Webdunia - Bharat's app for daily news and videos

Install App

ಓಮಿಕ್ರಾನ್ ಭೀತಿ: ಬ್ಲಡ್ ಬ್ಯಾಂಕ್ಗಳಲ್ಲಿ ರಕ್ತದ ಕೊರತೆ!

Webdunia
ಸೋಮವಾರ, 20 ಡಿಸೆಂಬರ್ 2021 (08:24 IST)
ಬೆಂಗಳೂರು : ವೇಗವಾಗಿ ಹರಡುತ್ತಿರುವ ಕೊರೊನಾ ವೈರಸ್ ರೂಪಾಂತರಿ ವೈರಾಣು ಓಮಿಕ್ರಾನ್ ಆತಂಕದ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿನ ರಕ್ತನಿಧಿಗಳಲ್ಲಿ ರಕ್ತದಾನ ಮಾಡಲು ಬರುವವರ ಸಂಖ್ಯೆ ದಿನೇ ದಿನೇ ಕಡಿಮೆಯಾಗುತ್ತಿದೆ.

ಕಳೆದ ಎರಡು ತಿಂಗಳಿಂದ ರಕ್ತದಾನ ಮಾಡುವವರ ಸಂಖ್ಯೆ ನಿಧಾನವಾಗಿ ಏರಿಕೆಯಾಗುತ್ತಿತ್ತು. ಆದರೆ ಕೋವಿಡ್ - 19 ರೂಪಾಂತರಿ ವೈರಾಣು ಓಮ್ರಿಕಾನ್ ಪತ್ತೆಯಾದ ನಂತರ ರಕ್ತದಾನ ಮಾಡಲು ನಾಗರಿಕರು ಹಿಂದೇಟು ಹಾಕುತ್ತಿದ್ದಾರೆ.

ಕೆಲವೇ ಮಂದಿ ಮಾತ್ರ ಸ್ವಯಂ ಪ್ರೇರಿತವಾಗಿ ರಕ್ತದಾನ ಶಿಬಿರಗಳಲ್ಲಿ ರಕ್ತದಾನ ಮಾಡುತ್ತಿದ್ದಾರೆ. ಭಾರತೀಯ ರೆಡ್ ಕ್ರಾಸ್ ಸೊಸೈಟಿ, ರೋಟರಿ ಟಿಟಿಕೆ ಬ್ಲಡ್ ಬ್ಯಾಂಕ್, ಬೆಂಗಳೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಸೇರಿದಂತೆ ಇತರೆ ರಕ್ತ ನಿಧಿಗಳಲ್ಲಿ ರಕ್ತದಾನ ಮಾಡುವವರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿರುವುದು ಕಂಡು ಬಂದಿದೆ.

ಸದ್ಯ ಪ್ರತಿ ದಿನ ಸರಾಸರಿ 10 ಯೂನಿಟ್ ರಕ್ತ ಮಾತ್ರ ಸಂಗ್ರಹವಾಗುತ್ತಿದೆ. ಬೇಡಿಕೆ ಪ್ರಮಾಣಕ್ಕೆ ಹೋಲಿಸಿದರೆ ಇದು ಸಾಕಾಗುವುದಿಲ್ಲ. 'ನಿಯಮಿತವಾಗಿ ರಕ್ತ ದಾನ ಮಾಡುವವರು ಮಾತ್ರ ರಕ್ತದಾನ ಶಿಬಿರಕ್ಕೆ ಬರುತ್ತಿದ್ದಾರೆ. ಆದರೆ ಹೊಸಬರು ಹಿಂಜರಿಯುತ್ತಿದ್ದಾರೆ. ರಕ್ತದಾನ ಶಿಬಿರಗಳ ಸಂಖ್ಯೆ ನಿಧಾನವಾಗಿ ಏರಿಕೆಯಾಗುತ್ತಿದೆ.

ಆದರೆ ರಕ್ತದ ಅವಶ್ಯಕತೆ ಬಹಳಷ್ಟು ಇದೆ. ಓಮಿಕ್ರಾನ್ನ ಪರಿಣಾಮ ಅಷ್ಟೊಂದು ತೀವ್ರವಾಗಿಲ್ಲ ಎಂದು ವರದಿಗಳು ಹೇಳುತ್ತಿದ್ದರೂ, ಅದರ ಬಗ್ಗೆ ಜನರಲ್ಲಿರುವ ಭಯ ಅವರನ್ನು ಶಿಬಿರಗಳಿಗೆ ಬಾರದಂತೆ ಮಾಡುತ್ತಿದೆ' ಎಂದು ಲಯನ್ಸ್ ಬ್ಲಡ್ ಲೈನ್ ಸಂಸ್ಥೆಯ ಅಲ್ಫೋನ್ಸ್ ಕುರಿಯನ್ ಹೇಳಿದರು.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvamshi murder: ವಿಮಾನ ನಿಲ್ದಾಣದಲ್ಲೇ ಆರೋಪಿ ರಾಜ್ ಕುಶ್ವಾಹ್ ಗೆ ಕಪಾಳ ಮೋಕ್ಷ ವಿಡಿಯೋ

ಪತ್ನಿಯೇ ಪತಿಯನ್ನು ಕೊಲ್ಲುವಷ್ಟು ಕ್ರೂರಿಯಾಗುವುದು ಯಾಕೆ

Siddaramaiah: ಹೈಕಮಾಂಡ್ ಹೇಳಿದ್ದಕ್ಕೆ ಹೊಸದಾಗಿ ಜಾತಿಗಣತಿ: 150 ಕೋಟಿ ದಂಡ ಆಯ್ತು ಎಂದ ನೆಟ್ಟಿಗರು

Karnataka Weather: ಇಂದು ಭಾರೀ ಮಳೆ ಗ್ಯಾರಂಟಿ, ಯಾವೆಲ್ಲಾ ಜಿಲ್ಲೆಗೆ ನೋಡಿ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

ಮುಂದಿನ ಸುದ್ದಿ
Show comments