ರಾಜಧಾನಿ ಬೆಂಗಳೂರು ರೇಪ್ ಸಿಟಿಯಾಗಿರುವುದರಲ್ಲಿ ಯಾವುದೇ ಸಂಶಯವೇ ಇಲ್ಲ. ಹೊಸವರ್ಷಾಚರಣೆ ಸಂಬರ್ಧದಲ್ಲಿ ಯುವತಿಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಗಳ ಬೆನ್ನಲ್ಲೇ ಮತ್ತೊಂದು ಹೇಯ ಕೃತ್ಯ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಕೆ.ಜಿ.ಹಳ್ಳಿ ವ್ಯಾಪ್ತಿಯಲ್ಲಿ ನಿನ್ನೆ ಬೆಳ್ಳಿಗೆ 6.30 ರ ಸುಮಾರಿಗೆ ಬಸ್ಸ್ಟ್ಯಾಂಡ್ಗೆ ತೆರಳುತ್ತಿದ್ದ ಯುವತಿಯನ್ನು ಕಾಮಾಂಧನೊಬ್ಬ ಹಿಂಬಾಲಿಸಿ ತಬ್ಬಿಕೊಂಡಿದ್ದಾನೆ. ಬಳಿಕ ಯುವತಿಯ ಕೆನ್ನೆಗೆ ಚುಂಬಿಸಿ, ನಾಲಿಗೆ ಕಚ್ಚಿ ಪರಾರಿಯಾಗಿದ್ದಾನೆ. ಕಾಮಾಂಧನ ಈ ಹೇಯ ಕೃತ್ಯ ರಸ್ತೆ ಬದಿಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಈ ಘಟನೆ ವೇಳೆ ನಾಯಿಯೊಂದು ಜೋರಾಗಿ ಬೊಗಳಿದ ಕಾರಣ ಕಾಮುಕ ಅಲ್ಲಿಂದ ಪರಾರಿಯಾಗಿದ್ದಾನೆ. ಆದರೆ, ಈ ಕುರಿತು ಸಂತ್ರಸ್ತೆ ಯಾವುದೇ ದೂರು ನೀಡಿಲ್ಲ ಎಂದು ಹೇಳಲಾಗುತ್ತಿದೆ.
ಹೊಸ ವರ್ಷಾಚರಣೆ ಸಂದರ್ಭದಲ್ಲಿ ಯುವತಿಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಮತ್ತು ಕಮ್ಮನಹಳ್ಳಿಯಲ್ಲಿ ಯುವತಿಯನ್ನು ನಡುರಸ್ತೆಯಲ್ಲಿಯೇ ಅಡ್ಡಗಟ್ಟಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದ ಬೆನ್ನಲ್ಲೇ ಇಂತಹ ಹೇಯ ಕೃತ್ಯ ನಡೆದದ್ದು, ರಾಜಧಾನಿ ಬೆಂಗಳೂರು ಯುವತಿಯರಿಗೆ ಸೇಫ್ ಅಲ್ಲ ಎಂದು ಮತ್ತೊಮ್ಮೆ ಸಾಬೀತಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ