Webdunia - Bharat's app for daily news and videos

Install App

ರೈಲ್ವೆ ನಿಲ್ದಾಣದಲ್ಲಿ 16 ಕೋಟಿ ಮೌಲ್ಯದ 32 ಕೆ.ಜಿ ಚಿನ್ನ ವಶಪಡಿಸಿಕೊಂಡ ಅಧಿಕಾರಿಗಳು

Webdunia
ಗುರುವಾರ, 3 ಮಾರ್ಚ್ 2022 (18:38 IST)
ಕೋನಾರ್ಕ್ ಎಕ್ಸ್ ಪ್ರೆಸ್‍ನಲ್ಲಿ ಸಾಗಿಸುತ್ತಿದ್ದ ಸುಮಾರು 16 ಕೋಟಿ ಮೌಲ್ಯದ 32 ಕೆ.ಜಿ ಚಿನ್ನವನ್ನು ಗವರ್ನ್‍ಮೆಂಟ್ ರೈಲ್ವೇ ಪೊಲೀಸ್(GRP) ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಮುಂಬೈಯಿಂದ ಮಂಗಳವಾರ ರಾತ್ರಿ 11.30ರ ಸುಮಾರಿಗೆ ಭುವನೇಶ್ವರಕ್ಕೆ ಆಗಮಿಸಿದ ರೈಲಿನಲ್ಲಿ ಅಕ್ರಮ ಚಿನ್ನ ಪತ್ತೆಯಾಗಿದ್ದು, ಬುಧವಾರ ಅವುಗಳನ್ನು ವಶಕ್ಕೆ ಪಡೆಯಲಾಗಿದೆ. ಜೊತೆಗೆ ನಾಲ್ವರನ್ನು ಕೂಡ ವಶಕ್ಕೆ ಪಡೆದುಕೊಳ್ಳಲಾಗಿದೆ.
ಅಧಿಕಾರಿಗಳ ವಶವಾದ ನಾಲ್ವರನ್ನು ಹಸ್ಮುಖಲಾಲ್ ದೀಕ್ಷಿತ್, ಮಹೇಶ್ ಭೋಮ್ಸರ್, ಸುರೇಶ್ ಸಹದೇವ್ ಖರೆ ಮತ್ತು ದೀಪಕ್ ಪಟೇಲ್ ಎಂದು ಗುರುತಿಸಲಾಗಿದೆ. ಸರಕು ಮತ್ತು ಸೇವಾ ತೆರಿಗೆ(GST) ದಾಖಲೆಗಳನ್ನು ಸಲ್ಲಿಸಲು ವಿಫಲರಾದ ಹಿನ್ನೆಲೆಯಲ್ಲಿ ವಿಚಾರಣೆಗಾಗಿ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಆರ್ ಪಿ  ಸ್ಪಷ್ಟಪಡಿಸಿದೆ.ನಾಲ್ವರು ವ್ಯಕ್ತಿಗಳು ಮುಂಬೈಯಿಂದ ನಾಲ್ಕು ಬ್ಯಾಗ್ ಗಳ ಜೊತೆ ಬಂದಿದ್ದರು. ಒಂದೊಂದು ಬ್ಯಾಗ್ ನಲ್ಲಿ ಸುಮಾರು 8 ಕೆ.ಜಿಯಷ್ಟು ಬಂಗಾರ ತುಂಬಿದ್ದರು. ಭುವನೇಶ್ವರದಲ್ಲಿ ಚಿನ್ನದ ವ್ಯಾಪಾರಿಗಳಿಗೆ ಮಾರಾಟ ಮಾಡುವುದು ಅವರ ಪ್ಲ್ಯಾನ್ ಆಗಿತ್ತು. ಈ ವೇಳೆ ನಾಲ್ವರು ವ್ಯಕ್ತಿಗಳ ಮೇಲೆ ಅನುಮಾನ ಬಂದು ಪರಿಶೀಲನೆ ನಡೆಸಿದಾಗ ಚಿನ್ನ ಸಾಗಾಟ ಮಾಡುತ್ತಿರುವುದು ಬಯಲಾಗಿದೆ ಎಂದು ಭುವನೇಶ್ವರದ ಜಿಆರ್ ಪಿ ಇನ್ಸ್ ಪೆಕ್ಟರ್ ತಿಳಿಸಿದ್ದಾರೆ.ಈ ಆಭರಣಗಳಿಗೆ ಅವರು ತೆರಿಗೆ ಪಾವತಿಸುತ್ತಿರಲಿಲ್ಲ. ಹೀಗಾಗಿ ಈ ಚಿನ್ನವನ್ನು ಯಾರಿಗೆ ನೀಡುತ್ತಿದ್ದೇವೆ ಎಂಬುದನ್ನು ಸರಿಯಾಗಿ ಬಾಯಿಬಿಟ್ಟಿಲ್ಲ. ಒಟ್ಟಿನಲ್ಲಿ ಈ ಸಂಬಂಧ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಇತ್ತ 32 ಕೆ.ಜಿ ಚಿನ್ನವನ್ನು ಜಿಆರ್‍ಪಿ ಅಧಿಕಾರಿಗಳು ಕೈಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟರ್ಕಿ ಮೇಲೆ ಒಂದೊಂದೆ ಪ್ರತೀಕಾರ ತೀರಿಸುತ್ತಿರುವ ಭಾರತ: ವಿಮಾನಯಾನ ಸಂಸ್ಥೆಯ ಲೈಸನ್ಸ್‌ ರದ್ದು ಮಾಡಿದ ಭಾರತ

ಸೋಫಿಯಾ ಖುರೇಷಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಬೆಳಗಾವಿಯಲ್ಲಿ ವಿಜಯ್ ಶಾ ವಿರುದ್ಧ ದೂರು

ಸೇನಾಧಿಕಾರಿ ಖುರೇಷಿ ಅತ್ತೆ ಮಾವನ ಮನೆ ಮೇಲೆ ದಾಳಿ ಪೋಸ್ಟ್‌: ಮೂವರ ವಿರುದ್ಧ ಪ್ರಕರಣ ದಾಖಲು

ಬರ್ತಡೇ ಆಚರಿಸಲ್ಲ ಅಂತಾ ಹೇಳಿ ನೆನಪಿನಲ್ಲಿ ಉಳಿದುಕೊಳ್ಳುವ ಹಾಗೇ ದಿನ ಕಳೆದ ಡಿಸಿಎಂ ಡಿಕೆ ಶಿವಕುಮಾರ್‌: Video

ಪಾಕ್‌ಗೆ ಸಹಾಯ ಮಾಡಿದ ಟರ್ಕಿ: ಟರ್ಕಿ ಆ್ಯಪಲ್ ಬ್ಯಾನ್ ಮಾಡಲು ಭಾರತದಲ್ಲಿ ಹೆಚ್ಚಿದ ಒತ್ತಾಯ

ಮುಂದಿನ ಸುದ್ದಿ
Show comments