Webdunia - Bharat's app for daily news and videos

Install App

ಹೈಕೋರ್ಟ್ ಸೂಚಿಸಿದರೂ ವಿಚಾರಣೆಗೆ ಹಾಜರಾಗದ ಅಧಿಕಾರಿಗಳು

Webdunia
ಮಂಗಳವಾರ, 9 ನವೆಂಬರ್ 2021 (20:40 IST)
ಬೆಂಗಳೂರು: ಹೈಕೋರ್ಟ್  ಸೂಚಿಸಿದರೂ ಅಧಿಕಾರಿಗಳು ವಿಚಾರಣೆಗೆ ಹಾಜರಾಗುತ್ತಿಲ್ಲ. ಇದೇ ಪ್ರವೃತ್ತಿ ಮುಂದುವರಿದರೆ ಬಂಧಿಸಿ ಕರೆತರುವಂತೆ ಡಿಜಿ ಐಜಿಪಿಗೆ ಸೂಚಿಸಬೇಕಾಗುತ್ತದೆ ಎಂದು ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ಗೈರು ಹಾಜರಾದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಹೈಕೋರ್ಟ್ ಸೂಚಿಸಿದಾಗ ಅಧಿಕಾರಿಗಳು ವಿಚಾರಣೆಗೆ ಹಾಜರಾಗಬೇಕು. ಸಚಿವ ಸಂಪುಟ ಸಭೆಯಿದ್ದರೂ ನ್ಯಾಯಾಲಯದ ಕಲಾಪ ತಪ್ಪಿಸಿಕೊಳ್ಳುವಂತಿಲ್ಲ. ಇಂಥ ಗೈರುಹಾಜರಿಯನ್ನು ನಾವು ಸಹಿಸುವುದಿಲ್ಲ. ವಿಚಾರಣೆಗೆ ಹಾಜರಾಗದ ಅಧಿಕಾರಿಗಳನ್ನು ಬಂಧಿಸಿ ಕರೆತರುವಂತೆ ಡಿಜಿ ಐಜಿಪಿಗೆ ಸೂಚಿಸುವ ಅಧಿಕಾರ ನಮಗಿದೆ. ಅಂಥ ಪರಿಸ್ಥಿತಿ ಬಾರದಂತೆ ನೋಡಿಕೊಳ್ಳಿ ಎಂದು ಪ್ರಭುಲಿಂಗ ನಾವದಗಿ ಅವರಿಗೆ ಹೈಕೋರ್ಟ್ ಸೂಚಿಸಿತು.
ಹೈಕೋರ್ಟ್‌ ಅನ್ನು ರಾಜ್ಯ ಸರ್ಕಾರ ಲಘುವಾಗಿ ಪರಿಗಣಿಸಿದೆ. ನಾವು ಈ ಅಧಿಕಾರಿಗಳ ವಿರುದ್ಧ ವಿಚಾರಣೆಗೆ ಆದೇಶಿಸುತ್ತೇವೆ. ಸಂಬಳ ಬರದಂತೆ ತಡೆಹಿಡಿಯಲು ಸೂಚಿಸುತ್ತೇವೆ ಎಂದು ಕಟುವಾಗಿ ಎಚ್ಚರಿಸಿದರು.
ರಾಜ್ಯ ವಸತಿ ಇಲಾಖೆಯ ಪ್ರಧಾನ ಕಾರ್ಯದರ್ಶಿ, ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ವಿಚಾರಣೆಗೆ ಗೈರು ಹಾಜರಾಗಿದ್ದರು. ಎರಡು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳಲ್ಲಿ ವಿಚಾರಣೆಗೆ ಹಾಜರಾಗಲು ಸೂಚಿಸಿದ್ದರೂ ಇವರು ಬಂದಿರಲಿಲ್ಲ. ಅಧಿಕಾರಿಗಳ ಈ ಪ್ರವೃತ್ತಿಯನ್ನು ನ್ಯಾಯಮೂರ್ತಿಗಳ ಕೋಪಕ್ಕೆ ಗುರಿಯಾಯಿತು.
ಮತ್ತೆ ಇಂತಹ ತಪ್ಪು ಮಾಡಬೇಡಿ. ನಿಮ್ಮ ವೃತ್ತಿಗೆ ಯಾವುದೇ ರೀತಿ ತೊಂದರೆ ತಂದುಕೊಳ್ಳಬೇಡಿ ಎಂದು ಹಾಜರಾಗಿದ್ದ ಅಧಿಕಾರಿಗಳಿಗೆ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎಚ್ಚರಿಕೆ ನೀಡಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments