Webdunia - Bharat's app for daily news and videos

Install App

ಆಪರೇಷನ್ ಆಡಿಯೋ; ತನಿಖೆಗೆ ಸಭಾಧ್ಯಕ್ಷ ಸೂಚನೆ

Webdunia
ಸೋಮವಾರ, 11 ಫೆಬ್ರವರಿ 2019 (19:36 IST)
ಆಪರೇಷನ್ ಕಮಲ ಕುರಿತ ಆಡಿಯೋ ಇಂದು ಸದನದಲ್ಲಿ ಬಿಸಿಬಿಸಿ ಚರ್ಚೆಗೆ ಕಾರಣವಾಯಿತು.

ರಾಜಕೀಯದಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಸಿದ್ದ ಬಿಜೆಪಿ ನಾಯಕರು ಹಾಗೂ ಗುರುಮಿಠಕಲ್ ಶಾಸಕ ಪುತ್ರ ಶರಣಗೌಡನ ಆಡಿಯೋ ವಿಚಾರ ವಿಧಾನಸಭೆಯಲ್ಲಿಂದು ಪ್ರಸ್ತಾಪ ಆಯಿತು.  ಆಡಿಯೋ ಬಗ್ಗೆ ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸಿ 15 ದಿನದಲ್ಲಿ ವರದಿ ಸಲ್ಲಿಸುವಂತೆ ಸಭಾಧ್ಯಕ್ಷ ಕೆ.ಆರ್. ರಮೇಶ್ಕುಮಾರ್ , ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಸೂಚನೆ ನೀಡಿದರು.

ಆಡಿಯೋ ಬಗ್ಗೆ ಪ್ರಸ್ತಾಪಿಸಿ ತಮ್ಮ ಮೇಲೆ ಬಂದಿರುವ ಆರೋಪದ ಬಗ್ಗೆ ಮಾತನಾಡಿದ ಸಭಾಧ್ಯಕ್ಷ ಕೆ.ಆರ್. ರಮೇಶ್ಕುಮಾರ್, ಈ ಆಡಿಯೋ ಬಗ್ಗೆ ಯಾವ ರೀತಿ ತನಿಖೆ ಆಗಬೇಕು. ಆಡಿಯೋದಲ್ಲಿನ ವಿಚಾರ ಸದನದ ಹಕ್ಕುಚ್ಯುತಿಯೇ, ಇಲ್ಲವೇ ಎಂಬ ಬಗ್ಗೆ ಸದನದಲ್ಲಿ ಸುದೀರ್ಘವಾಗಿ ಸುಮಾರು 2 ಗಂಟೆ ಚರ್ಚೆ ನಡೆದ ನಂತರ ಅಂತಿಮವಾಗಿ ರೂಲಿಂಗ್ ನೀಡಿದರು. ಆಡಿಯೋ ಬಗ್ಗೆ ತನಿಖೆ ನಡೆಸಲು ವಿಶೇಷ ತಂಡ ರಚಿಸಿ 15 ದಿನದಲ್ಲಿ ತನಿಖಾ ವರದಿಯನ್ನು ಸಲ್ಲಿಸುವಂತೆ ಮುಖ್ಯಮಂತ್ರಿಗೆ ಸೂಚಿಸಿದರು.

ಯಾವ ರೀತಿ ತನಿಖೆ ನಡೆಸಬೇಕು, ಕಾನೂನು ವಿಚಾರ, ಇವುಗಳನ್ನೆಲ್ಲಾ ನೀವೇ ಗಣನೆಗೆ ತೆಗೆದುಕೊಂಡು ವಿಶೇಷ ತಂಡದಿಂದ ತನಿಖೆ ಮಾಡಿಸಿ ಎಂದು ಸಭಾಧ್ಯಕ್ಷರು ಹೇಳಿ ಆಡಿಯೋ ಬಗೆಗಿನ ಚರ್ಚೆ ಮುಗಿದಿದೆ ಎಂದರು.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments