Publish Date: Sat, 22 Aug 2026 (17:47 IST)
Updated Date: Sat, 22 Aug 2026 (17:54 IST)
ಬೆಂಗಳೂರು: ಮಾಧ್ಯಮಗಳಲ್ಲಿ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಸಂಬಂಧ ಸುದ್ದಿ ಪ್ರಕಟವಾಗುತ್ತಿದ್ದ ಹಾಗೇ ಅವರು ನಾಪತ್ತೆಯಾಗಿಲ್ಲ, ಅವರ ತಂದೆ ಅನಾರೋಗ್ಯದ ಹಿನ್ನೆಲೆ ಊರಿಗೆ ಹೋಗಿದ್ದಾರೆಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ ನೀಡದರು.
ಪಶುವೈದ್ಯಧಾರಿ ಪರೀಕ್ಷೆ ಅಕ್ರಮ ಸಂಬಂಧ ಕೆಪಿಎಸ್ಸಿ ಕಚೇರಿ, ಸೇರಿದಂತೆ ಹಲವು ಕಡೆಗಳಲ್ಲಿ ಇ.ಡಿ. ಅಧಿಕಾರಿಗಳು ದಾಳಿ ನಡೆಸಿದ ನಂತರ ಪರೀಕ್ಷೆ ಕಂಟ್ರೋಲರ್ ಆಗಿ ಕೆಲಸ ಮಾಡಿದ್ದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆಯಾಗಿದ್ದಾರೆ ಅನ್ನೋ ಆರೋಪ ಕೇಳಿ ಬಂದಿತ್ತು.
ದೆಹಲಿಗೆ ತೆರಳಲು ವಿಮಾನ ಟಿಕೆ ಬುಕ್ ಮಾಡಿದ್ದ ಅಧಿಕಾರಿ ಆಗಸ್ಟ್ 20 ರಂದು ದೆಹಲಿಗೆ ತೆರಳಿದ್ದಾರೆ. ಅಂದು ಮಧ್ಯಾಹ್ನ 3 ಗಂಟೆಯ ಫ್ಲೈಟ್ಗೆ 1 ಗಂಟೆ 31 ನಿಮಿಷಕ್ಕೆ ಟಿಕೆಟ್ ಬುಕ್ಕಿಂಗ್ ಆಗಿದೆ. ಒಂದೂವರೆ ಗಂಟೆ ಮುಂಚಿತವಾಗಿ ಜ್ಞಾನೇಂದ್ರ ಕುಮಾರ್ 30,253 ರೂಪಾಯಿ ಹಣ ನೀಡಿ ತರಾತುರಿಯಲ್ಲಿ ಟಿಕೆಟ್ ಬುಕ್ಕಿಂಗ್ ಮಾಡಿರುವುದು ಕಂಡುಬಂದಿತ್ತು. ಈ ಸಂಬಂಧ ಹಿರಿಯ ಐಎಎಸ್ ಅಧಿಕಾರಿಯೊಬ್ಬರು ಜ್ಞಾನೇಂದ್ರ ಕುಮಾರ್ ಅವರನ್ನ ಪತ್ತೆಮಾಡುವಂತೆ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದ್ರು.
ಅಧಿಕಾರಿಗಳು ಪರಿಶೀಲಿಸಿದ ಬಳಿಕ ಮಾಹಿತಿ ಪಡೆದು ಮಾತನಾಡಿದ ಗೃಹಸಚಿವ ಪ್ರಿಯಾಂಕ್ ಖರ್ಗೆ ಅವರು, ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆಯಾಗಿಲ್ಲ. ಅವರ ತಂದೆಗೆ ಹೃದಯ ಸಂಬಂಧ ಕಾಯಿಲೆ ವಿಚಾರ ತಿಳಿದು ಇದೀಗ ತುರ್ತಾಗಿ ಉತ್ತರ ಪ್ರದೇಶಕ್ಕೆ ತೆರಳಿದ್ದಾರೆ.
ಹೋಗುವಾಗ ಮೇಲ್ ಮೂಲಕ ಮೇಲಾಧಿಕಾರಿಗೆ ತಿಳಿಸಿದ್ದಾರೆ. ಆದ್ರೆ ನಿನ್ನೆ ಹಬ್ಬದ ಇದ್ದ ಕಾರಣ ನೋಡಿಕೊಂಡಿಲ್ಲ. ಇನ್ನೂ ಎರಡು ದಿನದಲ್ಲಿ ಅವರ ಬೆಂಗಳೂರಿಗೆ ವಾಪಸು ಬರಲಿದ್ದಾರೆ. ಯಾವುದೇ ಐಟಿ, ಇಡಿ ಭಯದಿಂದ ಎಸ್ಕೇಪ್ ಆಗಿಲ್ಲ ಎಂದಿದ್ದಾರೆ.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ