Select Your Language

Notifications

webdunia
webdunia
webdunia
webdunia

ಒಂದಿಂಚು ಜಾಗ ಕೂಡಾ ಡಿನೋಟಿಫೈ ಮಾಡಿಲ್ಲ: ಸಿಎಂ ಸ್ಪಷ್ಟನೆ

ಒಂದಿಂಚು ಜಾಗ ಕೂಡಾ ಡಿನೋಟಿಫೈ ಮಾಡಿಲ್ಲ: ಸಿಎಂ ಸ್ಪಷ್ಟನೆ
ಬೆಂಗಳೂರು , ಸೋಮವಾರ, 18 ಸೆಪ್ಟಂಬರ್ 2017 (16:19 IST)
ನಾನು ಒಂದಿಂಚು ಜಾಗ ಕೂಡಾ ಡಿನೋಟಿಫೈ ಮಾಡಿಲ್ಲ. ಆದರೆ, ಬಿಜೆಪಿ ನೂರಾರು ಎಕರೆ ಭೂಮಿ ಡಿನೋಟಿಫೈ ಮಾಡಿದ್ದೇನೆ ಎಂದು ಸುಳ್ಳು ಆರೋಪ ಮಾಡುತ್ತಿರುವುದಾಗಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲು ಬಿಜೆಪಿಯವರು ಮಿಷನ್ 150 ಎಂದು ಹೇಳುತ್ತಿದ್ದರು. ಇದೀಗ 150 ಪ್ಲಸ್ ಎಂದು ಹೇಳುತ್ತಿದ್ದಾರೆ ಎಂದು ಲೇವಡಿ ಮಾಡಿದರು.
 
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರಾಜ್ಯದಲ್ಲಿ 60-65 ಸ್ಥಾನಗಳನ್ನು ಮಾತ್ರ ಗೆಲ್ಲಬಹುದು ಎಂದು ಭವಿಷ್ಯ ನುಡಿದಿದ್ದಾರೆ. ಆದ್ದರಿಂದ ಸಿಕ್ಕ ಸಿಕ್ಕ ಕಡೆ ಗಲಾಟೆ ಮಾಡಿ, ಕೋಮುಗಲಭೆ ಹಬ್ಬಿಸಿ ಎಂದು ಹೇಳಿದ್ದಾಗಿ ಕಿಡಿಕಾರಿದರು.
 
ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಚಾರ್ಜ್‌ಶೀಟ್ ವಿಚಾರ ಕುರಿತಂತೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಸರಕಾರದಲ್ಲಿ ಯಾವುದೇ ಹಗರಣ, ಭ್ರಷ್ಟಾಚಾರ ನಡೆದಿಲ್ಲ. ಚಾರ್ಜ್‌ಶೀಟ್ ಸಲ್ಲಿಸಲಿ ನೋಡೋಣ ಎಂದು ಸಿಎಂ ಸಿದ್ದರಾಮಯ್ಯ ಸವಾಲ್ ಹಾಕಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಪತಕರ್ತೆ ಗೌರಿ ಲಂಕೇಶ್ ಹತ್ಯೆ ಕೇಸ್: ಜೈಲಿನಲ್ಲಿ ಮಾಜಿ ನಕ್ಸಲ್ ವಿಚಾರಣೆ