Webdunia - Bharat's app for daily news and videos

Install App

ದರ್ಶನ್ ವಿರುದ್ಧ ಹಳೇ ಕೇಸ್ ರಿ ಓಪನ್

Krishnaveni K
ಶುಕ್ರವಾರ, 18 ಅಕ್ಟೋಬರ್ 2024 (11:27 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಗೆ ಮತ್ತೊಂದು ಪ್ರಕರಣ ಸುತ್ತಿಕೊಂಡಿದೆ. ಹಳೇ ಕೇಸ್ ಒಂದು ರಿ ಓಪನ್ ಆಗಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ 120 ಕ್ಕೂ ಹೆಚ್ಚು ದಿನಗಳಿಂದ ದರ್ಶನ್ ಜೈಲಿನಲ್ಲೇ ಇದ್ದಾರೆ. ಅವರ ಜಾಮೀನು ಅರ್ಜಿ ಇತ್ತೀಚೆಗೆ ಕೆಳಹಂತದ ನ್ಯಾಯಾಲಯದಲ್ಲಿ ತಿರಸ್ಕೃತವಾಗಿತ್ತು. ಈ ಹಿನ್ನಲೆಯಲ್ಲಿ ಅವರು ಹೈಕೋರ್ಟ್ ಮೊರೆ ಹೋಗುತ್ತಿದ್ದಾರೆ. ಆದರೆ ಈ ನಡುವೆ ಅವರಿಗೆ ಹಳೇ  ಕೇಸ್ ಕಂಟಕ ತಂದಿದೆ.

ಭಗವಾನ್ ಶ್ರೀಕೃಷ್ಣಾ ಎಂಬ ಸಿನಿಮಾವನ್ನು ಯುವ ನಿರ್ಮಾಪಕ ಭರತ್ ಎಂಬವರು ನಿರ್ಮಿಸಿದ್ದರು. ಈ ಸಿನಿಮಾಗೆ ಧ್ರುವನ್ ನಾಯಕರಾಗಿದ್ದರು. ಈ ಸಿನಿಮಾ ಶೂಟಿಂಗ್ ನಡೆಯುತ್ತಿಲ್ಲ ಎಂದು ಧ್ರುವನ್ ನಟ ದರ್ಶನ್ ಬಳಿ ದೂರು ಹೇಳಿದ್ದರು. ಅದರಂತೆ ದರ್ಶನ್ ಕೈಯಲ್ಲಿ ಭರತ್ ಗೆ ಧ್ರುವನ್ ಕರೆ ಮಾಡಿಸಿದ್ದರು.

ಧ್ರುವನ್ ಪರವಾಗಿ ಮಾತನಾಡಿದ್ದ ದರ್ಶನ್ ಬೆದರಿಕೆ ಹಾಕಿದ್ದರು. ಘಟನೆ ಬಗ್ಗೆ ಭರತ್ ಇತ್ತೀಚೆಗೆ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಬಂಧಿತರಾದ ಬಳಿಕ ಮಾಧ್ಯಮಗಳ ಬಳಿ ಹೇಳಿಕೊಂಡಿದ್ದರು. ಈ ಬಗ್ಗೆ ಅವರು ಪೊಲೀಸರಿಗೂ ದೂರು ನೀಡಿದ್ದರು.

ಈ ಹಿಂದೆ ಭರತ್ ದೂರು ಸಲ್ಲಿಸಿದಾಗ ಕೆಂಗೇರಿ ಠಾಣೆ ಪೊಲೀಸರು ಎನ್ ಸಿಆರ್ ದಾಖಲಿಸಿದ್ದರು ಅಷ್ಟೇ. ಇದೀಗ ದರ್ಶನ್, ಅವರ ಮ್ಯಾನೇಜರ್ ನಾಗರಾಜ್, ಧ್ರುವನ್ ವಿರುದ್ಧ ಹೊಸದಾಗಿ ಎನ್ ಸಿಆರ್ ದಾಖಲಿಸಿದ್ದು ತನಿಖೆಗೆ ಮುಂದಾಗಿದ್ದಾರೆ. ಹೀಗಾಗಿ ಹತ್ಯೆ ಪ್ರಕರಣದಲ್ಲಿ ಜೈಲಿನಲ್ಲಿರುವ ದರ್ಶನ್ ಗೆ ಮತ್ತೊಂದು ಕಂಟಕ ಎದುರಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments