Webdunia - Bharat's app for daily news and videos

Install App

ಬಿಜೆಪಿ ಅಧಿಕಾರಕ್ಕೆ ಬಂದ್ರೆ 7ನೇ ವೇತನ ಆಯೋಗ ನೇಮಕ: ಯಡಿಯೂರಪ್ಪ

Webdunia
ಸೋಮವಾರ, 9 ಜನವರಿ 2017 (14:32 IST)
ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಮರುಕ್ಷಣವೇ 7ನೇ ವೇತನ ಆಯೋಗವನ್ನು ನೇಮಕ ಮಾಡಲಾಗುವುದು ಎಂದು ಬಿಜೆಪಿ ರಾಜ್ಯಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.
 
ತುಮಕೂರು ಜಿಲ್ಲೆಯ ಬಾವಿಕಟ್ಟೆ ಕಲ್ಯಾಣ ಮಂಟಪದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ ಸಂಬಂಧ ಹಮ್ಮಿಕೊಂಡಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಆಡಳಿತಾರೂಢ ಕಾಂಗ್ರೆಸ್ ಪಕ್ಷ 7ನೇ ವೇತನ ಆಯೋಗ ರಚಿಸುವುದಾಗಿ ಹೇಳಿ ಸರಕಾರಿ ನೌಕರರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದೆ ಎಂದು ದೂರಿದರು.
 
ಈ ಹಿಂದೆ ನಾನು ಮುಖ್ಯಮಂತ್ರಿ ಆಗಿದ್ದ ವೇಳೆ ಸರಕಾರಿ ನೌಕರರಿಗೆ 5 ಹಾಗೂ 6ನೇ ವೇತನವನ್ನು ಜಾರಿಗೊಳಿಸಿದ್ದೆ. ಇದನ್ನು ಶಿಕ್ಷಕ ಬಂಧುಗಳು ಮರೆತಿಲ್ಲ. ಶಿಕ್ಷಕರ ಕ್ಷೇತ್ರದ ಈ ಚುನಾವಣೆ ಮುಂದಿನ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಎಂದರು.  
 
ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಕೆರೆ ಕಟ್ಟೆಗಳಲ್ಲಿ ನೀರಿಲ್ಲ. ಸರಕಾರ ಮುಂಬರುವ ಮಳೆಯ ನೀರನ್ನು ಸಂಗ್ರಹಿಸುವ ನಿಟ್ಟಿನಲ್ಲಿ ಕೆರೆಗಳ ಹೂಳು ತೆಗೆಸುವ ಕೆಲಸ ಮಾಡಬೇಕು. ಮಳೆ ನೀರು ಪೋಲಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಬಿಜೆಪಿ ರಾಜ್ಯಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ 52ನೇ ಸಿಜೆಐ ಆಗಿ ನೇಮಕಗೊಂಡ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಹಿನ್ನಲೆ ಇಲ್ಲಿದೆ

Prajwal Revanna: ವಕೀಲರನ್ನೂ ನೇಮಿಸಿಕೊಂಡಿಲ್ಲ: ಪ್ರಜ್ವಲ್ ರೇವಣ್ಣ ಪರಿಸ್ಥಿತಿ ಏನಾಗಿದೆ ನೋಡಿ

PM Modi: ಉಗ್ರರ ದಮನಕ್ಕೆ ಸೇನೆಗೆ ಸಂಪೂರ್ಣ ಪವರ್ ಕೊಟ್ಟ ಪ್ರಧಾನಿ ಮೋದಿ

K Annamalai: ಮೋದಿ, ಅಮಿತ್ ಶಾ ಹೆಸರಲ್ಲಿ ಅಮೆರಿಕದಲ್ಲಿ ಅಣ್ಣಾಮಲೈ ವಿಶೇಷ ಪೂಜೆ

ಉಗ್ರರ ಹಿಮ್ಮೆಟ್ಟಿಸಲು ಐಕ್ಯತೆ ಅವಶ್ಯಕ: ಮಾಜಿ ಪ್ರಧಾನಿ ದೇವೇಗೌಡ

ಮುಂದಿನ ಸುದ್ದಿ
Show comments