Webdunia - Bharat's app for daily news and videos

Install App

ಟೊಮೆಟೊ, ಕೊತ್ತಂಬರಿ ಸೊಪ್ಪು ಬಳಿಕ ಈರುಳ್ಳಿ, ಬೆಳ್ಳುಳ್ಳಿ ಬೆಲೆಯೂ ಗಗನಕ್ಕೆ

Krishnaveni K
ಶನಿವಾರ, 7 ಡಿಸೆಂಬರ್ 2024 (09:55 IST)
ಬೆಂಗಳೂರು: ಫೆಂಗಲ್ ಚಂಡಮಾರುತದ ಪರಿಣಾಮ ಸುರಿದ ಮಳೆಯಿಂದಾಗಿ ಜನರು ದಿನನಿತ್ಯ ಬಳಸುವ ತರಕಾರಿಗಳ ಬೆಲೆ ಏಕಾಏಕಿ ಏರಿಕೆಯಾಗಿದೆ. ಮೊನ್ನೆಯಷ್ಟೇ ಟೊಮೆಟೊ, ಕೊತ್ತಂಬರಿ ಸೊಪ್ಪು ಬೆಲೆ ಏರಿಕೆಯಾಗಿತ್ತು. ಈಗ ಈರುಳ್ಳಿ, ಬೆಳ್ಳುಳ್ಳಿಗೂ ಏರಿಕೆಯಾಗಿದೆ.

ಇದರೊಂದಿಗೆ ಜನರು ದಿನನಿತ್ಯ ಬಳಸುವ ಎಲ್ಲಾ ತರಕಾರಿಗಳೂ ದುಬಾರಿಯಂತಾಗಿದೆ. ಈರುಳ್ಳಿ ಬೆಲೆ ಕೆಲವು ದಿನಗಳ ಹಿಂದಷ್ಟೇ ಒಮ್ಮೆ ಏರಿಕೆಯಾಗಿತ್ತು. ಆದರೆ ಬಳಿಕ ಇಳಿಕೆಯಾಗಿತ್ತು. ಆದರೆ ಈಗ ಮಳೆಯಾದ ಬಳಿಕ ಮತ್ತೆ ಈರುಳ್ಳಿ ಭಾರೀ ದುಬಾರಿಯಾಗಿದೆ. ಈ ಮೊದಲು 40 ರಿಂದ 50 ರೂ.ಗೆ ಉತ್ತಮ ಗುಣಮಟ್ಟದ ಈರುಳ್ಳಿ ಮಾರಾಟವಾಗುತ್ತಿತ್ತು.

ಆದರೆ ಈಗ 70 ರಿಂದ 80 ರೂ.ಗೆ ತಲುಪಿದೆ. ಸಾಮಾನ್ಯ ಗುಣಮಟ್ಟದ ಈರುಳ್ಳಿಗೆ 60 ರೂ.ವರೆಗೆ ಬೆಲೆಯಾಗಿದೆ. ಬೆಳ್ಳುಳ್ಳಿಯೂ ಕಡಿಮೆಯೇನಲ್ಲ. ರೀಟೇಲ್ ನಲ್ಲಿ ಬೆಳ್ಳುಳ್ಳಿ ಬೆಲೆ 500 ರೂ. ದಾಟಿದೆ. ಅಕಾಲಿಕ ಮಳೆ, ಹೊರರಾಜ್ಯದಿಂದ ಆಮದು ಕೊರತೆಯಾಗಿರುವುದೇ ಈ ಬೆಲೆ ಏರಿಕೆಗೆ ಕಾರಣ ಎಂದು ತಿಳಿದುಬಂದಿದೆ.

ರಾಜ್ಯದಲ್ಲಿ ಮತ್ತು ನೆರೆ ರಾಜ್ಯಗಳಲ್ಲಿ ಅಕಾಲಿಕ ಮಳೆಯಾಗಿತ್ತು. ಪರಿಸ್ಥಿತಿ ಇದೇ ರೀತಿ ಮುಂದುವರಿದರೆ ಮುಂದಿನ ಕೆಲವೇ ದಿನಗಳಲ್ಲಿ ಈರುಳ್ಳಿ ಬೆಲೆ ಮತ್ತೊಮ್ಮೆ ಶತಕ ದಾಟುವ ಸಾಧ್ಯತೆಯಿದೆ. ಬೆಲೆ ಏರಿಕೆ ಸುಧಾರಿಸಬೇಕಾದರೆ ಜನರಿಯವರೆಗೂ ಕಾಯಬೇಕಾದ ಪರಿಸ್ಥಿತಿಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತಗಳವಿನ ಬಗ್ಗೆ ಆಘಾತಕಾರಿ ವರದಿಗಳು ಬಹಿರಂಗಗೊಳ್ಳಲಿವೆ: ಕೆ ಸಿ ವೇಣುಗೋಪಾಲ್

ಪ್ರಜ್ವಲ್ ರೇವಣ್ಣಗೆ ಇಂದು ಬಿಗ್ ಡೇ: ಜೈಲಲ್ಲೇ ಢವ ಢವ

Karnataka Weather: ಈ ಜಿಲ್ಲೆಗಳನ್ನು ಬಿಟ್ಟು ಉಳಿದೆಡೆ ಇಂದು ಮಳೆಗೆ ಬಿಡುವು

ಅಪ್ತಾಪ್ತೆ ಮೇಲೆ ನಿರಂತರ ರೇಪ್ ಮಾಡಿ, ಗರ್ಭಪಾತ: ಪುತ್ತೂರಿನ 7 ವರ್ಷಗಳ ಹಿಂದಿನ ಪ್ರಕರಣಕ್ಕೆ ತೀರ್ಪು ಪ್ರಕಟ

ಮತಗಳ್ಳತನ: ರಾಹುಲ್ ನೇತೃತ್ವದಲ್ಲಿ ಆ.5 ರಂದು ಪ್ರತಿಭಟನೆ, ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments