Webdunia - Bharat's app for daily news and videos

Install App

ರೈಲ್ವೆ ನಿಲ್ದಾಣದಲ್ಲಿ 16 ಕೋಟಿ ಮೌಲ್ಯದ 32 ಕೆ.ಜಿ ಚಿನ್ನ ವಶಪಡಿಸಿಕೊಂಡ ಅಧಿಕಾರಿಗಳು

Webdunia
ಗುರುವಾರ, 3 ಮಾರ್ಚ್ 2022 (18:38 IST)
ಕೋನಾರ್ಕ್ ಎಕ್ಸ್ ಪ್ರೆಸ್‍ನಲ್ಲಿ ಸಾಗಿಸುತ್ತಿದ್ದ ಸುಮಾರು 16 ಕೋಟಿ ಮೌಲ್ಯದ 32 ಕೆ.ಜಿ ಚಿನ್ನವನ್ನು ಗವರ್ನ್‍ಮೆಂಟ್ ರೈಲ್ವೇ ಪೊಲೀಸ್(GRP) ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಮುಂಬೈಯಿಂದ ಮಂಗಳವಾರ ರಾತ್ರಿ 11.30ರ ಸುಮಾರಿಗೆ ಭುವನೇಶ್ವರಕ್ಕೆ ಆಗಮಿಸಿದ ರೈಲಿನಲ್ಲಿ ಅಕ್ರಮ ಚಿನ್ನ ಪತ್ತೆಯಾಗಿದ್ದು, ಬುಧವಾರ ಅವುಗಳನ್ನು ವಶಕ್ಕೆ ಪಡೆಯಲಾಗಿದೆ. ಜೊತೆಗೆ ನಾಲ್ವರನ್ನು ಕೂಡ ವಶಕ್ಕೆ ಪಡೆದುಕೊಳ್ಳಲಾಗಿದೆ.
ಅಧಿಕಾರಿಗಳ ವಶವಾದ ನಾಲ್ವರನ್ನು ಹಸ್ಮುಖಲಾಲ್ ದೀಕ್ಷಿತ್, ಮಹೇಶ್ ಭೋಮ್ಸರ್, ಸುರೇಶ್ ಸಹದೇವ್ ಖರೆ ಮತ್ತು ದೀಪಕ್ ಪಟೇಲ್ ಎಂದು ಗುರುತಿಸಲಾಗಿದೆ. ಸರಕು ಮತ್ತು ಸೇವಾ ತೆರಿಗೆ(GST) ದಾಖಲೆಗಳನ್ನು ಸಲ್ಲಿಸಲು ವಿಫಲರಾದ ಹಿನ್ನೆಲೆಯಲ್ಲಿ ವಿಚಾರಣೆಗಾಗಿ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಆರ್ ಪಿ  ಸ್ಪಷ್ಟಪಡಿಸಿದೆ.ನಾಲ್ವರು ವ್ಯಕ್ತಿಗಳು ಮುಂಬೈಯಿಂದ ನಾಲ್ಕು ಬ್ಯಾಗ್ ಗಳ ಜೊತೆ ಬಂದಿದ್ದರು. ಒಂದೊಂದು ಬ್ಯಾಗ್ ನಲ್ಲಿ ಸುಮಾರು 8 ಕೆ.ಜಿಯಷ್ಟು ಬಂಗಾರ ತುಂಬಿದ್ದರು. ಭುವನೇಶ್ವರದಲ್ಲಿ ಚಿನ್ನದ ವ್ಯಾಪಾರಿಗಳಿಗೆ ಮಾರಾಟ ಮಾಡುವುದು ಅವರ ಪ್ಲ್ಯಾನ್ ಆಗಿತ್ತು. ಈ ವೇಳೆ ನಾಲ್ವರು ವ್ಯಕ್ತಿಗಳ ಮೇಲೆ ಅನುಮಾನ ಬಂದು ಪರಿಶೀಲನೆ ನಡೆಸಿದಾಗ ಚಿನ್ನ ಸಾಗಾಟ ಮಾಡುತ್ತಿರುವುದು ಬಯಲಾಗಿದೆ ಎಂದು ಭುವನೇಶ್ವರದ ಜಿಆರ್ ಪಿ ಇನ್ಸ್ ಪೆಕ್ಟರ್ ತಿಳಿಸಿದ್ದಾರೆ.ಈ ಆಭರಣಗಳಿಗೆ ಅವರು ತೆರಿಗೆ ಪಾವತಿಸುತ್ತಿರಲಿಲ್ಲ. ಹೀಗಾಗಿ ಈ ಚಿನ್ನವನ್ನು ಯಾರಿಗೆ ನೀಡುತ್ತಿದ್ದೇವೆ ಎಂಬುದನ್ನು ಸರಿಯಾಗಿ ಬಾಯಿಬಿಟ್ಟಿಲ್ಲ. ಒಟ್ಟಿನಲ್ಲಿ ಈ ಸಂಬಂಧ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಇತ್ತ 32 ಕೆ.ಜಿ ಚಿನ್ನವನ್ನು ಜಿಆರ್‍ಪಿ ಅಧಿಕಾರಿಗಳು ಕೈಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments