Select Your Language

Notifications

webdunia
webdunia
webdunia
webdunia

ಸಚಿವರ ಹೆಸರು ಬರೆದಿಟ್ಟು ಅಧಿಕಾರಿ ಆತ್ಮಹತ್ಯೆ: ಮುಖ್ಯಮಂತ್ರಿ ರಾಜೀನಾಮೆಗೆ ಅಶೋಕ ಆಗ್ರಹ

 R Ashoka

Sampriya

ಕೋಲಾರ , ಸೋಮವಾರ, 27 ಮೇ 2024 (18:53 IST)
‌ ಕೋಲಾರ:  ಶಿವಮೊಗ್ಗದಲ್ಲಿ ಅಧಿಕಾರಿಯೊಬ್ಬರು  ಹಣದ ದುರುಪಯೋಗ ಸಂಬಂಧ ಸಚಿವರ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೀಗಾಗಿ, ಮುಖ್ಯಮಂತ್ರಿಗೆ ನೈತಿಕತೆ ಇದ್ದರೆ ಕೂಡಲೇ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಮುಖಂಡ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಒತ್ತಾಯಿಸಿದರು.

ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಭ್ರಷ್ಟಾಚಾರದ ಕೂಪದಲ್ಲಿ ಮುಳುಗಿದೆ. ಈಗ ದಾಖಲೆ ಸಮೇತ ಜಗಜ್ಜಾಹೀರಾಗಿದೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕೇ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದರು.

ಶಿವಮೊಗ್ಗದಲ್ಲಿ ಅಕೌಂಟೆಂಟ್‌ ಚಂದ್ರಶೇಖರ್ ‌ಎಂಬುವರು ₹ 187 ಕೋಟಿ ಅವ್ಯವಹಾರ ಸಂಬಂಧ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್‌ ನೋಟ್‌ನಲ್ಲಿ ಮಂತ್ರಿ ಹಾಗೂ ಅಧಿಕಾರಿಗಳ ಹೆಸರು ನಮೂದಿಸಿದ್ದಾರೆ. ಲೂಟಿ ಸರ್ಕಾರ ಎಂಬುದಕ್ಕೆ ಇದಕ್ಕಿಂತ ಸಾಕ್ಷಿ ಇನ್ನೇನು ಬೇಕು ಎಂದು ಅವರು ಹೇಳಿದರು.

ಕಾನೂನು ಸುವ್ಯವಸ್ಥೆ ರಾಜ್ಯದಲ್ಲಿ ಸಂಪೂರ್ಣ ಕುಸಿದು ಹೋಗಿದೆ. ನಿತ್ಯ ಕೊಲೆ, ಸುಲಿಗೆ ನಡೆಯುತ್ತಿವೆ. ಕಾಲೇಜಿಗೆ, ಕೆಲಸಕ್ಕೆ ಹೋದ ಹೆಣ್ಣು ಮಕ್ಕಳು ಮನೆಗೆ ವಾಪಸ್‌ ಬರುತ್ತಿಲ್ಲ. ಮಹಿಳೆಯರ ಬದುಕುವ ಗ್ಯಾರಂಟಿ ಕಿತ್ತುಕೊಂಡಿದೆ. ಯಾವುದೇ ಅಭಿವೃದ್ಧಿ ಕೆಲಸವೂ ನಡೆಯುತ್ತಿಲ್ಲ ಎಂದು ಟೀಕಾ ಪ್ರಹಾರ ನಡೆಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಎಸ್‌ಐಟಿ ವಿಚಾರಣೆಗೆ ಪ್ರಜ್ವಲ್‌: ನಿರ್ಧಾರಕ್ಕೆ ಸ್ವಾಗತ ಎಂದ ಗೃಹ ಸಚಿವ ಪರಮೇಶ್ವರ್‌