ರಾಜ್ಯದಲ್ಲಿ ಆನ್ ಲೈನ್ ಗ್ಯಾಂಬ್ಲಿಂಗ್ ಗೇಮ್ ನಿಷೇಧಕ್ಕೆ ನಿರ್ಧಾರ : ಮಾಧುಸ್ವಾಮಿ

Webdunia
ಶನಿವಾರ, 4 ಸೆಪ್ಟಂಬರ್ 2021 (14:59 IST)
ಬೆಂಗಳೂರು : ರಾಜ್ಯದಲ್ಲಿ ಆನ್ ಲೈನ್ ಗ್ಯಾಂಬ್ಲಿಂಗ್ ಗೇಮ್ ನಿಷೇಧಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ.

ಇಂದು ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಆನ್ ಲೈನ್ ಗ್ಯಾಂಬ್ಲಿಂಗ್ ಗೇಮ್ ನಿಷೇಧ ಸಂಬಂಧ ಇಂದಿನ ಕ್ಯಾಬಿನೆಟ್ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಈ ವೇಳೆ, ಆನ್ ಲೈನ್ ಗೇಮ್ ನಿಷೇಧಿಸಲು ತೀರ್ಮಾನ ಕೈಗೊಳ್ಳಲಾಗಿದ್ದು, ಈ ಕುರಿತು ಸರ್ಕಾರ ಸದನದಲ್ಲಿ ತಿದ್ದುಪಡಿ ಕಾಯಿದೆ ಮಂಡಿಸಲಿದೆ ಎಂದರು.
ಇದೇ ವೇಳೆ, ಸಾರ್ವಜನಿಕವಾಗಿ ಗಣೇಶೋತ್ಸವ ಆಚರಣೆ ಕುರಿತ ನಿರ್ಧಾರವನ್ನು ಸಂಪುಟ ಸಹುದ್ಯೋಗಿ ಸಚಿವರು ಸಿಎಂ ವಿವೇಚನೆಗೆ ಬಿಟ್ಟಿದ್ದಾರೆ. ಈ ಬಗ್ಗೆ ಸಿಎಂ ಅವರೇ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ನಾಳೆ ಈ ಸಂಬಂಧ ತಜ್ಞರ ಜತೆ ಸಭೆ ನಡೆಸಿದ ಬಳಿಕ ಅಂತಿಮ ತೀರ್ಮಾನ ತಿಳಿಸಲಾಗುವುದು ಎಂದು ತಿಳಿಸಿದರು. ಇದೇ ವೇಳೆ, ಮೈಸೂರು ಅರಮನೆಗೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಲೋಕಾಯುಕ್ತ ಪ್ರಕರಣಗಳ ಕುರಿತಂತೆ ಸಂಪುಟ ಸಭೆಯಲ್ಲಿ ಚರ್ಚೆ ನಡೆದಿದ್ದು, ಈ ಪ್ರಕರಣ ಕೈಬಿಡಲು ಸಂಪುಟದಲ್ಲಿ ನಿರ್ಧರಿಸಲಾಗಿದೆ ಎಂದರು. ಹೇಮಾವತಿ ನಾಲೆಯಿಂದ ಚಿಕ್ಕನಾಯಕನಹಳ್ಳಿ ತಾಲೂಕಿನ 26 ಕೆರೆಗಳಿಗೆ ನೀರು ಹರಿಸುವ ಕಾಮಗಾರಿಗೆ 98.50 ಕೋಟಿ ಬಿಡುಗಡೆಗೆ ನಿರ್ಧಾರ ಕೈಗೊಳ್ಳಳಾಗಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸರ್ಕಾರದ ಸುಳ್ಳಿನ ಕಂತೆಗೆ ರಾಜ್ಯಪಾಲರು ಧ್ವನಿಯಾಗಬೇಕು ಎಂಬ ನಿಯಮ ಸಂವಿಧಾನದಲ್ಲಿ ಇಲ್ಲ: ಆರ್. ಅಶೋಕ್

ಸಂಪೂರ್ಣ ವಿದ್ಯುತ್ ಚಾಲಿತ ಇಂಟರ್ ಸಿಟಿ ಬಸ್ ಗೆ ಫ್ರೆಶ್ ಬಸ್ ಒಡಂಬಡಿಕೆ

ಅಧಿವೇಶನದಲ್ಲಿ ರಾಜ್ಯಪಾಲರನ್ನು ಭಾಷಣ ಮಾಡಿಸುವ ಕಾಂಗ್ರೆಸ್ ಉದ್ದೇಶ ಇದೇ ಆಗಿತ್ತು: ಬಿವೈ ವಿಜಯೇಂದ್ರ

ಕೇರಳ ದೀಪಕ್ ಆತ್ಮಹತ್ಯೆ ಪ್ರಕರಣ, ಆರೋಪಿ ಶಮ್ಜಿತಾ ಮುಸ್ತಫಾಗೆ ಬಿಗ್‌ ಶಾಕ್

ಕೇಂದ್ರದ ಯೋಜನೆಗೆ ಕಾಂಗ್ರೆಸ್ ಸರ್ಕಾರದಿಂದ ಅಡ್ಡಗಾಲು: ಆರ್‌ ಅಶೋಕ್

ಮುಂದಿನ ಸುದ್ದಿ
Show comments