Webdunia - Bharat's app for daily news and videos

Install App

ಓಲಾ ಸಂಚಾರ ನಿಷೇಧ ಆದೇಶ ವಾಪಸ್; ಸಚಿವ ಪ್ರಿಯಾಂಕ್ ಖರ್ಗೆಯ ಕಾಲೆಳೆದ ನೆಟ್ಟಿಗರು

Webdunia
ಸೋಮವಾರ, 25 ಮಾರ್ಚ್ 2019 (12:14 IST)
ಬೆಂಗಳೂರು : ಓಲಾ ಸಂಚಾರ ನಿಷೇಧ ಆದೇಶ ವಾಪಸ್ ಪಡೆದುಕೊಂಡಿದ್ದಕ್ಕೆ ಸಚಿವ ಪ್ರಿಯಾಂಕ್ ಖರ್ಗೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕರು ಟ್ರೋಲ್ ಮಾಡಿದ್ದಾರೆ.


ಪರವಾನಿಗೆಯನ್ನು ದುರ್ಬಳಕೆ ಮಾಡಿಕೊಂಡಿದ್ದಕ್ಕೆ ಆರು ತಿಂಗಳುಗಳ ಕಾಲ  ಓಲಾ ಸಂಚಾರಕ್ಕೆ  ಸಾರಿಗೆ ಇಲಾಖೆ ನಿಷೇಧ ಹೇರಿತ್ತು. ಬಳಿಕ  ಈ ಆದೇಶವನ್ನು ಸರ್ಕಾರ ವಾಪಸ್ ಪಡೆದುಕೊಂಡಿದೆ. ನಿಷೇಧ ವಾಪಸ್ ಪಡೆದ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಭಾನುವಾರ ಬೆಳಗ್ಗೆ ಟ್ವೀಟ್ ಮಾಡಿ, ಇಂದಿನಿಂದ ಎಂದಿನಂತೆ ಓಲಾ ಸಂಚರಿಸಲಿದೆ ಎಂದು ಹೇಳಿಕೊಂಡಿದ್ದರು.


ಸರ್ಕಾರದ ಈ ನಡೆಯನ್ನು ಪ್ರಶ್ನಿಸಿ  ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡಲಾಗಿದ್ದು, ಎಲೆಕ್ಷನ್ ಫಂಡ್ ಗೆ ಈ ಡ್ರಾಮಾನಾ ಅಂತಾ ಕೆಲವರು ಸಚಿವ ಖರ್ಗೆಯನ್ನು ಪ್ರಶ್ನಿಸಿದ್ದಾರೆ. ನಿಷೇಧ ಹೇರಿದ ಎರಡೇ ದಿನದಲ್ಲಿ ಹೇಗೆ ಸಮಸ್ಯೆ ಬಗೆಹರಿದಿದೆ? ಓಲಾ ನಿಷೇಧವನ್ನು ಅಷ್ಟು ಸುಲಭವಾಗಿ ಎರಡು ದಿನದಲ್ಲಿ ಬಗೆಹರಿಸಿದ್ದು ಹೇಗೆ? ಇದು ಎಲೆಕ್ಷನ್ ಫಂಡ್ ಗೆ ಮಾಡಿರುವ ಗಿಮಿಕ್ ಎಂದು ಕೆಲವರು ಟ್ವೀಟ್ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments