Webdunia - Bharat's app for daily news and videos

Install App

ಬೊಮ್ಮಾಯಿ ಸರ್ಕಾರಕ್ಕೆ ಒಂದು ವರ್ಷ ಮಾತ್ರ : ಸಿದ್ದರಾಮಯ್ಯ

Webdunia
ಮಂಗಳವಾರ, 17 ಆಗಸ್ಟ್ 2021 (09:38 IST)
ಬೆಂಗಳೂರು (ಆ.17) :  ರಾಜ್ಯದಲ್ಲಿ ಸರ್ಕಾರ ಬಡವರ ಪರವಾದ ಒಂದು ಕೆಲಸವನ್ನೂ ಮಾಡುತ್ತಿಲ್ಲ.
ಎರಡು ವರ್ಷದಿಂದ ಬಡವರಿಗೆ ಒಂದು ಮನೆಯನ್ನೂ ನೀಡಿಲ್ಲ. ಬಡವರ ರಕ್ತ ಹೀರುತ್ತಿರುವ ಬಿಜೆಪಿಯನ್ನು ಮೊದಲು ಅಧಿಕಾರದಿಂದ ತೊಲಗಿಸಬೇಕು ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಒಂದು ವರ್ಷ ಮಾತ್ರ ಇರಬಹುದು. ನಾವೇನೂ ಈ ಸರ್ಕಾರವನ್ನು ತೆಗೆಯುವುದಿಲ್ಲ. ಅವರಾಗಿಯೇ ಬಿದ್ದರೆ ನಾವು ಸುಮ್ಮನಿರುವುದಿಲ್ಲ ಎಂದು ಹೇಳಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಯಡಿಯೂರಪ್ಪ ದಾರಿಯಲ್ಲಿ ಸಾಗುತ್ತೇನೆ ಎನ್ನುತ್ತಾರೆ. ಯಡಿಯೂರಪ್ಪ ಅವಧಿಯಲ್ಲಿ ಅವರು ಹಾಗೂ ಅವರ ಮಗ ಲೂಟಿ ಮಾಡಿದ್ದು ಬಿಟ್ಟರೆ ಬೇರೆ ಯಾವ ಕೆಲಸವನ್ನೂ ಮಾಡಿಲ್ಲ. ನೀವೂ ಲೂಟಿ ಹೊಡೆಯುತ್ತೀರಾ? ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಲೇವಡಿ ಮಾಡಿದರು.
ವಸತಿ ಇಲಾಖೆಯಲ್ಲಿ ಒಂದು ಮನೆಯನ್ನೂ ಮಂಜೂರು ಮಾಡದ ಬಗ್ಗೆ ಕಿಡಿ ಕಾರಿದ ಅವರು, ವಸತಿ ಸಚಿವ ವಿ. ಸೋಮಣ್ಣ ಅವರು ಕೇವಲ ಸುಳ್ಳು ಹೇಳುತ್ತಾ ಬಡವರನ್ನು ವಂಚಿಸುತ್ತಿದ್ದಾರೆ. ಎರಡು ವರ್ಷದ ಅವಧಿಯಲ್ಲಿ ಒಂದು ಮನೆಯನ್ನೂ ವಿತರಣೆ ಮಾಡಿಲ್ಲ. ಈ ಸರ್ಕಾರದಲ್ಲಿ ಹಣವಿಲ್ಲವೇ ಅಥವಾ ಕಮಿಷನ್ ಬಂದಿಲ್ಲವೇ ಎಂದು ಪ್ರಶ್ನಿಸಿದರು

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments