Webdunia - Bharat's app for daily news and videos

Install App

ಜಾತಿಗೆ ಒಬ್ಬರು ಡಿಸಿಎಂ ಚರ್ಚೆ ಅನವಶ್ಯಕ: ಬಸವರಾಜ ರಾಯರೆಡ್ಡಿ

Sampriya
ಸೋಮವಾರ, 1 ಜುಲೈ 2024 (19:44 IST)
Photo Courtesy X
ಕಲಬುರಗಿ:  ಸಿಎಂ ಬದಲಾವಣೆ ಬಗ್ಗೆ ಚಂದ್ರಶೇಖರ ಸ್ವಾಮೀಜಿ ಹೇಳಿಕೆ ನೀಡಿದ್ದು ಸರಿಯಲ್ಲ. ಸಿಎಂ ಸ್ಥಾನ ಬಿಟ್ಟುಕೊಡಿ ಎನ್ನಲು ಅವರೇನು ಶಾಸಕಾಂಗ ಪಕ್ಷದ ಸದಸ್ಯರಾ ಪಕ್ಷದ ವರಿಷ್ಠರಾ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಶಾಸಕ ಬಸವರಾಜ ರಾಯರೆಡ್ಡಿ ಅವರು ಆಕ್ರೋಶ ಹೊರಹಾಕಿದರು.

ಇಂದು ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಡಿಸಿಎಂ ಕೇವಲ ಗೌರವದ ಹುದ್ದೆ ಹೊರತು ಸಂವಿಧಾನದ ಹುದ್ದೆಯಲ್ಲ. ಸಿಎಂ ಸಿದ್ದರಾಮಯ್ಯ ಅವರು ಒಬ್ಬ ಅತ್ಯುತ್ತಮ ಆಡಳಿತಗಾರ ಆಗಿದ್ದು, ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಬಾರದು ಎಂದರು.

ಇನ್ನೂ ಭುಗಿಲೆದ್ದಿರುವ ಜಾತಿಗೆ ಒಬ್ಬರು ಡಿಸಿಎಂ ಚರ್ಚೆ ಅನವಶ್ಯಕವಾದದ್ದು. ಕಾಂಗ್ರೆಸ್ ಮುಖಂಡರು  ಇದನ್ನು ಇಲ್ಲಿಗೆ ನಿಲ್ಲಿಸಿ ಜನರ ಸಮಸ್ಯೆಗಳ ಬಗ್ಗೆ ಮಾತನಾಡಬೇಕು ಎಂದರು.

ಇನ್ನೂ ಚಂದ್ರಶೇಖರ ಸ್ವಾಮೀಜಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಧಾರ್ಮಿಕ ಮುಖಂಡರಾದವರು ಜನರಿಗೆ ಧರ್ಮದ ಬಗ್ಗೆ ಬೋಧನೆ ಮಾಡಬೇಕು ಹೊರತು ಧಾರ್ಮಿಕ ಅಶಸ್ತು ತೋರಿಸಬಾರದು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments