Webdunia - Bharat's app for daily news and videos

Install App

ಬಹಿರಂಗ ಗುದ್ದಾಟದಿಂದ ಬಿಜೆಪಿ ಶಿಸ್ತು ಕುಸಿತಕ್ಕೆ ಬ್ರೇಕ್

Webdunia
ಶುಕ್ರವಾರ, 30 ಜೂನ್ 2023 (22:02 IST)
ಬೆಂಗಳೂರು : ಸೋಲು ಯಾವಾಗಲೂ ಹಾಗೆ ಅನಾಥ. ಗೆಲುವಿಗಷ್ಟೇ ಮಾಲೀಕ ಎಂಬದು ಎಲ್ಲರ ಆಟ. ಇದು ಬಿಜೆಪಿ ಮನೆಯೊಳಗಿನ ನೆಮ್ಮದಿಯನ್ನು ಕೆಡಿಸಿದೆ. ಬಹಿರಂಗ ಗುದ್ದಾಟದಿಂದ ಬಿಜೆಪಿ ಶಿಸ್ತು ಕುಸಿತಕ್ಕೆ ಬ್ರೇಕ್ ಹಾಕುವ ಪ್ರಯತ್ನ ನಡೆದಿದೆ.

ರೇಣುಕಾಚಾರ್ಯ ಮಾತ್ರ ಬಿಜೆಪಿ ನಾಯಕರಿಗೆ ಸೆಡ್ಡು ಹೊಡೆದಿದ್ದಾರೆ. ಬಿಜೆಪಿಯ ಡ್ಯಾಮೇಜ್ ಕಂಟ್ರೋಲ್ ಸಭೆಯಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆದಿವೆ.

3 ತಿಂಗಳ ಹಿಂದೆ ತಿಳಿ ನೀರಿನ ಕೊಳದಲ್ಲಿ ಕಮಲ ನಳನಳಿಸುತ್ತಿತ್ತು. ಆದರೆ ಮೇ 13ರ ಬಳಿಕ ಕದಡಿದ ಕೊಳದಲ್ಲಿ ಕಮಲ ವಿಲವಿಲ ಅಂತಿದೆ. ಸೋಲಿನ ಕಹಿ ಬಿಜೆಪಿ ನಾಯಕರನ್ನು ಹಿಂಡಿ ಹಿಪ್ಪೆ ಮಾಡುತ್ತಿದೆ. ಹೊಂದಾಣಿಕೆ ರಾಜಕಾರಣದ ಕಿಡಿ ಹೊತ್ತಿ ಬೇಯುತ್ತಿದೆ. ಡಜನ್ಗೂ ಹೆಚ್ಚು ನಾಯಕರು ಬಹಿರಂಗವಾಗಿ ವಾಕ್ಸಮರಕ್ಕೆ ಇಳಿದಿದ್ದಾರೆ.

ಇದರ ಬೆನ್ನಲ್ಲೇ ವರದಿ ಪಡೆದ ಬಿಜೆಪಿ ಹೈಕಮಾಂಡ್ ಶಿಸ್ತಿನ ಗೆರೆ ಅಳಿಸಿ ಹೋಗದಂತೆ ತಡೆಯಬೇಕೆಂಬ ಕಟ್ಟಪ್ಪಣೆ ಹೊರಡಿಸಿದೆ. ಹೀಗಾಗಿ ಶುಕ್ರವಾರ ಬಿಜೆಪಿ ಕಚೇರಿಯಲ್ಲಿ ಕಟೀಲ್, ಯಡಿಯೂರಪ್ಪ, ಪ್ರಹ್ಲಾದ್ ಜೋಶಿ, ಬಸವರಾಜ ಬೊಮ್ಮಾಯಿ, ಸಿಟಿ ರವಿ ಒಳಗೊಂಡ ಐವರು ನಾಯಕರ ನೇತೃತ್ವದಲ್ಲಿ ವಿವರಣೆ ಪಡೆದು ಎಚ್ಚರಿಕೆ ಕೊಡುವ ಸಭೆ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments