Webdunia - Bharat's app for daily news and videos

Install App

ವಿಜಯಪುರ ಹಬ್ಬದ ದಿನವೇ ಸೂತಕದ ಛಾಯೆ, ಸ್ನಾನಕ್ಕೆ ಹೋದ ಮೂವರು ನೀರುಪಾಲು

Sampriya
ಭಾನುವಾರ, 30 ಮಾರ್ಚ್ 2025 (22:52 IST)
ವಿಜಯಪುರ: ಆಲಮಟ್ಟಿ ಜಲಾಶಯದ ಮುಂಭಾಗದ ರೈಲ್ವೆ ಸೇತುವೆ ಕೆಳಗೆ ಕೃಷ್ಣಾ ನದಿಯಲ್ಲಿ ಯುಗಾದಿ ಪಾಡ್ಯದ ಅಂಗವಾಗಿ ಸ್ನಾನಕ್ಕೆ ತೆರಳಿದ್ದ ಮೂವರು ಯುವಕರು ನೀರು ಪಾಲಾಗಿದ್ದಾರೆ.

ಮೂವರಲ್ಲಿ ಒಬ್ಬ ಯುವಕನ ಶವ ಪತ್ತೆಯಾಗಿದ್ದು, ನಾಪತ್ತೆಯಾದ ಇನ್ನಿಬ್ಬರಿಗಾಗಿ ಹುಡುಕಾಟ ನಡೆದಿದೆ. ಮೂವರು ಬಾಗಲಕೋಟೆ ತಾಲ್ಲೂಕಿನ ಇಲ್ಯಾಳ ಗ್ರಾಮದವರು.

ಮೃತರನ್ನು ಸೋಮಶೇಖರ ಬೊಮ್ಮಣ್ಣ ದೇವರಮನಿ (15) ಶವ ಪತ್ತೆಯಾಗಿದೆ. ಇನ್ನೂ ಕೃಷ್ಣಾ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಮಲ್ಲಪ್ಪ ಬಸಪ್ಪ ಬಗಲಿ (15), ಪರನಗೌಡ ಮಲ್ಲಪ್ಪ ಬೀಳಗಿ (17) ಕಾಣೆಯಾಗಿದ್ದು, ಅವರಿಗಾಗಿ ಕೃಷ್ಣಾ ನದಿಯಲ್ಲಿ ಹುಡುಕಾಟ ನಡೆದಿದೆ.

ಘಟನೆ ನಡೆದ ತಕ್ಷಣ ಮೀನುಗಾರರು ಕಾಣೆಯಾದವರ ಹುಡುಕಾಟ ನಡೆಸಿದರು. ಒಬ್ಬ ಯುವಕನ ಶವ ಹೊರಗೆ ತೆಗೆದರು. ಕಾಣೆಯಾದವರ ಹುಡುಕಾಟಕ್ಕಾಗಿ ಬಾಗಲಕೋಟೆಯಿಂದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments