Webdunia - Bharat's app for daily news and videos

Install App

12 ದೇಶಗಳಲ್ಲಿ ಕಂಡುಬಂದ ಹೊಸ ರೂಪಾಂತರಿ ಒಮಿಕ್ರೋನ್ ವೈರಸ್

Webdunia
ಸೋಮವಾರ, 29 ನವೆಂಬರ್ 2021 (20:16 IST)
ಕೋವಿಡ್‌ ಹೊಸ ರೂಪಾಂತರಿ ಒಮಿಕ್ರೋನ್ ವೈರಾಣು ಸುಮಾರು 12 ದೇಶಗಳಲ್ಲಿ ಕಂಡು ಬಂದಿದೆ.
 
 ಕಳೆದ 12-13 ದಿನಗಳಲ್ಲಿ ದಕ್ಷಿಣಆಫ್ರಿಕಾ ಸೇರಿದಂತೆ ಹಲವು ದೇಶಗಳಿಂದ ಬಂದ ಪ್ರಯಾಣಿಕರ ಮೇಲೆ ನಿಗಾ ಇರಿಸಿ ಸಂಪರ್ಕಿತರನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಹೇಳಿದರು.
 
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಮಿಕ್ರೋನ್​​​ ವೈರಾಣು ಹಿಂದೆ ನಾಲ್ಕು ದೇಶಗಳಲ್ಲಿ ಕಂಡು ಬಂದಿತ್ತು. ಈಗ ಒಟ್ಟು 12 ದೇಶಗಳಲ್ಲಿ ಪತ್ತೆಯಾಗಿದೆ. ದೇಶದಲ್ಲಿ ವಿದೇಶಿ ಪ್ರಯಾಣಿಕರ ಮೇಲೆ ನಿಗಾ ಇರಿಸಲಾಗಿದೆ ಎಂದರು.
 
ರಾಜ್ಯ ಸರ್ಕಾರ ಕೂಡ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ. ನಾಳೆ ಆರೋಗ್ಯ ಇಲಾಖೆಯಿಂದ ವಿಶೇಷ ಸಭೆ ನಡೆಯಲಿದ್ದು, ಎಲ್ಲಾ ಹಿರಿಯ ಅಧಿಕಾರಿಗಳು, ವೈದ್ಯರು, ತಾಂತ್ರಿಕ ಸಲಹಾ ಸಮಿತಿ ತಜ್ಞರು ಪಾಲ್ಗೊಳ್ಳಲಿದ್ದಾರೆ. ಸರ್ಕಾರ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಈ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯಲಿದೆ. ಮುಂದಿನ ದಿನಗಳಲ್ಲಿ ಸರ್ಕಾರ ನೀಡುವ ಮಾರ್ಗಸೂಚಿ, ಅದರ ಪಾಲನೆ ಹೇಗಾಗಬೇಕು ಎಂಬುದರ ಬಗ್ಗೆ ಇಲ್ಲಿ ಚರ್ಚೆಯಾಗಲಿದೆ ಎಂದು ತಿಳಿಸಿದರು.
 
ಕೋವಿಡ್‌ನಿಂದ ಈಗಾಗಲೇ ಜನರು ನೊಂದಿದ್ದು, ಬಹಳ ನಷ್ಟ ಅನುಭವಿಸಿದ್ದಾರೆ. ಆದ್ದರಿಂದ ಜನರು ಆತಂಕಕ್ಕೆ ಒಳಗಾಗುವಂತೆ ಮಾಡಬಾರದು. ಈ ವಿಚಾರದಲ್ಲಿ ಸಾಮಾಜಿಕ ಜಾಲತಾಣಗಳು ತಪ್ಪು ಸುದ್ದಿ ಹರಡಬಾರದು. 
 
ಲಾಕ್​​​ಡೌನ್ ಕುರಿತು ಸರ್ಕಾರದ ಮುಂದೆ ಯಾವುದೇ ಪ್ರಸ್ತಾಪ ಇಲ್ಲ. ಹೀಗಾಗಿ ಆ ಬಗ್ಗೆ ಹೆದರಿಸುವ ಕೆಲಸ ಆಗಬಾರದು. ಆದರೆ ವೈರಾಣು ಕುರಿತು ಜಾಗೃತಿ ಕಾರ್ಯಗಳು ಹೆಚ್ಚಾಗಿ ನಡೆಯಬೇಕು. ಹೊಸ ವೈರಾಣು ಡೆಲ್ಟಾ ರೂಪಾಂತರಿಯಷ್ಟು ಅಪಾಯಕಾರಿ ಅಲ್ಲ ಎಂದು ಕೆಲ ತಜ್ಞರು ತಿಳಿಸಿದ್ದಾರೆ. 
 
ಆದರೆ ವೈರಾಣು ವರ್ತನೆ ಬಗ್ಗೆ ಜಿನೊಮಿಕ್ ಸೀಕ್ವೆನ್ಸಿಂಗ್ ಆದ ನಂತರ ನಿಖರ ಮಾಹಿತಿ ಲಭ್ಯವಾಗಲಿದೆ. ಡಿ.01 ರ ನಂತರ ಒಮಿಕ್ರೋನ್ ಅಧ್ಯಯನದ ವಿವರಗಳು ದೊರೆಯಲಿವೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬಿ.ಎಸ್‌.ಯಡಿಯೂರಪ್ಪ ಮೊಮ್ಮಗನ ಆರತಕ್ಷತೆಗೆ ಗಣ್ಯರ ದಂಡು: ಉಪರಾಷ್ಟ್ರಪತಿ, ರಾಜ್ಯಪಾಲ ಸಿ.ಎಂರಿಂದ ಶುಭಹಾರೈಕೆ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

ಮುಂದಿನ ಸುದ್ದಿ
Show comments