ವರ್ಷದ ಹಿಂದಿನ ಮಗು ಕಿಡ್ನಾಪ್ ಪ್ರಕರಣ ಸುಖಾಂತ್ಯ, ಕಂದಮ್ಮ ಪೋಷಕರ ಮಡಿಲಿಗೆ!

Webdunia
ಶನಿವಾರ, 28 ಆಗಸ್ಟ್ 2021 (15:52 IST)
ಬೆಂಗಳೂರು: ಮಗು ಕಿಡ್ನಾಪ್ ಮಾಡಿ ಮಾರಾಟ ಮಾಡಿದ್ದ ಯುವಕನೊಬ್ಬನನ್ನು ನಗರ ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮ ವಿಭಾಗದ ಬ್ಯಾಟರಾಯನಪುರ ಪೊಲೀಸರಿಂದ ಕಾರ್ತಿಕ್
(24) ಎಂಬಾತನನ್ನು ಬಂಧಿಸಿದ್ದಾರೆ.
ಕಳೆದ ವರ್ಷ ಬ್ಯಾಟರಾಯನಪುರದ ಶಾಮಣ್ಣ ಗಾರ್ಡನ್ ನಲ್ಲಿ ಬಾಲಕನ ಕಳ್ಳತನವಾಗಿದ್ದು, ಮಗು ಕಳ್ಳತನ ಮಾಡಿ ಹೊಸೂರು ಬಳಿಯ ಯಮರೆ ಎನ್ನುವ ಗ್ರಾಮದಲ್ಲಿ ಮಾರಾಟ ಮಾಡಿದ್ದ. ಅರವತ್ತು ಸಾವಿರಕ್ಕೆ ಮಾರಾಟ ಮಾಡಿದ್ದ ಕಾರ್ತಿಕ್  ಪರಿಚಿತರ ಮನೆಯಲ್ಲಿಯೇ ಮಗು ಕಿಡ್ನಾಪ್ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಪ್ರಕರಣ ಬಗೆಗೆ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಕಳೆದ ಒಂದು ವರ್ಷದಿಂದ ಆರೋಪಿ ಮೇಲೆ ನಿಗಾ ಇಟ್ಟಿದ್ದ ಪೊಲೀಸರು. ಮಗು ಮಾರಾಟ ಸುಳಿವು ಪತ್ತೆ ಹಚ್ಚಿ ಆರೋಪಿ ಕಾರ್ತಿಕ್ ನನ್ನು ಬಂಧಿಸಿದ್ದಾರೆ.
ಮಗುವನ್ನ ಪತ್ತೆ ಹಚ್ಚಿ ಸಿಡಬ್ಲ್ಯೂಸಿ( ಚೈಲ್ಡ್ ವೆಲ್ಫರ್ ಕಮಿಟಿ)ಯ ಅನುಮತಿ ಪಡೆದು ಕಾನೂನು ಪ್ರಕ್ರಿಯೆ ಮುಗಿದ ಬಳಿಕ ಪೋಷಕರ ಮಡಿಲಿಗೆ ಮಗು ಒಪ್ಪಿಸಿದ್ದಾರೆ. ಒಂದು ವರ್ಷದ ಬಳಿಕ ಹೆತ್ತವರ ಮಡಿಲಿಗೆ ಪುಟ್ಟ ಬಾಲಕ ಸೇರಿದಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ಯಾಂಕಾಕ್‌ನಿಂದ ಬೆಂಗಳೂರಿಗೆ 47 ವನ್ಯಜೀವಿಗಳ ಸಾಗಾಟ, ರೆಡ್‌ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಆರೋಪಿ

ಪೆಟ್ರೋಲ್‌, ಡಿಸೇಲ್ ದರ ಏರಿಕೆ: ಖಾಸಗಿ ಬಸ್ ಟಿಕೆಟ್ ದರ ಹೆಚ್ಚಳ

ಶಿಕ್ಷಣವು ಉದ್ಯೋಗ, ಗೌರವಯುತ ಜೀವನಕ್ಕೆ ದಾರಿ ಮಾಡಿಕೊಡುತ್ತದೆ: ಸಿಎಂ ಸಿದ್ದರಾಮಯ್ಯ

ಮೇ 17ರಂದು ಹೊಸಹಳ್ಳಿ ಕಬ್ಬನ್ ಪಾರ್ಕ್ ಮೆಟ್ರೋ ಸ್ಥಗಿತ, ಕಾರಣ ಇಲ್ಲಿದೆ

ಮೋದಿ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲೆ ನಡೆಸುತ್ತಿರುವ ತೆರಿಗೆ ಸುಲಿಗೆ ಬಯಲಾಗಿದೆ: ರಣದೀಪ್ ಸುರ್ಜೇವಾಲ

ಮುಂದಿನ ಸುದ್ದಿ
Show comments