Webdunia - Bharat's app for daily news and videos

Install App

ಭೋಗ್ಯಕ್ಕೆ ನೀಡಿರುವ ಸರ್ಕಾರಿ ಭೂಮಿ ಖರೀದಿಗೆ ಅವಕಾಶ : ಆರ್. ಅಶೋಕ್

Webdunia
ಬುಧವಾರ, 22 ಸೆಪ್ಟಂಬರ್ 2021 (13:29 IST)
ಬೆಂಗಳೂರು, ಸೆ.22 : ವಿವಿಧ ಸಂಘ-ಸಂಸ್ಥೆಗಳಿಗೆ ಸರ್ಕಾರದಿಂದ ಭೋಗ್ಯಕ್ಕೆ ನೀಡಲಾಗಿರುವ ಸರ್ಕಾರಿ ಭೂಮಿಯನ್ನು ಆಯಾಯ ಸಂಸ್ಥೆಗಳಿಗೆ ಮಾರ್ಗಸೂಚಿ ಆಧಾರದ ಮೇಲೆ ಖರೀದಿ ಮಾಡಲು ಆವಕಾಶ ನೀಡಲು ನಿರ್ಧರಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಬಿಜೆಪಿ ಸದಸ್ಯೆ ಭಾರತೀಶೆಟ್ಟಿ ಅವರು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ರಾಜ್ಯದ ಎಲ್ಲಾ ಜಿಲ್ಲೆಗಳು ಹಾಗೂ ಕೊಡಗು ಜಿಲ್ಲೆಯಲ್ಲಿ ಸ್ವಾತಂತ್ರಕ್ಕೂ ಮುನ್ನ ಗುತ್ತಿಗೆ ಆಧಾರದಲ್ಲಿ ನೀಡಲಾಗಿದ್ದ ಜಮೀನಿನ ಗುತ್ತಿಗೆ ಅವದಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಅದನ್ನು ಸರ್ಕಾರದ ಜಮೀನನ್ನು ವಶಕ್ಕೆ ಪಡೆದಿದೆ.
ಬೆಳಗಾವಿ ಜಿಲ್ಲೆ ಖನಾಪುರ ಗ್ರಾಮದಲ್ಲಿ 5 ಗುಂಟೆ ಜಮೀನಿನಲ್ಲಿ 50 ವರ್ಷಗಳ ಅವದಿಗೆ ಗುತ್ತಿಗೆ ನವೀಕರಣ ಮಾಡಲಾಗಿದೆ. ಗೋಕಾಕ್ ತಾಲೂಕಿನ ಕೊನೂರಾ ಗ್ರಾಮದಲ್ಲಿ 672 ಎಕರೆ, ಗೋಕಾಕ್ ಗ್ರಾಮದಲ್ಲಿ 312 ಎಕರೆ ಜಮೀನನ್ನು 90 ವರ್ಷಗಳ ಅವದಿಗೆ, ಗೋಕಾಕ್ ಪಾಲ್ಸ್ ಮಿಲ್ಗೆ ಗುತ್ತಿಗೆ ನೀಡಲಾಗಿತ್ತು.
ಅದನ್ನು 50 ವರ್ಷಗಳ ಅವದಿಗೆ ನವೀಕರಣ ಮಾಡಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಬ್ರಿಟಿಷರ ಅವದಿಯಲ್ಲಿ ಜಮೀನು ಭೋಗ್ಯಕ್ಕೆ ನೀಡಿರುವುದು ಕಂಡು ಬಂದಿಲ್ಲ ಎಂದರು.ಇದನ್ನು ಒಪ್ಪದ ಭಾರತೀಶೆಟ್ಟಿ ಅವರು ಬೆಂಗಳೂರು ಸೇರಿದಂತೆ ಅನೇಕ ಕಡೆಗಳಲ್ಲಿ ಸರ್ಕಾರ ಜಮೀನನ್ನು ಕ್ರೈಸ್ತ ಮಿಷನರಿಗಳಿಗೆ ನೀಡಲಾಗಿದೆ.
ಅದರಲ್ಲಿ ಅವರು ವಾಣಿಜ್ಯಕಟ್ಟಡ ನಿರ್ಮಿಸಿಕೊಂಡು ಲಾಭ ಮಾಡಿಕೊಳ್ಳುತ್ತಿದ್ದಾರೆ. ನಗರದ ಕೇಂದ್ರ ಭಾಗದಲ್ಲಿ ಜಮೀನಿದ್ದರೂ, ಅದನ್ನು ಖಾಸಗಿಯವರಿಗೆ ಗುತ್ತಿಗೆಗೆ ನೀಡಿ ಸರ್ಕಾರ ಕಚೇರಿಗಳು ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಆಗ ಸ್ಪಷ್ಟನೆ ನೀಡಿದ ಕಂದಾಯ ಸಚಿವರು ಸರ್ಕಾರದಿಂದ ಗುತ್ತಿಗೆಗೆ ನೀಡಿದ ಜಮೀನು ಮರಳಿ ಸರ್ಕಾರಕ್ಕೆ ಪಡೆದ ಪ್ರಕರಣಗಳು ಬಹಳ ಕಡಿಮೆ.ಖಾಸಗಿ ಸಂಸ್ಥೆಗಳು ಅವುಗಳನ್ನು ಪದೆ ಪದೇ ನವೀಕರಣ ಮಾಡಿಕೊಳ್ಳುತ್ತಿವೆ.
ಸರ್ಕಾರಗಳೂ ನವೀಕರಣ ಮಾಡಿಕೊಡುತ್ತಿವೆ. ನೆಪ ಮಾತ್ರಕ್ಕೆ ಅದು ಸರ್ಕಾರಿ ಭೂಮಿ. ಅದರಿಂದ ಬರುವ ಆದಾಯ ತೀರಾ ಕಡಿಮೆ. ಕಳೆದ ಬಾರಿ ವಿಧೇಯಕವೊಂದನ್ನು ಅಂಗೀಕರಿಸಿದ್ದು , ಭೋಗ್ಯಕ್ಕೆ ನೀಡಿರುವಭೂಮಿಯನ್ನು ಪದೆ ಪದೇ ನವೀಕರಣ ಮಾಡುವ ಬದಲಾಗಿ ಮಾರ್ಗಸೂಚಿ ಬೆಲೆಗೆ ಆಯಾಯ ಸಂಸ್ಥೆಗಳಿಗೆ ಮಾರಾಟ ಮಾಡಲು ನಿರ್ಧರಿಸಲಾಗಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Flight Crash: ತನಿಖೆಗೆ ಇದೇ ಮಹತ್ವದ ಸಾಕ್ಷಿ

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

ಏರ್ ಇಂಡಿಯಾ ಪತನವಾಗುವ ಮೊದಲು ಮೇಡೇ ಜೊತೆಗೆ ಹೀಗೂ ಹೇಳಿದ್ದ ಪೈಲಟ್

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments