಾವು ಕಪಾಳಕ್ಕೆ ಹೊಡೆಸಿಕೊಳ್ಳಬೇಕಾಗುತ್ತದೆ. ಇಲಾಖೆಯ ಅಡಿಯಲ್ಲಿ ಬರುವ ಕೆರೆಯ ಹೂಳನ್ನು ತೆಗೆದಿಲ್ಲ. ಹೀಗಾಗಿ ಇಷ್ಟೊಂದು ಸಮಸ್ಯೆ ಉದ್ಭವಿಸಿದೆ. ನಾನು ಸುಖಾಸುಮ್ಮನೆ ಬೈದಿಲ್ಲ ಎಂದು ಹೇಳಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿಬೆಟ್ಟದಿಂದ ಸಚಿವ ಸಂಪುಟ ಸಭೆ ವಿಧಾನಸೌಧಕ್ಕೆ ಶಿಫ್ಟ್: ಮಾವು ಬೆಳೆಗಾರರ ಕೋಪಕ್ಕೆ ಹೆದರಿದ ಸರ್ಕಾರ

ಕರ್ನಾಟಕದಲ್ಲಿ ಕೆಲಸದ ಅವಧಿ 10 ಗಂಟೆಗೆ ಹೆಚ್ಚಿಸಬೇಕೇ, ನಿಮ್ಮ ಅಭಿಪ್ರಾಯವೇನು

ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆಂಧ್ರ ಮಾಜಿ ಸಚಿವ ಅರೆಸ್ಟ್: ಕಾರಣವೇನು ಗೊತ್ತಾ

ವಿಮಾನ ದುರಂತ: ಸಹೋದರನ ಶವಕ್ಕೆ ಹೆಗಲುಕೊಟ್ಟು ಬಿಕ್ಕಿಬಿಕ್ಕಿ ಅತ್ತ ವಿಶ್ವಾಸ್ ರಮೇಶ್ ವಿಡಿಯೊ ಇಲ್ಲಿದೆ

ರಾಷ್ಟ್ರೀಯ ಹೆದ್ದಾರಿಯಲ್ಲಿ ದಿನನಿತ್ಯ ಸಂಚರಿಸುವವರಿಗೆ ಗುಡ್‌ನ್ಯೂಸ್‌ ಕೊಟ್ಟ ಕೇಂದ್ರ ಸರ್ಕಾರ

ಮುಂದಿನ ಸುದ್ದಿ
Show comments