Webdunia - Bharat's app for daily news and videos

Install App

ಸ್ವಪಕ್ಷದವರೊಂದಿಗೆ ಓಲೆಕಾರ್ ಮುನಿಸು​​​

Webdunia
ಶನಿವಾರ, 20 ಆಗಸ್ಟ್ 2022 (17:42 IST)
ಸ್ವಪಕ್ಷದ ನಾಯಕರ ಮೇಲೆ ಓಲೆಕಾರ್ ತಿರುಗಿ ಬಿದ್ದಿದ್ದು, ಸಿಎಂ ಬಸವರಾಜ ಬೊಮ್ಮಾಯಿಗೆ ಕಪ್ಪುಬಟ್ಟೆ ಪ್ರದರ್ಶನದ ಎಚ್ಚರಿಕೆಯನ್ನು ನೀಡಿದ್ದಾರೆ. ನಾಳೆ ಹಾವೇರಿಯಲ್ಲಿ ವಕೀಲರ ಸಂಘದ ಕಚೇರಿ ಉದ್ಘಾಟನಾ ಸಮಾರಂಭ ನಡೆಸಲಾಗ್ತಿದೆ. ಸ್ಥಳೀಯ ಶಾಸಕರನ್ನು ನಿರ್ಲಕ್ಷ್ಯ ಮಾಡಿ ಕೇವಲ ಕೆಲವು ಜನರ ಹೆಸರು ಹಾಕಿ ಕಾರ್ಯಕ್ರಮ ಮಾಡ್ತಿದ್ದಾರೆ, ಇದು ದುರಂತದ ಸಂಗತಿ ಎಂದು ಶಾಸಕ ನೆಹರೂ ಓಲೆಕಾರ್ ಹೇಳಿದ್ರು. ಹಾವೇರಿಯಲ್ಲಿ ಮಾತನಾಡಿದ ಅವರು, ದಿವಂಗತ ಸಿ.ಎಂ ಉದಾಸಿಯವರು ಇದ್ದ ಸಂದರ್ಭದಲ್ಲಿ ಹಾವೇರಿ ಕೋರ್ಟ್ ಕಟ್ಟಡ ವಿವಾದ ಬಗೆಹರಿಸಿ ಕಟ್ಟಡ ಕಟ್ಟಲು 25 ಕೋಟಿ ಮಂಜೂರು ಮಾಡಿದ್ದರು. ಆದರೆ ವಕೀಲರ ಸಂಘದ ಕಚೇರಿಗೆ ಅವಕಾಶ ಇರಲಿಲ್ಲ. ವಕೀಲರ ಸಂಘದ ಕಚೇರಿಗೆ ಸುಮಾರು ಏಳೂವರೆ ಕೋಟಿ ಮಂಜೂರು ಮಾಡಿಸಿದ್ದೆ. ಸ್ಥಳೀಯ ಶಾಸಕರನ್ನು ಕಡೆಗಣಿಸಿ ಉದ್ಘಾಟನಾ ಸಮಾರಂಭ ಇಟ್ಟುಕೊಂಡಿದ್ದಾರೆ. ಇದು ಅಕ್ಷ್ಯಮ್ಯ ಅಪರಾಧ ಎಂದು ಗುಡುಗಿದ್ರು. ನಾಳೆ ನಡೆಯುವ ಕಾರ್ಯಕ್ರಮದ ವಿರುದ್ಧ ಕಪ್ಪು ಬಟ್ಟೆ ಪ್ರದರ್ಶನ ಮಾಡುವ ಮೂಲಕ ಕಾರ್ಯಕರ್ತರು ವಿಷಾದ ವ್ಯಕ್ತಪಡಿಸಲಿದ್ದಾರೆ ಎಂದು ಅವರು ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments