Webdunia - Bharat's app for daily news and videos

Install App

ಶಶಿಕಲಾಗೆ ವಿಶೇಷ ಆತಿಥ್ಯ ಒಪ್ಪಿಕೊಂಡ ಅಧಿಕಾರಿಗಳು

Webdunia
ಸೋಮವಾರ, 24 ಜುಲೈ 2017 (10:16 IST)
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಶಿಕಲಾ ನಟರಾಜನ್ ಮತ್ತು ಕರೀಂ ಲಾಲ್ ತೆಲಗಿಗೆ ವಿಐಪಿ ಆತಿಥ್ಯ ನೀಡಲಾಗುತ್ತಿತ್ತು ಎನ್ನುವುದನ್ನು ಅಧಿಕಾರಿಗಳು ಸದನ ಸಮಿತಿ ಎದುರು ಒಪ್ಪಿಕೊಂಡಿದ್ದಾರೆ.


ಬಿಜೆಪಿ ಶಾಸಕ ಹಾಗೂ ಮಾಜಿ ಗೃಹ ಸಚಿವ ಆರ್ ಅಶೋಕ್ ನೇತೃತ್ವದ ಸಮಿತಿ ಮುಂದೆ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಶಶಿಕಲಾಗೆ ಮಹಿಳಾ ವಿಭಾಗದ ಪಕ್ಕದಲ್ಲೇ ವಿಶೇಷ ಅಡುಗೆ ಕೋಣೆಯಲ್ಲಿ ವಿಶೇಷ ಬಾಣಸಿಗರಿಂದ ವಿಶೇಷ ಊಟ ರವಾನೆಯಾಗುತ್ತಿತ್ತು. ಇನ್ನು ಕರೀಂ ಲಾಲ್ ತೆಲಗಿಯ ಬಾಡಿ ಮಸಾಜ್ ಮಾಡಿಸುವುದಕ್ಕೆಂದೇ ಕೆಲವು ಖೈದಿಗಳನ್ನು ನಿಯೋಜಿಸಲಾಗಿತ್ತು ಎಂದು ಡಿಐಜಿ ರೂಪಾ ತಮ್ಮ ವರದಿಯಲ್ಲಿ ಹೇಳಿದ್ದರು.

ಇದು ತೀವ್ರ ಸಂಚಲನ ಸೃಷ್ಟಿಸಿದ ಮೇಲೆ ಕಾರಾಗೃಹ ಇಲಾಖೆಯಿಂದ ರೂಪಾ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಇದೀಗ ಇದರ ವಿಚಾರಣೆ ನಡೆಸಿದ ಸದನ ಸಮಿತಿ ಎದುರು ಪರಪ್ಪನ ಅಗ್ರಹಾರ ಅಧಿಕಾರಿಗಳು ಸತ್ಯ ಬಾಯ್ಬಿಟ್ಟಿದ್ದಾರೆ ಎನ್ನಲಾಗಿದೆ. ಈ ಬಗ್ಗೆ 15 ದಿನಗಳೊಳಗೆ ವರದಿ ತಯಾರಿಸಿಕೊಡುವಂತೆ ಶಾಸಕ ಅಶೋಕ್ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.

ಇದನ್ನೂ ಓದಿ..  ಬ್ರಿಟಿಷ್ ಪತ್ರಕರ್ತನಿಗೆ ಸೆಹ್ವಾಗ್ ಪಂಚ್!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments