Webdunia - Bharat's app for daily news and videos

Install App

ವರ್ಷದ ಹಿಂದಿನ ಮಗು ಕಿಡ್ನಾಪ್ ಪ್ರಕರಣ ಸುಖಾಂತ್ಯ, ಕಂದಮ್ಮ ಪೋಷಕರ ಮಡಿಲಿಗೆ!

Webdunia
ಶನಿವಾರ, 28 ಆಗಸ್ಟ್ 2021 (15:52 IST)
ಬೆಂಗಳೂರು: ಮಗು ಕಿಡ್ನಾಪ್ ಮಾಡಿ ಮಾರಾಟ ಮಾಡಿದ್ದ ಯುವಕನೊಬ್ಬನನ್ನು ನಗರ ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮ ವಿಭಾಗದ ಬ್ಯಾಟರಾಯನಪುರ ಪೊಲೀಸರಿಂದ ಕಾರ್ತಿಕ್
(24) ಎಂಬಾತನನ್ನು ಬಂಧಿಸಿದ್ದಾರೆ.
ಕಳೆದ ವರ್ಷ ಬ್ಯಾಟರಾಯನಪುರದ ಶಾಮಣ್ಣ ಗಾರ್ಡನ್ ನಲ್ಲಿ ಬಾಲಕನ ಕಳ್ಳತನವಾಗಿದ್ದು, ಮಗು ಕಳ್ಳತನ ಮಾಡಿ ಹೊಸೂರು ಬಳಿಯ ಯಮರೆ ಎನ್ನುವ ಗ್ರಾಮದಲ್ಲಿ ಮಾರಾಟ ಮಾಡಿದ್ದ. ಅರವತ್ತು ಸಾವಿರಕ್ಕೆ ಮಾರಾಟ ಮಾಡಿದ್ದ ಕಾರ್ತಿಕ್  ಪರಿಚಿತರ ಮನೆಯಲ್ಲಿಯೇ ಮಗು ಕಿಡ್ನಾಪ್ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಪ್ರಕರಣ ಬಗೆಗೆ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಕಳೆದ ಒಂದು ವರ್ಷದಿಂದ ಆರೋಪಿ ಮೇಲೆ ನಿಗಾ ಇಟ್ಟಿದ್ದ ಪೊಲೀಸರು. ಮಗು ಮಾರಾಟ ಸುಳಿವು ಪತ್ತೆ ಹಚ್ಚಿ ಆರೋಪಿ ಕಾರ್ತಿಕ್ ನನ್ನು ಬಂಧಿಸಿದ್ದಾರೆ.
ಮಗುವನ್ನ ಪತ್ತೆ ಹಚ್ಚಿ ಸಿಡಬ್ಲ್ಯೂಸಿ( ಚೈಲ್ಡ್ ವೆಲ್ಫರ್ ಕಮಿಟಿ)ಯ ಅನುಮತಿ ಪಡೆದು ಕಾನೂನು ಪ್ರಕ್ರಿಯೆ ಮುಗಿದ ಬಳಿಕ ಪೋಷಕರ ಮಡಿಲಿಗೆ ಮಗು ಒಪ್ಪಿಸಿದ್ದಾರೆ. ಒಂದು ವರ್ಷದ ಬಳಿಕ ಹೆತ್ತವರ ಮಡಿಲಿಗೆ ಪುಟ್ಟ ಬಾಲಕ ಸೇರಿದಂತಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments