Webdunia - Bharat's app for daily news and videos

Install App

ಮನೆಯಲ್ಲಿ ಈರುಳ್ಳಿ ಖಾಲಿಯಾಗಿದ್ದರೆ ಇಂದೇ ಖರೀದಿಸಿ: ದಾಖಲೆ ಮಾಡಲಿದೆ ಬೆಲೆ

Krishnaveni K
ಶನಿವಾರ, 9 ನವೆಂಬರ್ 2024 (11:52 IST)
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಈರುಳ್ಳಿ ಬೆಲೆ ದಿನೇ ದಿನೇ ಏರಿಕೆಯಾಗುತ್ತಿದ್ದು ಸದ್ಯದಲ್ಲೇ ಶತಕದ ಗಡಿ ತಲುಪಲಿದೆ. ಹೀಗಾಗಿ ಮನೆಯಲ್ಲಿ ಈರುಳ್ಳಿ ಖಾಲಿಯಾಗಿದ್ದರೆ ಇಂದೇ ಖರೀದಿ ಮಾಡಿಟ್ಟುಕೊಳ್ಳಿ.

ಈಗಾಗಲೇ ಬೆಂಗಳೂರಿನ ಬಹುತೇಕ ಮಾರುಕಟ್ಟೆಗಳಲ್ಲಿ ಈರುಳ್ಳಿ ಬೆಲೆ ಪ್ರತೀ ಕೆ.ಜಿ.ಗೆ 70 ರಿಂದ 80 ರೂ.ವರೆಗೆ ತಲುಪಿದೆ. ಅಕಾಲಿಕ ಮಳೆ, ಕೆಲವೆಡೆ ಮಳೆಯ ಕೊರತೆಯಿಂದಾಗಿ ಈರುಳ್ಳಿ ಬೆಲೆ ದಿಡೀರ್ ಏರಿಕೆಯಾಗುತ್ತಿದೆ. ಈ ಮೊದಲು ಈರುಳ್ಳಿ 50 ರೂ.ವರೆಗಿತ್ತು. ಆದರೆ ಈಗ ಶತಕದತ್ತ ದಾಪುಗಾಲಿಡುತ್ತಿದೆ.

ಅಕಾಲಿಕ ಮಳೆಯಿಂದಾಗಿ ಈರುಳ್ಳಿ ಬೆಳೆ ನಾಶವಾಗಿದ್ದರೆ ಮತ್ತೆ ಕೆಲವೆಡೆ ದಾಸ್ತಾನು ಇಟ್ಟಿದ್ದ ಈರುಳ್ಳಿ ಮಳೆಯಿಂದಾಗಿ ಕೊಳೆತು ಹೋಗುತ್ತಿದೆ. ಇದರಿಂದಾಗಿ ನೆರೆ ರಾಜ್ಯ ಮಹಾರಾಷ್ಟ್ರದಿಂದ ಆಮದು ಮಾಡಿಕೊಳ್ಳುವ ಪರಿಸ್ಥಿತಿಯಿದೆ. ಅಲ್ಲೂ ನಿರೀಕ್ಷಿತ ಪ್ರಮಾಣದಲ್ಲಿ ಆಮದಾಗುತ್ತಿಲ್ಲ. ಹೀಗಾಗಿ ಬೆಲೆ ಏರಿಕೆಯಾಗಿದೆ.

ಇನ್ನು ಎರಡೇ ದಿನಗಳಲ್ಲಿ ಬೆಂಗಳೂರಿನಲ್ಲಿ ಈರುಳ್ಳಿ ಬೆಲೆ 100 ರೂ.ಗೆ ಏರಿಕೆಯಾಗಲಿದೆ. ಇದು ಕೇವಲ ಕರ್ನಾಟಕದಲ್ಲಿ ಮಾತ್ರವಲ್ಲ. ತಮಿಳುನಾಡಿನಲ್ಲೂ ಇದೇ ಕತೆ. ಅಲ್ಲಿ ಈಗಾಗಲೇ ಈರುಳ್ಳಿ ಬೆಲೆ ಪ್ರತೀ ಕೆ.ಜಿ.ಗೆ 100 ರೂ. ತಲುಪಿದೆ. ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡಿನಲ್ಲಿ ಅಕಾಲಿಕವಾಗಿ ಮಳೆಯಾಗಿರುವುದೇ ಇದಕ್ಕೆ ಕಾರಣ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯೂಟ್ಯೂಬರ್‌ ಸಮೀರ್‌ಗೆ ಧರ್ಮಸ್ಥಳದ ಎಸ್‌ಐಟಿಯಿಂದ ಬಂತು ನೋಟಿಸ್‌

ಸಿಎಂ, ಡಿಸಿಎಂಗೆ ಮುಖವಾಡ ಹಾಕಿ ಓಡಾಡುವ ಪರಿಸ್ಥಿತಿ: ವಿಜಯೇಂದ್ರ

ಕಿಂಗ್‌ ಕೋಬ್ರಾ ಪೋಟೋ ರಾಕೆಟ್‌: ಇಬ್ಬರ ವಿರುದ್ಧ ಎಫ್‌ಐಆರ್‌

ಧರ್ಮಸ್ಥಳದಲ್ಲಿ ಮಗಳು ನಾಪತ್ತೆಯಾಗಿದ್ದಾಳೆಂದು ದೂರು ನೀಡಿದ್ದ ಸುಜಾತಾ ಭಟ್‌ಗೆ ಎದುರಾಯಿತು ವಿಚಾರಣೆ

ದಸರಾ ಉದ್ಘಾಟನೆ ಯಾರಿಂದ ಎಂದು ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments