Select Your Language

Notifications

webdunia
webdunia
webdunia
webdunia

ಡಿಕೆಶಿ ಮೇಲೆ ದಾಳಿ ನಡೆಸುತ್ತಿರುವುದಕ್ಕೆ ಒಕ್ಕಲಿಗರ ಸಂಘ ಗರಂ

ಡಿಕೆಶಿ ಮೇಲೆ ದಾಳಿ ನಡೆಸುತ್ತಿರುವುದಕ್ಕೆ ಒಕ್ಕಲಿಗರ ಸಂಘ ಗರಂ
ಬೆಂಗಳೂರು , ಶುಕ್ರವಾರ, 1 ಜೂನ್ 2018 (11:40 IST)
ಬೆಂಗಳೂರು: ಕಾಂಗ್ರೆಸ್ ಶಾಸಕ, ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕ ಡಿಕೆ ಶಿವಕುಮಾರ್ ಮೇಲೆ ಪದೇ ಪದೇ ಕೇಂದ್ರದ ಐಟಿ, ಸಿಬಿಐ ಬ್ಯೂರೋಗಳು ದಾಳಿ ನಡೆಸುತ್ತಿರುವುದಕ್ಕೆ ರಾಜ್ಯ ಒಕ್ಕಲಿಗರ ಸಂಘ ಗರಂ ಆಗಿದೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಒಕ್ಕಲಿಗರ ಸಂಘದ ಅಧ್ಯಕ್ಷ ಡಿಎನ್ ಬೆಟ್ಟೇಗೌಡ ಡಿಕೆಶಿ ವಿರುದ್ಧ ದಾಳಿ ನಡೆಸುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

ಪದೇ ಪದೇ ಡಿಕೆಶಿ ಕುಟುಂಬ ಮತ್ತು ಆಪ್ತರ ಮೇಲೆ ಈ ರೀತಿ ಕಿರುಕುಳ ನೀಡುತ್ತಿರುವುದು ಸರಿಯಲ್ಲ. ರಾಜ್ಯದಲ್ಲಿ ಬಿಜೆಪಿಗೆ ಹಿನ್ನಡೆಯಾಗಿದ್ದಕ್ಕೆ ಕೇಂದ್ರ ಈ ಕೃತ್ಯಕ್ಕೆ ಮುಂದಾಗಿದೆ. ಇದೇ ರೀತಿ ಮುಂದುವರಿದರೆ ಹೋರಾಟ ನಡೆಸಬೇಕಾಗುತ್ತದೆ ಎಂದು ಒಕ್ಕಲಿಗರ ಸಂಘ ಎಚ್ಚರಿಕೆ ನೀಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಧಾನಿ ಮೋದಿ ವಿರುದ್ಧ ಪೇಜಾವರ ಶ್ರೀಗಳು ಅಸಮಾಧನ