Select Your Language

Notifications

webdunia
webdunia
webdunia
webdunia

ಮತ್ತೆ ಸಚಿವ ಡಿ.ಕೆ.ಶಿವಕುಮಾರ್‌ಗೆ ಐಟಿ ಸಮನ್ಸ್ ಜಾರಿ

ಡಿ.ಕೆ.ಶಿವಕುಮಾರ್
ಬೆಂಗಳೂರು , ಬುಧವಾರ, 9 ಆಗಸ್ಟ್ 2017 (15:13 IST)
ಆದಾಯ ತೆರಿಗೆ ದಾಳಿ ಕುರಿತ ವಿಚಾರಣೆಗೆ ಹಾಜರಾಗುವಂತೆ ಐಟಿ ಅಧಿಕಾರಿಗಳು ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್‌ಗೆ ನೋಟಿಸ್ ಜಾರಿಗೊಳಿಸಿದ್ದಾರೆ.
 
ನಾಳೆ, ಸಚಿವ ಡಿ.ಕೆ.ಶಿವಕುಮಾರ್,  ಶಿವಕುಮಾರ್ ಅವರ ಮಾವ ತಿಮ್ಮಯ್ಯ, ಶರ್ಮಾ ಟ್ರಾವೆಲ್ಸ್ ಮಾಲೀಕ ಸುನೀಲ್ ಶರ್ಮಾ ಎಂಎಸ್‌ ಸಿ ರವಿವರ್ಮಾ, ಸಂಸದ ಡಿ.,ಕೆ.ಸುರೇಶ್, ಜ್ಯೋತಿಷಿ ದ್ವಾರಕನಾಥ್ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.
 
ಆದಾಯ ತೆರಿಗೆ ದಾಳಿಯಲ್ಲಿ ಲಭ್ಯವಾದ ಬ್ಯಾಂಕ್‌ ಖಾತೆಗಳ ಬಗ್ಗೆ ತನಿಖೆ ನಡೆಯುತ್ತಿರುವುದರಿಂದ, ವಿಚಾರಣೆಯಲ್ಲಿ ಉಪಸ್ಥಿತರಿರಬೇಕು ಎಂದು ಆದಾಯ ತೆರಿಗೆ ಇಲಾಖೆ ಕೋರಿದೆ.
 
ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಮೇಲೆ ಐಟಿ ಅಧಿಕಾರಿಗಳು ನಡೆಸಿದ ದಾಳಿ ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ವಿದ್ಯಾರ್ಥಿನಿಯರೇ ವಿದ್ಯಾರ್ಥಿನಿಯನ್ನು ನಗ್ನಗೊಳಿಸಿ ಹಲ್ಲೆ, ವಿಡಿಯೋ ಚಿತ್ರಣ