ಇಂದಿನಿಂದ 2 ದಿನ ವಿಪಕ್ಷಗಳ ಒಕ್ಕೂಟ ಸಭೆ

Webdunia
ಸೋಮವಾರ, 17 ಜುಲೈ 2023 (07:06 IST)
ಬೆಂಗಳೂರು : ಯುಪಿಎ ಮೈತ್ರಿಕೂಟದ ಸಭೆ ಇದೇ ಜುಲೈ 17 ಹಾಗೂ 18 ರಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆಯಲಿದೆ. ಕೇಂದ್ರ ಬಿಜೆಪಿ ಸರ್ಕಾರದ ಎನ್ಡಿಎ ಮೈತ್ರಿ ಕೂಟದ ವಿರುದ್ಧ ಒಟ್ಟಾಗಿರುವ ಯುಪಿಎ ಮೈತ್ರಿಕೂಟದ ಮಹತ್ವದ ಸಭೆ ಇದಾಗಿದ್ದು, ಎರಡನೇ ಸಭೆಗೆ ಬೆಂಗಳೂರು ಸಾಕ್ಷಿಯಾಗಲಿದೆ.

ಬಿಜೆಪಿ ವಿರೋಧಿ ಪಕ್ಷಗಳೆಲ್ಲಾ ಒಗ್ಗೂಡುತ್ತಿವೆ. ಲೋಕಸಮರದಲ್ಲಿ ಮೋದಿ ಸರ್ಕಾರವನ್ನು ಮಣಿಸುವ ಉದ್ದೇಶದಿಂದ ವಿಪಕ್ಷಗಳು ಸೋಮವಾರ ಮತ್ತು ಮಂಗಳವಾರ ಬೆಂಗಳೂರಿನಲ್ಲಿ ಮಹಾಮೈತ್ರಿ ಸಭೆಯನ್ನು ನಡೆಸಲಿವೆ. ಕಾಂಗ್ರೆಸ್ ನೇತೃತ್ವದ ಈ ಸಭೆಗೆ 24 ರಾಜಕೀಯ ಪಕ್ಷಗಳಿಗೆ ಆಹ್ವಾನ ಹೋಗಿದೆ.

ಎಎಪಿಯನ್ನು ಈ ಕೂಟದ ಭಾಗವಾಗಿ ಮಾಡಿಕೊಳ್ಳಬೇಕು ಎನ್ನುವ ಉದ್ದೇಶದಿಂದ, ದೆಹಲಿ ಆಡಳಿತ ಸೇವೆಗಳಿಗೆ ಸಂಬಂಧಿಸಿದ ಸುಗ್ರಿವಾಜ್ಞೆಯನ್ನು ವಿರೋಧಿಸಲು ಕಾಂಗ್ರೆಸ್ ತೀರ್ಮಾನಿಸಿದೆ. ಹೀಗಾಗಿ ಈ ಸಭೆಯಲ್ಲಿ ಎಎಪಿಯ ಕೇಜ್ರಿವಾಲ್ ಪಾಲ್ಗೊಳ್ಳುವುದು ಬಹುತೇಕ ನಿಶ್ಚಿತವಾಗಿದೆ.

ಈಗಾಗಲೇ ಹಲವು ಪಕ್ಷಗಳ ಪ್ರಮುಖ ನಾಯಕರು ಒಬ್ಬೊಬ್ಬರಾಗಿಯೇ ಬೆಂಗಳೂರು ಕಡೆ ಮುಖ ಮಾಡಿದ್ದಾರೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ನಿತೀಶ್ ಕುಮಾರ್, ಎಂಕೆ ಸ್ಟಾಲಿನ್, ಶರದ್ ಪವಾರ್, ಲಾಲೂ ಪ್ರಸಾದ್ ಯಾದವ್, ಮಮತಾ ಬ್ಯಾನರ್ಜಿ, ಹೇಮಂತ್ ಸೋರೆನ್, ಅಖಿಲೇಶ್ ಯಾದವ್, ಉದ್ಧವ್ ಠಾಕ್ರೆ ಸೇರಿ ಪ್ರಮುಖರು ಇಂದು ಬೆಂಗಳೂರಿಗೆ ಧಾವಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಮಲ್ಲಿಕಾರ್ಜುನ ಖರ್ಗೆ ಮೇಲೆ ರಾಹುಲ್ ಗಾಂಧಿಗೆ ಎಂಥಾ ಪ್ರೀತಿ, ಸಂಸತ್ ನಲ್ಲೇ ಭುಜಕ್ಕೆ ಮಸಾಜ್

Gold price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಶಬರಿಮಲೆಗೆ ಹೋಗುತ್ತಿದ್ದ ಭಕ್ತರ ಜೊತೆ ಬಸ್ ಕಂಡಕ್ಟರ್ ವರ್ತನೆಗೆ ನೆಟ್ಟಿಗರು ಫಿದಾ video

ಸೈಡಿಗೆ ಹೋಗೋ.. ನೀರಾಟಕ್ಕೆ ಅಡ್ಡಿಪಡಿಸಿದ್ದಕ್ಕೆ ಕುಕ್ಕೆ ಸುಬ್ರಹ್ಮಣ್ಯದ ಆನೆ ಮಾಡಿದ್ದೇನು

ಮುಂದಿನ ಸುದ್ದಿ
Show comments