Webdunia - Bharat's app for daily news and videos

Install App

ಯಡಿಯೂರಪ್ಪನವರೇ ಯಾಕೆ ನಿಮಗೆ ಬ್ರಿಗೇಡ್ ಬೇಡ?: ಮತ್ತೆ ಯಡ್ಡಿಗೆ ಈಶ್ವರಪ್ಪ ಟಾಂಗ್

Webdunia
ಬುಧವಾರ, 11 ಜನವರಿ 2017 (14:34 IST)
ಮಾಜಿ ಮೇಯರ್ ವೆಂಕಟೇಶ ಮೂರ್ತಿ ಅವರಿಗೆ ಎಂಟಾಣೆ ಖರ್ಚು ಮಾಡಿ ನೋಟಿಸ್ ಕೊಟ್ಟಿದ್ದಾರೆ. ಅಮಾನತು ಮೂಲಕ ರಾಜ್ಯಮಟ್ಟದ ನಾಯಕರನ್ನಾಗಿ ಮಾಡಿದ್ದಾರೆ. ಇದಕ್ಕೆ ಬಿಎಸ್‌ವೈ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ ಟಾಂಗ್ ನೀಡಿದ್ದಾರೆ.
ರಾಯಣ್ಣ ಬ್ರಿಗೇಡ್ ಸಭೆಯಲ್ಲಿ ಮಾತನಾಡಿದ ಅವರು, ವೆಂಕಟೇಶ ಮೂರ್ತಿ ಅವರನ್ನು ಅಮಾನತು ಮಾಡಿರುವುದರಿಂದ ಎಲ್ಲರೂ ಹೆದರಿರುತ್ತಾರೆ. ಬಿಎಸ್‌ವೈ ಮನಸ್ಸಿನಲ್ಲಿ ಇನ್ನೂ ಗೊಂದಲ ಇದೆ. ಅವರಿಗೆ ಬ್ರಿಗೇಡ್ ಬೇಡ ಎಂದು ಯಾರೋ ಹೇಳಿರುತ್ತಾರೆ. ಯಡಿಯೂರಪ್ಪನವರೇ ಯಾಕೆ ನಿಮಗೆ ಬ್ರಿಗೇಡ್ ಬೇಡ ಎಂದು ನೇರವಾಗಿ ಪ್ರಶ್ನಿಸಿದರು. 
 
ದ್ವಂದ್ವ ಹೇಳಿಕೆ ನೀಡುತ್ತಿರುವ ಈಶ್ವರಪ್ಪ.....
 
ವೈಯಕ್ತಿಕವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಲಿ ಅನ್ನೋ ಆಸೆ. ಆದರೆ, ಹಿಂದುಳಿದ ವರ್ಗಗಳ ಅಭಿವೃದ್ಧಿಯೇ ಬ್ರಿಗೇಡ್‌ನ ಉದ್ದೇಶ. ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರ ತರಲು ಶ್ರಮಿಸುತ್ತೇನೆ ಎಂದು ದ್ವಂದ್ವ ಹೇಳಿಕೆ ನೀಡಿದರು
 
ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ನಲ್ಲಿ ಗುರುತಿಸಿಕೊಂಡ ಹಿನ್ನೆಲೆಯಲ್ಲಿ ರಾಯಣ್ಣ ಬ್ರಿಗೇಡ್‌ನ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಮೇಯರ್ ವೆಂಕಟೇಶ ಮೂರ್ತಿ ಅವರನ್ನು ಬಿಜೆಪಿ ಪಾಳಯದಿಂದ ಅಮಾನತು ಮಾಡಲಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments