Publish Date: Sat, 07 May 2022 (09:00 IST)
Updated Date: Sat, 07 May 2022 (10:01 IST)
ಬೆಂಗಳೂರು : ಮುಂಬರುವ ಚುನಾವಣೆಗಾಗಿ ಶನಿವಾರದಿಂದ ಬಿಜೆಪಿಯ ಆಪರೇಷನ್ ಕಮಲ ಆರಂಭವಾಗುತ್ತಿದೆ.
ಮಂಡ್ಯ, ಕೋಲಾರದಿಂದಲೇ ಆಪರೇಷನ್ ಕಮಲ ಆರಂಭವಾಗುತ್ತಿದ್ದು, ಮಂಡ್ಯ ಜೆಡಿಎಸ್ನ ಇಬ್ಬರು ಯುವ ಮುಖಂಡರು ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ.
ಮಂಡ್ಯದ ಲಕ್ಷ್ಮೀ ಅಶ್ವಿನ್ಗೌಡ, ಮಾಜಿ ಸಚಿವ ಎಸ್.ಡಿ.ಜಯರಾಮ್ ಪುತ್ರ ಅಶೋಕ್, ಕೋಲಾರದ ವರ್ತೂರ್ ಪ್ರಕಾಶ್, ಮಾಲೂರು ಮಂಜುನಾಥ್ ಕೂಡ ಕಮಲ ಹಿಡಿಯುತ್ತಿದ್ದಾರೆ.
ನಾಳೆ ಸಂಜೆ 4 ಗಂಟೆಗೆ ನಡೆಯಲಿರುವ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಇವರೆಲ್ಲರೂ ಸಿಎಂ ಬೊಮ್ಮಾಯಿ ಹಾಗೂ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಮ್ಮುಖದಲ್ಲೇ ಬಿಜೆಪಿ ಪಾಳಯ ಸೇರಿಕೊಳ್ಳುತ್ತಿದ್ದಾರೆ.