Select Your Language

Notifications

webdunia
webdunia
webdunia
webdunia

ರೈತರಿಗೆ ಸಂತಸದ ಸುದ್ದಿ: ಹಾಲಿನ ಪ್ರೋತ್ಸಾಹ ಧನದಲ್ಲಿ ಒಂದು ರೂಪಾಯಿ ಹೆಚ್ಚಳ

ರೈತರಿಗೆ ಸಂತಸದ ಸುದ್ದಿ: ಹಾಲಿನ ಪ್ರೋತ್ಸಾಹ ಧನದಲ್ಲಿ ಒಂದು ರೂಪಾಯಿ ಹೆಚ್ಚಳ
ರಾಮನಗರ , ಬುಧವಾರ, 16 ನವೆಂಬರ್ 2016 (17:49 IST)
ಹಾಲಿನ ಪ್ರೋತ್ಸಾಹ ಧನದಲ್ಲಿ ಒಂದು ರೂಪಾಯಿ ಹೆಚ್ಚಳ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
 
ರಾಮನಗರದಲ್ಲಿ ನಡೆದ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಭೀಕರ ಬರಗಾಲ ಇರುವುದರಿಂದ ರೈತರಿಗೆ ಸಹಾಯವಾಗಲೆಂದು ಹಾಲಿನ ಪ್ರೋತ್ಸಾಹ ಧನವನ್ನು ಒಂದು ರೂಪಾಯಿ ಹೆಚ್ಚಳ ಮಾಡಲಾಗುತ್ತಿದೆ ಎಂದರು. 
 
ಈ ಹಿಂದೆ ನಾಲ್ಕು ರೂಪಾಯಿ ಇದ್ದ ಹಾಲಿನ ಪ್ರೋತ್ಸಾಹ ಧನವನ್ನು ಇದೀಗ 5 ರೂಪಾಯಿಗೆ ಹೆಚ್ಚಳ ಮಾಡಲಾಗಿದೆ. ಹಾಲು ಒಕ್ಕೂಟ ಸಹ ಹಾಲಿನ ಪ್ರೋತ್ಸಾಹ ಧನವನ್ನು 2 ರೂಪಾಯಿಗೆ ಹೆಚ್ಚಿಸಬೇಕು ಎಂದು ಆಗ್ರಹಿಸಿದ್ದರು. 
 
ಇನ್ನು ಏಪ್ರಿಲ್ 1 ರಿಂದ ಶಾಲಾ ಮಕ್ಕಳಿಗೆ ವಾರದಲ್ಲಿ ಮೂರು ದಿನ ನೀಡುತ್ತಿದ್ದ ಹಾಲನ್ನು ಐದು ದಿನಗಳಿಗೆ ವಿಸ್ತರಣೆ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಪೋಲಿ ಚಿತ್ರ ವೀಕ್ಷಣೆ: ಸಚಿವ ತನ್ವೀರ್ ಸೇಠ್ ಸಭೆಗೆ ಎಂಎಲ್‌ಸಿಗಳಿಂದ ಬಹಿಷ್ಕಾರ