ಬೆಂಗಳೂರಿನ 60 ಜಾಗದಲ್ಲಿ ಮಾತ್ರ ಪಟಾಕಿ ಮಾರಾಟಕ್ಕೆ ಅವಕಾಶ

Webdunia
ಶನಿವಾರ, 11 ನವೆಂಬರ್ 2023 (21:02 IST)
ಸಾಲು ಸಾಲು ಪಟಾಕಿ ದುರಂತಗಳ ಹಿನ್ನಲೆ ಬಿಬಿಎಂಪಿ ಎಚ್ಚೇತ್ತುಕೊಂಡಿದೆ.ಈ ಬಾರಿ ಕಟ್ಟುನಿಟ್ಟಾಗಿ ಬಿಬಿಎಂಪಿ ರೂಲ್ಸ್ ಪಾಲಿಸಿದೆ.ಪೊಲೀಸ್ ಇಲಾಖೆ, ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಅಗ್ನಿಶಾಮಕ ದಳ ಹೆಚ್ಚಿನ ನಿಗಾವಹಿಸಿದೆ.ಪ್ರತಿ ವರ್ಷ ಬೆಂಗಳೂರಿನಲ್ಲಿ ನೂರಾರು ಜಾಗದಲ್ಲಿ ಪಟಾಕಿ ಮಾರಾಟ‌ ಅವಕಾಶ ವಿತ್ತು .ಆದರೆ ಈ ಬಾರಿ ಕೇವಲ 60 ಜಾಗದ ಮೈದಾನದಲ್ಲಿ ಮಾತ್ರ ಪಟಾಕಿ ಮಾರಾಟಕ್ಕೆ ಅವಕಾಶ ಇದೆ.

ದೀಪಾವಳಿ ಸಂದರ್ಭದಲ್ಲಿ ರಾತ್ರಿ 8 ರಿಂದ 10 ಗಂಟೆವರೆಗೂ ಮಾತ್ರ ಪಟಾಕಿ‌ ಸಿಡಿಸಲು ಅವಕಾಶ ಇದೆ.ಹಗಲು ಹೊತ್ತಿನಲ್ಲಿ ಪಟಾಕಿ ಸಿಡಿಸುವಂತಿಲ್ಲ.ಹಸಿರು ಪಟಾಕಿ ಹೊರತುಪಡಿಸಿ ಬೇರೆ ಪಟಾಕಿ ಸಿಡಿಸಿದ್ರೆ ಕ್ರಿಮಿನಲ್ ಕೇಸ್ ಹಾಕಲಾಗುತ್ತೆ.ಕಾರ್ಯ ಪಡೆಗಳನ್ನ ರಚಿಸಿರುವ ಮಾಲಿನ್ಯ ನಿಯಂತ್ರಣ ಮಂಡಳಿ ಬೆಸ್ಕಾಂ, ಅಗ್ನಿಶಾಮಕ ದಳ, ಸ್ಥಳೀಯ ಪೊಲೀಸ್, ಬಿಬಿಎಂಪಿ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳನ್ನ ಒಳಗೊಂಡು ಅಕ್ರಮ ದಾಸ್ತಾನು, ಹಸಿರು ಪಟಾಕಿ ಹೊರತುಪಡಿಸಿ ಅನ್ಯಪಟಾಕಿ ಮೇಲೆ ನಿಗಾ ಇಟ್ಟಿದೆ.
 
ರಾಜಾಜಿನಗರ ನವರಂಗ ಥೇಟರ್ ಹತ್ತಿರದ KLE ಗ್ರೌಂಡ್ ನಲ್ಲಿ ಜೋರು ಮಾರಾಟ ಮಾಡಲಾಗ್ತಿದೆ.ಬಿಬಿಎಂಪಿ ಇಂದ ಪರಿಶೀಲನೆ ಮಾಡಲಾದ ಗ್ರೀನ್ ಪಟಾಕಿ ಮಾರಾಟ ಮಾಡಲಾಗುತ್ತಿದೆ.ಪಟಾಕಿ ಅಂಗಡಿಗಳ ಮೇಲೆ ಬಿಬಿಎಂಪಿ ಅಧಿಕಾರಿಗಳಹ ನಿಗಾ ಇಟ್ಟಿದ್ದಾರೆ.ಪಟಾಕಿ ಖರೀದಿ ಮಾಡೋಕೆ ಕುಟುಂಬ ಸಮೇತವಾಗಿ ಜನ ಆಗಮಿಸುತ್ತಿದ್ದಾರೆ.ಇವತ್ತಿನಿಂದ ಮೂರುದಿನಗಳ ಕಾಲ ಬಿಬಿಎಂಪಿ ನಿಗದಿ ಮಾಡಿದ ಸ್ಥಳದಲ್ಲಿ ಪಟಾಕಿ ಮಾರಾಟಕ್ಕೆ ಅನುಮತಿ ನೀಡಿದೆ.ಅನುಮತಿ ಇರೋ ಅಂಗಡಿ ಮಾಲೀಕರಿರು ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments