Webdunia - Bharat's app for daily news and videos

Install App

ಅಧಿಕಾರಿಗಳು ಕಾಟಾಚಾರಕ್ಕೆ ಸಭೆಯಲ್ಲಿ ಭಾಗಿಯಾಗ್ತಾರೆ-ಮಾಜಿ ಸಿಎಂ H.D. ಕುಮಾರಸ್ವಾಮಿ

Webdunia
ಬುಧವಾರ, 20 ಸೆಪ್ಟಂಬರ್ 2023 (16:00 IST)
ದೆಹಲಿಯಲ್ಲಿ ಸಂಸದರ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ವಿಚಾರಕ್ಕೆ ಮಾಜಿ ಸಿಎಂ H.D. ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಇವತ್ತು ದೆಹಲಿಯಲ್ಲಿ ಸಿಎಂ, ಡಿಸಿಎಂ ಸಭೆ ಮಾಡಿದ್ದಾರೆ. ಇನ್ನೂ ಸುಪ್ರೀಂಕೋರ್ಟ್​​​ಗೆ ಅರ್ಜಿ ಹಾಕ್ತೀವಿ ಅಂತ ಕಾಲಹರಣ ಮಾಡ್ತಿದ್ದಾರೆ. ರೈತರ ಉಳಿವಿಗೆ ಇಷ್ಟೊತ್ತಿಗಾಗಲೇ ಚಿಂತನೆ ನಡೆಸಬೇಕಾಗಿತ್ತು. ಆದರೆ ಸರ್ಕಾರ ಇನ್ನೂ ಆ ಕೆಲಸ ಮಾಡಿಲ್ಲ. ಸುಪ್ರೀಂ ಕೋರ್ಟ್​​​ಗೆ ಅರ್ಜಿ ಹಾಕಲು ಮೀನಾಮೇಷ ಎಣಿಸುತ್ತಿದ್ದಾರೆ. ತಮಿಳುನಾಡಿನವರು ಒಂದು ತಿಂಗಳ ಹಿಂದೆಯೇ ಅರ್ಜಿ ಹಾಕಿದ್ದಾರೆ. ಆದರೆ ನೀವು ಅರ್ಜಿ ಹಾಕಿದ ತಕ್ಷಣ ನೀರು ಬಿಟ್ರಿ. ಅದರ ಬದಲು ನೀವು ಅರ್ಜಿ ಹಾಕಬಹುದಿತ್ತು. ನಾನು ಈ ಬಗ್ಗೆ ಒಂದು ತಿಂಗಳ ಮುಂಚೆಯೇ ಹೇಳಿದ್ದೆ. ಕಾವೇರಿ ನಿರ್ವಹಣಾ ಪ್ರಾಧಿಕಾರದವ್ರು ದೇವಲೋಕದಿಂದ ಇಳಿದು ಬಂದಿಲ್ಲ. ನಮ್ಮ ರಾಜ್ಯದ ವಾಸ್ತವ ಸ್ಥಿತಿ ಬಗ್ಗೆ ಅವರಿಗೆ ಮಾಹಿತಿ ಇಲ್ಲ. ನಮ್ಮ ಅಧಿಕಾರಿಗಳು ಕೂಡ ಕಾಟಾಚಾರಕ್ಕೆ ಹೋಗಿ ಸಭೆಯಲ್ಲಿ ಭಾಗಿಯಾಗ್ತಾರೆ ಎಂದು ಕಿಡಿಕಾರಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments