Webdunia - Bharat's app for daily news and videos

Install App

ಓಮಿಕ್ರಾನ್‌ ಹರಡುತ್ತೆ, ಬೂಸ್ಟರ್‌ನಿಂದಲೂ ತಡೆಯಲು ಸಾಧ್ಯವಿಲ್ಲ: ICMR ವೈದ್ಯ

Webdunia
ಶುಕ್ರವಾರ, 14 ಜನವರಿ 2022 (19:41 IST)
ಕರೋನಾ ರೂಪಾಂತರಿ ಓಮಿಕ್ರಾನ್ ಸೋಂಕನ್ನು ನಿಯಂತ್ರಿಸುವುದು ಅಸಾಧ್ಯ. ಪ್ರತಿಯೊಬ್ಬರಿಗೂ ಈ ಸೋಂಕು ತಗುಲುವ ಸಾಧ್ಯತೆಯಿದೆ ಎಂದು ವೈದ್ಯಕೀಯ ಕ್ಷೇತ್ರದ ಐಸಿಎಂಆರ್ ವೈದ್ಯನಿಂದ ಸಾಧ್ಯ.
ವ್ಯಾಪಕವಾಗಿ ಹರಡುತ್ತಿರುವ ಈ ಸೋಂಕನ್ನು ನಿಯಂತ್ರಿಸಲು ಬೂಸ್ಟರ್‌ ಡೋಸ್‌ನಿಂದಲೂ ಸಾಧ್ಯವಿಲ್ಲ. ಯಾವುದೇ ವ್ಯತ್ಯಾಸವಿಲ್ಲದೇ, ವಿಶ್ವದ ಎಲ್ಲಾ ದೇಶಗಳಲ್ಲೂ ಓಮಿಕ್ರಾನ್‌ ತೀವ್ರಗತಿಯಲ್ಲಿ ಹರಡಲಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ಐಸಿಎಂಆರ್‌) ಡಾ.ಜಯಪ್ರಕಾಶ್‌ ಮುಲಿಯಿಲ್ ಅಭಿಪ್ರಾಯಪಟ್ಟಿದ್ದಾರೆ.
ಇನ್ನು ಮುಂದೆ ಕೋವಿಡ್‌ ಭಯಾನಕ ರೋಗವಾಗಿ ಕಾಣಿಸಿಕೊಳ್ಳುವುದಿಲ್ಲ. ಏಕೆಂದರೆ ಹೊಸ ತಳಿ ತನ್ನ ಪರಿಣಾಮದಲ್ಲಿ ಸೌಮ್ಯವಾಗಿದೆ. ಈ ಸೋಂಕಿಗೆ ತುತ್ತಾದವರಲ್ಲಿ ಕಡಿಮೆ ಮಂದಿ ಮಾತ್ರ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ನಾವು ನಿಭಾಯಿಸಬಲ್ಲ ಕಾಯಿಲೆ ಇದಾಗಿದೆ. ಇದು ಡೆಲ್ಟಾಗಿಂತ ಹೆಚ್ಚು ಸೌಮ್ಯವಾಗಿದೆ. ಈ ವಿಚಾರ ಈಗಾಗಲೇ ಎಲ್ಲರಿಗೂ ತಿಳಿದಿದೆ. ಆದರೆ ಇದನ್ನು ನಿಯಂತ್ರಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ಇತರೆ ದೇಶಗಳಂತೆ ಭಾರತದಲ್ಲಿ ಸೋಂಕು ತೀವ್ರತರವಾದ ಪರಿಣಾಮ ಬೀರಿಲ್ಲ. ದೇಶದಲ್ಲಿ ಲಸಿಕೆಯನ್ನು ಪರಿಚಯಿಸುವ ಮೊದಲೇ ಸಾಕಷ್ಟು ಮಂದಿ ಸೋಂಕಿಗೆ ಒಳಗಾಗಿದ್ದರು. ಯಾವುದೇ ವೈದ್ಯಕೀಯ ಸಂಸ್ಥೆಗಳು ಬೂಸ್ಟರ್‌ ಡೋಸ್‌ಗಳನ್ನು ನೀಡಲು ಸೂಚಿಸಿಲ್ಲ. ಇದರಿಂದ ಸಾಂಕ್ರಾಮಿಕ ರೋಗದ ಹರಡುವಿಕೆಯನ್ನು ನಿಲ್ಲಿಸಲಾಗುವುದಿಲ್ಲ ಎಂದು ಹೇಳಿದ್ದಾರೆ.
ವೈರಸ್ ಕೇವಲ ಎರಡು ದಿನಗಳಲ್ಲಿ ಸೋಂಕನ್ನು ದ್ವಿಗುಣಗೊಳಿಸುತ್ತದೆ. ಸೋಂಕನ್ನು ದೃಢಪಡಿಸುವ ಮೊದಲೇ ಸೋಂಕಿತ ಹೆಚ್ಚಿನ ಜನರಿಗೆ ಅದನ್ನು ಹರಡುತ್ತದೆ. ಈ ರೀತಿಯ ಸಾಂಕ್ರಾಮಿಕ ವಿಕಾಸದಲ್ಲಿ ನೀವು ಯಾವುದೇ ವ್ಯತ್ಯಾಸ ಕಾಣಲು ಸಾಧ್ಯವಿಲ್ಲ.
ನಮ್ಮಲ್ಲಿ ಬಹುಪಾಲು ಜನರಿಗೆ ನಾವು ಸೋಂಕಿಗೆ ಒಳಗಾಗಿದ್ದೇವೆ ಎಂದು ತಿಳಿದಿರುವುದೇ ಇಲ್ಲ. ಶೇ.80ಕ್ಕಿಂತ ಹೆಚ್ಚು ಜನರು ಸೋಂಕಿಗೆ ಒಳಗಾಗಿದ್ದರೂ ಆ ಬಗ್ಗೆ ತಿಳಿದಿರುವುದಿಲ್ಲ ಎಂದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನ, ಬೆಳ್ಳಿ ಬೆಲೆ ಇಂದು ಶಾಕ್ ಆಗುವಂತಿದೆ

ಅವಧಿಗೂ ಮುನ್ನ ರಾಜೀನಾಮೆ ನೀಡಿದ ಉಪರಾಷ್ಟ್ರಪತಿಗಳು ಯಾರೆಲ್ಲಾ ಇಲ್ಲಿದೆ ಲಿಸ್ಟ್

ಹೆಣ್ಣು ಮಕ್ಕಳು ಬೇಗ ಮುಟ್ಟಾಗುತ್ತಿರುವುದು ಯಾಕೆ: ಖ್ಯಾತ ವೈದ್ಯೆ ಪದ್ಮಿನಿ ಪ್ರಸಾದ್ ಟಿಪ್ಸ್

ಇಂದಿನಿಂದ ಮೂರು ದಿನ ಯಾರ ಕೈಗೂ ಸಿಗಲ್ಲ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments