ಓರ್ವ ವೈದ್ಯೆ, ಮೂವರು ನರ್ಸ್ ಅಮಾನತು

Webdunia
ಶುಕ್ರವಾರ, 4 ನವೆಂಬರ್ 2022 (18:38 IST)
ತಾಯಿ ಹಾಗೂ ಅವಳಿ ಮಕ್ಕಳು ಸಾವನ್ನಪ್ಪಿರುವ ಘಟನೆಗೆ ಸಂಬಂಧಪಟ್ಟಂತೆ ಜಿಲ್ಲಾಸ್ಪತ್ರೆಗೆ ಆರೋಗ್ಯ ಸಚಿವ ಸುಧಾಕರ್ ಭೇಟಿ ನೀಡಿದ್ರು. ಈ ಬಗ್ಗೆ ಮಾತನಾಡಿದ ಅವರು, ಸ್ಥಳೀಯರು ನಿನ್ನೆ 10 ಗಂಟೆ ವೇಳೆಗೆ ತುಂಬು ಗರ್ಭಿಣಿ ಮಹಿಳೆಯನ್ನು ಇಬ್ಬರು ಕರೆದುಕೊಂಡು ಬಂದಿದ್ದಾರೆ. ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಯನ್ನು ದಾದಿಯರು ಒಳಗಡೆ ಕರೆದುಕೊಂಡು ಹೋದ ವೀಡಿಯೋವನ್ನು ಸಿಸಿ ಕ್ಯಾಮೆರಾದಲ್ಲಿ ನೋಡಿದ್ದೇವೆ. ನಂತರ ತಾಯಿ ಕಾರ್ಡ್, ಆಧಾರ್ ಕಾರ್ಡ್ ಕೇಳಿದ್ದಾರೆ. ಅದ್ಯಾವುದೂ ಆಕೆಯ ಬಳಿ ಇರಲಿಲ್ಲ. ಆಕೆಗೆ ಮೊದಲ ಹೆರಿಗೆ ನಾರ್ಮಲ್ ಆಗಿದೆ. ಇದು ಕೂಡ ಹಾಗೇ ಆಗುತ್ತೆ ಅಂದುಕೊಂಡಿದ್ದಾರೆ. ದಾದಿಯರು ವಿಶೇಷ ಆರೈಕೆಯಲ್ಲಿ ಆ ಮಹಿಳೆಗೆ ತಕ್ಷಣ ಚಿಕಿತ್ಸೆ ಕೊಡಬಹುದಿತ್ತು. ಆದರೆ ಅದು ಆಗಿಲ್ಲ. ಮೇಲ್ನೋಟಕ್ಕೆ ಇದು ಹೆರಿಗೆ ವಾರ್ಡಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮೂವರು ನರ್ಸ್​​ಗಳು ಕರ್ತವ್ಯಲೋಪ ಎಸಗಿದ್ದಾರೆ ಅಂತಾ ಅನಿಸಿದೆ. ಅಲ್ಲಿ ಡ್ಯೂಟಿ ಡಾಕ್ಟರ್ ಕೂಡ ಇದ್ದರು. ಇದು ಕರ್ತವ್ಯ ನಿರ್ಲಕ್ಷ ಅಷ್ಟೇ ಅಲ್ಲಾ. ಅಮಾನುಷವಾಗಿ ನಡೆದುಕೊಂಡಿದ್ದಾರೆ. ಈ ಘಟನೆಯಿಂದ ನಾನು ದಿಗ್ಭ್ರಮೆಗೊಳಗಾಗಿದ್ದೇನೆ. ಓರ್ವ ವೈದ್ಯೆ, ಮೂವರು ನರ್ಸ್ ಗಳನ್ನ ಅಮಾನತು ಮಾಡಲಾಗಿದೆ. ನತದೃಷ್ಟ ಹೆಣ್ಣು ಮಗು ಇಂದು ನಿರ್ಗತಿಕಳಾಗಿದ್ದಾಳೆ. ಜಿಲ್ಲಾಡಳಿತದಿಂದ 18 ವರ್ಷದವರೆಗೂ ಉಚಿತ ಶಿಕ್ಷಣ, ವಸತಿ ಕಲ್ಪಿಸಲು ವ್ಯವಸ್ಥೆ ಮಾಡ್ತೇವೆ. ವೈಯಕ್ತಿಕವಾಗಿ ನಾನು ಆಕೆಯ ಅಕೌಂಟ್​​​ನಲ್ಲಿ ಎಫ್‌ಡಿ ಮಾಡಲು ಇಚ್ಚಿಸಿದ್ದೇನೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿಕೆ ನೀಡಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿರೋದು ಎರಡೇ ಪಕ್ಷ, ಮೂರನೆಯದ್ದು ಆಟಕ್ಕುಂಟು ಲೆಕ್ಕಕ್ಕಿಲ್ಲ: ಡಿಕೆ ಶಿವಕುಮಾರ್ ವ್ಯಂಗ್ಯ

ಕೋಗಿಲು ಅಕ್ರಮ ನಿವಾಸಿಗಳಿಗೆ ಮನೆ, ಈ ಕಂಡೀಷನ್ ಪೂರೈಸಬೇಕು ಎಂದ ಜಮೀರ್ ಅಹ್ಮದ್

Arecanut Price: ಅಡಿಕೆ ಬೆಲೆಯಲ್ಲಿ ಇಂದು ಮತ್ತೆ ಏರಿಕೆ

ಕುಮಾರಸ್ವಾಮಿಯವರು ನೀವು ರಬ್ಬರ್ ಸ್ಟಾಂಪ್ ಮಿನಿಸ್ಟರ್ ಅಂತಾರೆ ಎಂದಿದ್ದಕ್ಕೆ ಸಚಿವ ಪರಮೇಶ್ವರ್ ಹೇಳಿದ್ದೇನು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments