Webdunia - Bharat's app for daily news and videos

Install App

ಆಗಸ್ಟ್ 31ರಂದು ವೇತನ ಸಹಿತ ಕಾರ್ಮಿಕರಿಗೆ ರಜೆ

Webdunia
ಶುಕ್ರವಾರ, 24 ಆಗಸ್ಟ್ 2018 (20:43 IST)
ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ-2018ರ ಹಿನ್ನೆಲೆಯಲ್ಲಿ ಆಗಸ್ಟ್ 31ರಂದು ಮತದಾನ ನಡೆಯಲಿದೆ. ಜಿಲ್ಲೆಯ ಮತದಾನ ನಡೆಯಲಿರುವ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ನೋಂದಾಯಿತರಾದ ಅರ್ಹ ಮತದಾರರಾಗಿರುವ ಎಲ್ಲ ಕಾರ್ಮಿಕರಿಗೆ ಮತ ಚಲಾಯಿಸಲು ಅನುಕೂಲವಾಗುವುಂತೆ  ಆ. 31ರಂದು ವೇತನ ಸಹಿತ ರಜೆ ನೀಡಲು ಸರಕಾರ ಆದೇಶ ನೀಡಿದೆ.

ಮತದಾನದ ದಿನ ಕಾರ್ಮಿಕರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಜಿಲ್ಲೆಯ ಎಲ್ಲ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ 1963ರ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳ (ರಾಷ್ಟ್ರೀಯ ಹಾಗೂ ಹಬ್ಬದ ರಜಾ ದಿನಗಳು) ಕಾಯ್ದೆಯ ಕಲಂ 3-ಎ ಹಾಗೂ 1951ರ ಪ್ರಜಾ ಪ್ರತಿನಿಧಿ ಕಾಯ್ದೆ, ಸೆಕ್ಷನ್ 135(ಬಿ) ರಡಿಯಲ್ಲಿ ವೇತನ ಸಹಿತ ರಜೆ ಘೋಷಿಸಿ ಸಂವಿಧಾನಾತ್ಮಕ ಹಕ್ಕದಾ ಮತವನ್ನು ಚಾಯಿಸುವುದಕ್ಕಾಗಿ ಎಲ್ಲ ಸಂಸ್ಥೆಗಳು, ನಿಯೋಜಕರು ಅನುವು ಮಾಡಿಕೊಡಬೇಕು.

ಚುನಾವಣೆ ನಡೆಯುವ ಸ್ಥಳಗಳಲ್ಲಿ ಅರ್ಹ ಕಾರ್ಮಿಕರು ಮತ ಚಲಾಯಿಸಲು ಅನುಕೂಲವಾಗುವಂತೆ ಎಲ್ಲ ಕಾರ್ಖಾನೆಗಳು, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳ ಮಾಲೀಕರು ವೇತನ ಸಹಿತ ರಜೆ ನೀಡಲು ಸರ್ಕಾರ ಆದೇಶಿಸಿದ್ದು, ಇದಕ್ಕೆ ತಪ್ಪಿದ್ದಲ್ಲಿ ಸಂಬಂಧಪಟ್ಟ ಸಂಸ್ಥೆ, ನಿಯೋಜಕರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಆದೇಶ ಪತ್ರದಲ್ಲಿ ತಿಳಿಸಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

ಮುಂದಿನ ಸುದ್ದಿ
Show comments