Webdunia - Bharat's app for daily news and videos

Install App

ಇದೇ 28, 29 ರಂದು ಮತ್ತೆ ಮೋದಿ ರಾಜ್ಯಕ್ಕೆ ದೌಡು: ಉತ್ತರ ಕರ್ನಾಟಕದಲ್ಲಿ ಮತಬೇಟೆಗೆ ಸಿದ್ಧತೆ

Sampriya
ಮಂಗಳವಾರ, 23 ಏಪ್ರಿಲ್ 2024 (15:25 IST)
Photo Courtesy X
ಬೆಂಗಳೂರು: ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ದೇಶದಾದ್ಯಂತ ಭರ್ಜರಿ ಪ್ರಚಾರ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಈ ವಾರಾಂತ್ಯದಲ್ಲಿ ಉತ್ತರ ಕರ್ನಾಟಕಕ್ಕೂ ಆಗಮಿಸಲಿದ್ದಾರೆ.

ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದ ಬಳಿಕ ಪ್ರಧಾನಿ ಮೋದಿ ಮೊದಲ ಬಾರಿಗೆ ಉತ್ತರ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ಏಪ್ರಿಲ್ 28 ಹಾಗೂ 29 ರಂದು ಆರು ಕಡೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮತಬೇಟೆ ಮಾಡಲಿದ್ದಾರೆ. 12 ಕ್ಷೇತ್ರಗಳ ಟಾರ್ಗೆಟ್ ಮಾಡಿ ಎರಡು ದಿನ ಆರು ಕಡೆ ಬೃಹತ್ ಸಮಾವೇಶ ನಡೆಸಲಿದ್ದಾರೆ.

28 ರಂದು ದಾವಣಗೆರೆ, ಕಾರವಾರ, ಬೆಳಗಾವಿ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ. ಅಂದು ಪ್ರಧಾನಿ ಮೋದಿ ಬೆಳಗಾವಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಎಪ್ರಿಲ್ 29 ರಂದು ವಿಜಯಪುರ, ಕೊಪ್ಪಳ ಹಾಗೂ ಕಲಬುರಗಿ ಬಿಜೆಪಿ ಅಭ್ಯರ್ಥಿಗಳ ಪರ ಮತ ಯಾಚಿಸಲಿದ್ದಾರೆ.

ಉತ್ತರ ಕರ್ನಾಟಕ ಭಾಗದಲ್ಲಿ ಬಿಜೆಪಿ ಹೆಚ್ಚು ಪ್ರಾಬಲ್ಯ ಹೊಂದಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು. ಇದನ್ನು ಹೀಗೆ ಮುಂದುವರೆಸಲು ಉತ್ತರ ಕರ್ನಾಟಕ ಭಾಗಕ್ಕೆ ನರೇಂದ್ರ ಮೋದಿ ಬರಲಿದ್ದಾರೆ. ಕಿತ್ತೂರು ಕರ್ನಾಟಕ, ಮಧ್ಯ ಕರ್ನಾಟಕ, ಕಲ್ಯಾಣ ಕರ್ನಾಟಕದಲ್ಲಿ ಭಾಗದಲ್ಲಿ ಬಿಜೆಪಿಯನ್ನು ಇನ್ನಷ್ಟು ಸುಭದ್ರಗೊಳಿಸಲು ಪ್ರಧಾನಿ ಮೋದಿ ದೌಡಾಯಿಸಲಿದ್ದಾರೆ.

ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ದಕ್ಷಿಣ ಕರ್ನಾಟಕ ಭಾಗದಲ್ಲಿ ಮೊದಲ ಹಂತದ ಮತದಾನ ಏಪ್ರಿಲ್​ 26 ರಂದು ನಡೆಯಲಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಎರಡನೇ ಹಂತದ ಮತದಾನ ಮೇ 7 ರಂದು ನಡೆಯಲಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments