Webdunia - Bharat's app for daily news and videos

Install App

ಮಡಿವಾಳ ಮುಖ್ಯರಸ್ತೆ ಮತ್ತು ಮಾರುಕಟ್ಟೆ ರಸ್ತೆಯಲ್ಲಿ ಏಕಮುಖ ಸಂಚಾರ ವ್ಯವಸ್ಥೆ

Webdunia
ಗುರುವಾರ, 4 ನವೆಂಬರ್ 2021 (20:31 IST)
ಮಡಿವಾಳ ಸಂಚಾರ ಪೊಲೀಸ್ ಠಾಣೆಯ ಸರಹದ್ದಿನ ಮಡಿವಾಳ ಮುಖ್ಯರಸ್ತೆ ಮತ್ತು ಮಾರುಕಟ್ಟೆ ರಸ್ತೆಯಲ್ಲಿ ಏಕಮುಖ ಸಂಚಾರ ವ್ಯವಸ್ಥೆಯನ್ನು ಮಾರ್ಪಡಿಸಿ ವಾಹನಗಳ ಸುಗಮ ಸಂಚಾರ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ದ್ವಿಮುಖ ಸಂಚಾರ ವ್ಯವಸ್ಥೆಯನ್ನಾಗಿ ಕಲ್ಪಿಸಲಾಗಿದೆ.
ಮಡಿವಾಳ ಮುಖ್ಯರಸ್ತೆಯಲ್ಲಿ ಸರ್ಜಾಪುರ ರಸ್ತೆ ಜಂಕ್ಷನ್‌ನಿಂದ ಮಡಿವಾಳ ಪೊಲೀಸ್ ಠಾಣೆವರೆಗೆ, ಸರ್ಜಾಪುರ ರಸ್ತೆಯಲ್ಲಿ ಕೃಪಾನಿದಿ ಜಂಕ್ಷನ್‌ನಿಂದ ಸರ್ಜಾಪುರ ರಸ್ತೆ ಜಂಕ್ಷನ್ ವರೆಗೆ ಹಾಗೂ ಮಡಿವಾಳ ಮಾರುಕಟ್ಟೆ ರಸ್ತೆಯಲ್ಲಿ ಕೃಪಾನಿಧಿ ಜಂಕ್ಷನ್‌ನಿಂದ ಮಡಿವಾಳ ಪೊಲೀಸ್ ಠಾಣೆಯವರಗೆ ಇದ್ದಂತಹ ಏಕಮುಖ ಸಂಚಾರ ವ್ಯವಸ್ಥೆಯನ್ನು ಮಾರ್ಪಡಿಸಿ ದ್ವಿಮುಖ ಸಂಚಾರ ವ್ಯವಸ್ಥೆ ಕಲ್ಪಿಸಲಾಗಿದೆ.
ಚೆಕ್ ಪೋಸ್ಟ್ ಕಡೆಯಿಂದ ಮಡಿವಾಳ ಕಡೆಗೆ ಸಂಚರಿಸುವ ಎಲ್ಲಾ ದ್ವಿಚಕ್ರ ಹಾಗೂ ಎಲ್ಲಾ ತರಹದ ಲಘು ವಾಹನಗಳು ಸರ್ಜಾಪುರ ರಸ್ತೆ ಜಂಕ್ಷನ್‌ನಿಂದ ನೇರವಾಗಿ ಅಯ್ಯಪ್ಪ ಅಂಡರ್‌ ಪಾಸ್ ಮುಖಾಂತರ ಸಿಸ್ಕ್‌ಬೋರ್ಡ್‌ಕಡೆಗೆ ಮತ್ತು ಮಡಿವಾಳ ಮಾರುಕಟ್ಟೆ ರಸ್ತೆ ಕಡೆಗೆ ಸಂಚರಿಸಬಹುದಾಗಿದೆ.
ಚೆಕ್ ಪೋಸ್ಟ್ ಕಡೆಯಿಂದ ಮಡಿವಾಳ ಪೊಲೀಸ್ ಠಾಣೆಯ ಕಡೆಗೆ ಸಂಚರಿಸುವ ಎಲ್ಲಾ ರೀತಿಯ ಭಾರಿ ಸರಕುಸಾಗಣಿ ವಾಹನಗಳು ಮತ್ತು ಎಲ್ಲಾ ತರಹದ ಬಸ್ಸುಗಳು ಎಂದಿನಂತೆ ವಾಟರ್ ಟ್ಯಾಂಕ್ ಮತ್ತು ಕೃಪಾನಿಧಿ ಜಂಕ್ಷನ್ ಮುಖಾಂತರ ಮಡಿವಾಳ ಮಾರುಕಟ್ಟೆ ರಸ್ತೆಯಲ್ಲಿ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ. ಕೃಪಾನಿಧಿ ಜಂಕ್ಷನ್ ಕಡೆಯಿಂದ ಸರ್ಜಾಪುರ ರಸ್ತೆ ಜಂಕ್ಷನ್ ಕಡೆಗೆ ಬರುವ ಎಲ್ಲಾ ರೀತಿಯ ವಾಹನಗಳು ಕೃಪಾನಿಧಿ ಜಂಕ್ಷನ್‌ನಿಂದ ಸರ್ಜಾಪುರ ರಸ್ತೆಯಲ್ಲಿ ನೇರವಾಗಿ ವಾಟರ್ ಟ್ಯಾಂಕ್ ಮುಖಾಂತರ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ. ಸಿಲ್ಕ್ ಬೋರ್ಡ್ ಕಡೆಯಿಂದ ಬರುವ ದ್ವಿಚಕ್ರವಾಹನಗಳು ಮತ್ತು ಲಘುವಾಹನಗಳಿಗೆ ಮಡಿವಾಳ ಪೊಲೀಸ್ ಠಾಣಾ ಜಂಕ್ಷನ್‌ನಲ್ಲಿ ಬಲತಿರುವು ಪಡೆದು ಮಾರುಕಟ್ಟೆ ರಸ್ತೆ ಕಡೆಗೆ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ. ಅದೇ ರೀತಿ ಸಿಲ್ಕ್ ಬೋರ್ಡ್ ಕಡೆಯಿಂದ ಬಾರಿ ಸರಕು ಸಾಗಣಿ ವಾಹನಗಳು ಹಾಗೂ ಬಸ್ಸುಗಳು ಎಂದಿನಂತೆ ನೇರವಾಗಿ ಮಡಿವಾಳ ಮುಖ್ಯರಸ್ತೆ ಅಯ್ಯಪ್ಪ ಜಂಕ್ಷನ್ ಮುಖಾಂತರ ವಾಟರ್ ಟ್ಯಾಂಕ್‌ ಕಡೆಗೆ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments