Webdunia - Bharat's app for daily news and videos

Install App

ಮೈಸೂರು ಮೃಗಾಲಯದಲ್ಲಿ ಆಪರೇಷನ್ ಚೀತಾ ಸಕ್ಸಸ್

Webdunia
ಗುರುವಾರ, 26 ಅಕ್ಟೋಬರ್ 2017 (15:10 IST)
ಮೈಸೂರು: ಚಾಮುಂಡಿಬೆಟ್ಟದಿಂದ ಮೃಗಾಲಯಕ್ಕೆ ಬಂದ ಚಿರತೆಯನ್ನ ಯಶಸ್ವಿಯಾಗಿ ಸೆರೆ ಹಿಡಿಯುವಲ್ಲಿ ಮೃಗಾಲಯ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ಚಾಮುಂಡಿಬೆಟ್ಟದಿಂದ ನಿನ್ನೆ ರಾತ್ರಿ ಒಂದೂವರೆ ವರ್ಷದ ಗಂಡು ಚಿರತೆ ದಾರಿ ತಪ್ಪಿ ಮೃಗಾಲಯದೊಳಗೆ ಬಂದಿದೆ. ಆದರೆ ಅಪರಿಚಿತ ಪ್ರಾಣಿ ಮೃಗಾಲಯದ ಒಳಗೆ ಬಂದಿದ್ದನ್ನ ಕಂಡ ಮೃಗಾಲಯದ ಕೋತಿಗಳು ಜೋರಾಗಿ  ಶಬ್ಧ ಮಾಡಲು ಆರಂಭಿಸಿವೆ. ಇದರಿಂದ ಗಾಬರಿಯಾದ ಚಿರತೆ ಮೃಗಾಲಯದಲ್ಲಿದ್ದ ದೊಡ್ಡಮರವೇರಿ ಕುಳಿತಿದೆ.

ಬೆಳಗ್ಗೆ 8.30ಕ್ಕೆ ಮೃಗಾಲಯದ ಸಿಬ್ಬಂದಿ ಆಗಮಿಸಿದಾಗ ಕೋತಿಗಳ ಚೀರಾಟ ಕಂಡು ಮರ ನೋಡಿದಾಗ  ಚಿರತೆ ಇರುವುದು ಕಂಡು ಬಂದಿದೆ. ಕೂಡಲೇ ಮೇಲಾಧಿಕಾರಿಗಳಿಗೆ ವಿಚಾರ  ತಿಳಿಸಿದಾಗ ತಕ್ಷಣ ಆಗಮಿಸಿದ ಅಧಿಕಾರಿಗಳು ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಕಾರ್ಯಾಚರಣೆ ನಡೆಸಿದ್ದಾರೆ.

ಕಾರ್ಯಾಚರಣೆ ಹೇಗೆ?

ಕಾರ್ಯಾಚರಣೆ ಕೈಗೊಂಡ ಮೃಗಾಲಯ ಪಶುವೈದ್ಯರು ಚಿರತೆಗೆ ಅರವಳಿಕೆ ಚುಚ್ಚು ಮದ್ದು ನೀಡಿದ್ದು, ಚುಚ್ಚು ಮದ್ದಿನಿಂದ ಮಂಪರಿಗೆ ಬಂದ ಚಿರತೆಯನ್ನು ಮರದ ಮೇಲಿಂದ ಬಲೆ ಮೂಲಕ ಕೆಳಗೆ ಸುರಕ್ಷಿತವಾಗಿ ಮತ್ತೊಂದು ಬಲೆಗೆ ತಳ್ಳಿದ್ದಾರೆ. ಚಿರತೆ ಹಿಡಿಯುವ ಕಾರ್ಯಾಚರಣೆ ಯಶಸ್ವಿಯಾದ ನಂತರ ಸಿಬ್ಬಂದಿ ಚಿರತೆಯನ್ನು ಮೃಗಾಲಯದಲ್ಲಿರುವ ಆಸ್ಪತ್ರೆಗೆ ಬೋನ್‍ ನಲ್ಲಿ ತಂದಿದ್ದಾರೆ. ಅಲ್ಲಿ ಮತ್ತೊಂದು ಇಂಜೆಕ್ಷನ್  ನೀಡಿ ಪ್ರಜ್ಞೆ ಬರುವಂತೆ ಮಾಡಿದ್ದಾರೆ ಎಂದು ಮೃಗಾಲಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರವಿಶಂಕರ್ ವಿವರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ, ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments