Webdunia - Bharat's app for daily news and videos

Install App

ಮದ್ಯ ಸೇವಿಸಲು ನೂರು ರೂ. ಕೇಳಿದ್ದಕ್ಕೆ ಕೊಲೆ!

Webdunia
ಸೋಮವಾರ, 20 ಡಿಸೆಂಬರ್ 2021 (08:13 IST)
ಬೆಂಗಳೂರು : ಮದ್ಯಪಾನ ಮಾಡಲು ನೂರು ರೂ. ಹಣ ಕೇಳಿದ್ದ ವ್ಯಕ್ತಿಯೊಬ್ಬನಿಗೆ ತೂಕ ಮಾಡುವ 1 ಕೆ. ಜಿ. ಕಲ್ಲಿನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದ ಆರೋಪಿಯನ್ನು ಬೆಂಗಳೂರಿನ ಕೊಡಿಗೇಹಳ್ಳಿ ಠಾಣೆ ಪೊಲೀಸರು ಮೂರು ತಿಂಗಳ ಬಳಿಕ ಬಂಧಿಸಿದ್ದಾರೆ.

ಕೇರಳ ಮೂಲದ ಸಂಶೀರ್ (28) ಬಂಧಿತ ಆರೋಪಿ. ಪ್ರತೀಕ್ ಎಸ್. ಯಾದವ್ (31) ಕೊಲೆಯಾಗಿದ್ದ ಯುವಕ.

ಅಂಗಡಿಯಲ್ಲಿದ್ದ ಸಂಶೀರ್ಗೆ ಮತ್ತೆ ಮದ್ಯಪಾನ ಮಾಡಲು 100 ರೂ. ಕೊಡುವಂತೆ ಪೀಡಿಸಿದ್ದ. ಆಗ ಇಬ್ಬರ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿದೆ.

ಇದರಿಂದ ಕೋಪಗೊಂಡ ಸಂಶೀರ್ ತೂಕ ಮಾಡುವ 1 ಕೆ. ಜಿ. ಕಲ್ಲಿನಿಂದ ಆತನ ತಲೆಗೆ, ಹಣೆಗೆ ಹೊಡೆದಿದ್ದ. ಗಾಯಗೊಂಡು ತೀವ್ರ ರಕ್ತಸ್ರಾವವಾದಾಗ ಮಾಲೀಕ ಸುರೇಶ್ ಇಬ್ಬರನ್ನು ಸಮಾಧಾನಪಡಿಸಿ ಪ್ರತೀಕ್ ಗಾಯಕ್ಕೆ ಬಟ್ಟೆ ಸುತ್ತಿದ್ದರು.

ನಂತರ ಮಾಲೀಕ ಸುರೇಶ್ ತಮ್ಮ ಸಹೋದರನನ್ನು ಕರೆಸಿ ಪ್ರತೀಕ್ನನ್ನು ಆಸ್ಪತ್ರೆಗೆ ಕಳುಹಿಸಿದ್ದಾರೆ. ಮೃತದೇಹವನ್ನು ಯಲಹಂಕ ಸಂಚಾರಿ ಠಾಣೆ ಪೊಲೀಸರು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದಾಗ, ಪ್ರತೀಕ್ನ ತಲೆಗೆ ಹೊಡೆದು ಕೊಲೆ ಮಾಡಲಾಗಿದೆ ಎಂಬ ವೈದ್ಯಕೀಯ ವರದಿ ಪೊಲೀಸರ ಕೈ ಸೇರಿತ್ತು.

ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಮೃತನನ್ನು ಆಸ್ಪತ್ರೆಗೆ ದಾಖಲಿಸಿದ ಸುಬ್ರಮಣಿಯನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದಾಗ ಅಂದು ನಡೆದ ಘಟನೆಯನ್ನು ವಿವರಿಸಿದ್ದರು.

ಬಳಿಕ ಅಂಗಡಿ ಮಾಲೀಕ ಸುರೇಶ್ನನ್ನು ಹೆಚ್ಚಿನ ವಿಚಾರಣೆ ನಡೆಸಿದಾಗ ಆರೋಪಿ ಸಂಶೀರ್ ಹಾಗೂ ಪ್ರತೀಕ್ ನಡುವೆ ಜಗಳವಾಗಿ ಹಲ್ಲೆ ಮಾಡಿರುವ ಸಂಗತಿ ಪೊಲೀಸರಿಗೆ ತಿಳಿದು ಬಂದಿದೆ. ಘಟನೆ ಬಳಿಕ ನಾಪತ್ತೆಯಾಗಿದ್ದ ಸಂಶೀರ್ನನ್ನು ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments