Webdunia - Bharat's app for daily news and videos

Install App

ಓಮಿಕ್ರಾನ್ ಆತಂಕ: ಕರ್ನಾಟಕ ಆರೋಗ್ಯ ಇಲಾಖೆಯಿಂದ ಹೊಸ ಮಾರ್ಗಸೂಚಿ ಬಿಡುಗಡೆ

Webdunia
ಭಾನುವಾರ, 12 ಡಿಸೆಂಬರ್ 2021 (19:28 IST)
ರಾಜ್ಯದಲ್ಲಿ ಕೊರೋನಾ ಮೂರನೇ ಅಲೆ ಹಾಗೂ ಓಮಿಕ್ರಾನ್ ಭೀತಿ ಹೆಚ್ಚುತ್ತಿರುವ ನಡುವೆಯೇ ರಾಜ್ಯದಲ್ಲಿ ಓಮಿಕ್ರಾನ್ ಸೋಂಕಿತರ ಡಿಸ್ಚಾರ್ಜ್ ಗೆ ಅನುಸರಿಸಬೇಕಾದ ನಿಯಮಗಳ ಕುರಿತು ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಬಿಡುಗಡೆ ಮಾಡಿದ ಮಾರ್ಗಸೂಚಿಯಲ್ಲಿ ಮೈಲ್ಡ್ ೋಮಿಕ್ರಾನ್ ರೋಗಿಗೆ ಡಿಸ್ಜಾರ್ಜ್ ಮಾಡಲು ಅನುಸರಿಬೇಕಾದ ನಿಯಮಗಳ ಬಗ್ಗೆ ಉಲ್ಲೇಖಿಸಲಾಗಿದೆ.
ಕ್ಲಿನಿಕಲ್ ‌ಎಕ್ಸ್ ಪರ್ಟ್ ಕಮಿಟಿ ಓಮಿಕ್ರಾನ್ ವೈರಸ್ ರೋಗಿಗೆ ಡಿಸ್ಜಾರ್ಜ್ ಹೇಗೆ, ಯಾವಾಗ ಮಾಡಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ಯಾವುದೇ ರೀತಿಯ ರೋಗ ಲಕ್ಷಣಗಳು ಇಲ್ಲ ಅಂದರೆ 10 ದಿನಕ್ಕೆ ಡಿಸ್ಜಾರ್ಜ್ ಮಾಡಬಹುದು ಎಂದು ತಿಳಿಸಲಾಗಿದೆ. ಆದರೆ ಇದಕ್ಕೆ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸೂಚಿಸಲಾಗಿದೆ.
ಡಿಸ್ಜಾರ್ಜ್ ಆಗುವ ಮುನ್ನ ಮೂರು ದಿನದಲ್ಲಿ ಯಾವುದೇ ರೀತಿಯ ಜ್ವರ ಅಥವಾ ಯಾವುದೇ ರೋಗ ಲಕ್ಷಣ ಇರಬಾರದು. ಯಾವುದೇ ಆಮ್ಲಜನಕ ಬೆಂಬಲ ಇಲ್ಲದೇ 4 ದಿನಗಳ ಕಾಲ 95% ಆಮ್ಲಜನಕ ಮಟ್ಟ ಇದ್ದರೆ ಡಿಸ್ಜಾರ್ಜ್ ಮಾಡಬಹುದು. ಡಿಸ್ಜಾರ್ಜ್ ಆದ ಮೇಲೆ ರೋಗ ಲಕ್ಷಣ ಕಂಡು ಬಂದರೆ ಏನು ಮಾಡಬೇಕು, ಯಾವುದನ್ನು ತೆಗೆದುಕೊಳ್ಳಬೇಕು ಎಂಬುದ ಬಗ್ಗೆ ಸಲಹೆ ನೀಡಬೇಕು ಎಂದು ಆರೋಗ್ಯ ಇಲಾಖೆ ಸೂಚಿಸಿದೆ.
ಅಲ್ಲದೇ ಓಮಿಕ್ರಾನ್ ರೋಗಿಗೆ ಡಿಸ್ಚಾರ್ಜ್ ಮಾಡಬೇಕಾದರೆ ಎರಡು ಬಾರಿ ಆರ್‌ಟಿ-ಪಿಸಿಆರ್ ಟೆಸ್ಟ್ ಮಾಡಿದ ನಂತರ ನೆಗೆಟಿವ್ ವರದಿ ಬಂದಿದ್ದರೆ ಮಾತ್ರ ಡಿಸ್ಚಾರ್ಜ್ ಮಾಡಬೇಕು. ಒಂದು ವೇಳೆ ಟೆಸ್ಟ್ ನಲ್ಲಿ ಪಾಸಿಟಿವ್ ಬಂದರೆ 48 ಗಂಟೆಗಳ ಬಳಿಕ ಮತ್ತೆ ಸ್ವಾಬ್ ಕಲೆಕ್ಟ್ ಮಾಡಿ ಆರ್‌ಟಿ-ಪಿಸಿಆರ್ ಟೆಸ್ಟ್ ಮಾಡಬೇಕು ಎಂದು ಸೂಚಿಸಲಾಗಿದೆ.
ಡಿಸ್ಸಾರ್ಜ್ ಆದ ವ್ಯಕ್ತಿಗೆ ಹೊಂ ಕ್ವಾರಂಟೈನ್ ಅಥವಾ ಸೆಲ್ಫ್ ಕ್ವಾರಂಟೈನ್ ನಲ್ಲಿ ಇರುವಂತೆ ಸೂಚನೆ ನೀಡಬೇಕು. ಮನೆ ಪ್ರತ್ಯೇಕಯಲ್ಲಿ ಇರುವ ವ್ಯಕ್ತಿಗೆ ಮತ್ತೆ 6ನೇ ದಿನಕ್ಕೆ ಆರ್‌ಟಿ-ಪಿಸಿಆರ್‌ ಟೆಸ್ಟ್ ಮಾಡಬೇಕು ಎಂದು ಆರೋಗ್ಯ ಇಲಾಖೆ ಆದೇಶಿಸಿದೆ. ಓಮಿಕ್ರಾನ್ ನಿಯಂತ್ರಿಸಲು ಹಾಗೂ ರೋಗಿಗಳನ್ನು ಹೇಗೆ ಆಸ್ಪತ್ರೆಯಿಂದ ಬಿಡುಗಡೆ ಮಾಡಬೇಕು ಎಂಬುದರ ಬಗ್ಗೆ ಇಲಾಖೆ ರೂಪಿಸಿದ ನಿಯಮಗಳು ರಾಜ್ಯದಲ್ಲಿ ಸರಿಯಾಗಿ ಪಾಲನೆಯಾದಲ್ಲಿ ಓಮಿಕ್ರಾನ್ ಹರಡುವಿಕೆ ತಡೆಯುವುದು ಸಾಧ್ಯವಾಗಲಿದೆ ಎಂದು ಆರೋಗ್ಯ ಇಲಾಖೆ ಮಾರ್ಗಸೂಚಿ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments