Webdunia - Bharat's app for daily news and videos

Install App

ಸಿಎಂ ತವರು ಜಿಲ್ಲೆಯಲ್ಲಿ ಸಂಚಲನ: ಎಚ್‌.ವಿಶ್ವನಾಥ್ ಜೆಡಿಎಸ್ ಪಕ್ಷದ ತೆಕ್ಕೆಗೆ

Webdunia
ಭಾನುವಾರ, 2 ಜುಲೈ 2017 (12:52 IST)
ಇತ್ತೀಚೆಗೆ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಮಾಜಿ ಸಂಸದ ಎಚ್.ವಿಶ್ವನಾಥ್, ಮಂಗಳವಾರದಂದು ಅಧಿಕೃತವಾಗಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.
 
ಕಳೆದ 40 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಜ್ಜನ ರಾಜಕಾರಣಿ ಎಂದು ಹೆಸರುವಾಸಿಯಾಗಿದ್ದ ಮಾಜಿ ಸಂಸದ ವಿಶ್ವನಾಥ್, ಕಾಂಗ್ರೆಸ್ ನಾಯಕರ ವರ್ತನೆ, ನಿರ್ಲಕ್ಷ್ಯಧೋರಣೆಯಿಂದ ಬೇಸತ್ತು ಪಕ್ಷಕ್ಕೆ ಗುಡ್‌ಬೈ ಹೇಳಿದ್ದಾರೆ ಎನ್ನಲಾಗಿದೆ.
 
ಸುದ್ದಿಗಾರರೊಂದಿಗೆ ಮಾತನಾಡಿದ ವಿಶ್ವನಾಥ್, ಅಂಗಳ ಮಾತ್ರ ಬದಲಾಗುತ್ತದೆ ಆಟ ಬದಲಾಗುವುದಿಲ್ಲ. ನನ್ನ ಮನಸ್ಸು ಪ್ರಾದೇಶಿಕ ಪಕ್ಷದತ್ತ ಒಲವು ತೋರುತ್ತಿದೆ. ಜೆಡಿಎಸ್ ಪಕ್ಷದಲ್ಲಿರುವವರು ಎಲ್ಲರು ಚಿರಪರಿಚಿತರಾಗಿದ್ದಾರೆ. ಎಲ್ಲರು ಒಟ್ಟಾಗಿ ಕೆಲಸ ಮಾಡುವ ಆಸೆಯಿದೆ ಎಂದರು.
 
ದೇವೇಗೌಡರು ದೇಶದ ಪರಮೋಚ್ಚ ಸ್ಥಾನವನ್ನು ಅಲಂಕರಿಸಿದ್ದಾರೆ. ರಾಜ್ಯದ ಏಳಿಗೆಗಾಗಿ ತಮ್ಮ ಜೀವನವನ್ನೇ ಸವೆಸಿದ್ದಾರೆ. ಅಂತಹ ನಾಯಕ ನಮ್ಮ ರಾಜ್ಯದಲ್ಲಿರುವುದು ನಮ್ಮ ಪುಣ್ಯ ಎಂದು ಮಾಜಿ ಸಂಸದ ಎಚ್.ವಿಶ್ವನಾಥ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments