Webdunia - Bharat's app for daily news and videos

Install App

ದೇಶದಲ್ಲಿ ಒಮಿಕ್ರಾನ್ ಉಪ ರೂಪಾಂತರ 'ಬಿಎ.2' ಹೆಚ್ಚು ಹರಡುತ್ತಿದೆ : ಕೇಂದ್ರ ಸರ್ಕಾರ ಕಳವಳ

Webdunia
ಶುಕ್ರವಾರ, 28 ಜನವರಿ 2022 (14:06 IST)
ಕೋವಿಡ್-19ರ ಮೂರನೇ ಅಲೆಯಲ್ಲಿ ಭಾರತ ಹೋರಾಡುತ್ತಿರುವಂತೆಯೇ, ಕೇಂದ್ರ ಸರ್ಕಾರ ಗುರುವಾರ ಒಮಿಕ್ರಾನ್ ಉಪ ರೂಪಾಂತರ ಬಿಎ.2(Omicron sub-variant BA.2) ದೇಶದಲ್ಲಿ ಈಗ ಹೆಚ್ಚು ಪ್ರಚಲಿತದಲ್ಲಿದೆ ಎಂದು ಕಳವಳ ವ್ಯಕ್ತಪಡಿಸಿದೆ.
ದೇಶದ ಕೋವಿಡ್-19 ಪರಿಸ್ಥಿತಿಯ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಆರೋಗ್ಯ ಸಚಿವಾಲಯ ಈ ಮಾಹಿತಿ ನೀಡಿದೆ.
ಇನ್ನು ಈ ಬಗ್ಗೆ ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ (NCDC) ನಿರ್ದೇಶಕ ಡಾ. ಸುಜೀತ್ ಕುಮಾರ್ ಸಿಂಗ್ ಅವರು ಮಾತನಾಡುತ್ತಿದಾಗ, ಒಮಿಕ್ರಾನ್ ಉಪ ರೂಪಾಂತರ ಬಿಎ.2(Omicron sub-variant BA.2) ದೇಶದಲ್ಲಿ ಈಗ ಹೆಚ್ಚು ಹರಡುತ್ತಿದೆ ಎಂದು ಹೇಳಿದರು.
ಕಳೆದ ವರ್ಷ ಡಿಸೆಂಬರ್ ನಲ್ಲಿ ಜಿನೋಮ್ ಅನುಕ್ರಮಣಿಕೆಯಲ್ಲಿ 1,292 ಒಮಿಕ್ರಾನ್ ರೂಪಾಂತರ ಪ್ರಕರಣಗಳು ಕಂಡುಬಂದಿವೆ ಎಂದು ಸರ್ಕಾರ ತಿಳಿಸಿದ್ದು, ಜನವರಿಯಲ್ಲಿ ಈ ಸಂಖ್ಯೆ 9,672ಕ್ಕೆ ಏರಿದೆ ಎಂದು ತಿಳಿಸಿದೆ.
ಹಿಂದಿನ ಏರಿಕೆಗಳಿಗೆ ಹೋಲಿಸಿದ್ರೆ ಪ್ರಸ್ತುತ ಅಲೆಯ ಸಮಯದಲ್ಲಿ ಸಕ್ರಿಯ ಕೋವಿಡ್-19 ಪ್ರಕರಣಗಳು ಅನುಗುಣವಾದ ಸಾವುಗಳು ತುಂಬಾ ಕಡಿಮೆ ಎಂದು ಸರ್ಕಾರ ಹೇಳಿದೆ.
ಮುನ್ನೆಚ್ಚರಿಕೆಗಳನ್ನು ಮುಂದುವರಿಸಬೇಕಾಗಿದೆ ಎಂದು ಪ್ರತಿಪಾದಿಸಿದ ಸರ್ಕಾರ, ಕೋವಿಡ್ ಪ್ರಕರಣಗಳ ಆರಂಭಿಕ ಸೂಚನೆಯನ್ನ ಕೆಲವು ಸ್ಥಳಗಳಲ್ಲಿ ವರದಿ ಮಾಡಲಾಗಿದೆ ಎಂದು ತಿಳಿಸಿದ್ದು, ಈ ಪ್ರವೃತ್ತಿಯನ್ನು ಗಮನಿಸಬೇಕಾಗಿದೆ ಎಂದು ಹೇಳಿದೆ.
ಸಕ್ರಿಯ ಕೋವಿಡ್ ಪ್ರಕರಣಗಳ ವಿಷಯದಲ್ಲಿ ಅಗ್ರ 10 ರಾಜ್ಯಗಳು ದೇಶದ ಒಟ್ಟು ಸಕ್ರಿಯ ಸೋಂಕುಗಳಲ್ಲಿ ಶೇಕಡಾ 77ಕ್ಕೂ ಹೆಚ್ಚು ಹೊಂದಿವೆ ಎಂದು ಸರ್ಕಾರ ಹೇಳಿದೆ. ಅವುಗಳೆಂದ್ರೆ, ಕರ್ನಾಟಕ, ಕೇರಳ, ತಮಿಳುನಾಡು, ಗುಜರಾತ್, ಆಂಧ್ರಪ್ರದೇಶ ಮತ್ತು ರಾಜಸ್ಥಾನಗಳಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚು ದಾಖಲಿಸಲ್ಪಡುತ್ತಿದೆ ಎಂದು ಸರ್ಕಾರ ಮಾಹಿತಿ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ ರಘುವಂಶಿ ಹತ್ಯೆಯಾಗುವ ಮುನ್ನ ಪತ್ನಿ ಸೋನಂ ಜೊತೆಗಿದ್ದ ವಿಡಿಯೋ ವೈರಲ್

ಹಾಸನದ ಬೆನ್ನಲ್ಲೇ ಬೆಂಗಳೂರಿನ ಕೆಲವು ಶಾಲೆಗಳಿಗೆ ಬಾಂಬ್‌ ಬೆದರಿಕೆ: ರಾಜ್ಯ ರಾಜಧಾನಿಯಲ್ಲಿ ಹೈಲರ್ಟ್‌

Israel-Iran conflict: ಇರಾನ್‌ನಲ್ಲಿ ಮೃತರ ಸಂಖ್ಯೆ 230ಕ್ಕೆ ಏರಿಕೆ: 1,277ಕ್ಕೂ ಅಧಿಕ ಮಂದಿ ಗಾಯ

Karnataka Rains: ಮಂಗಳೂರಿನಲ್ಲಿ ಈಗ ಇರೋದು ರೋಡಲ್ಲ ಎಲ್ಲಾ ತೋಡು

16ನೇ ಜನಗಣತಿಗೆ ಮೂಹೂರ್ತ ಫಿಕ್ಸ್‌: ಜಾತಿಗಣತಿಗೂ ಗ್ರೀನ್‌ಸಿಗ್ನಲ್‌, ಎಷ್ಟು ಹಂತದಲ್ಲಿ ನಡೆಯುತ್ತೆ ಗೊತ್ತಾ

ಮುಂದಿನ ಸುದ್ದಿ
Show comments