Webdunia - Bharat's app for daily news and videos

Install App

ವಿಪಕ್ಷ ಕಾಂಗ್ರೆಸ್ ವಿರೋಧ ವಿಶೇಷವಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Webdunia
ಭಾನುವಾರ, 12 ಡಿಸೆಂಬರ್ 2021 (19:47 IST)
ಬೆಂಗಳೂರು: ಕಾಂಗ್ರೆಸ್ ವಿರೋಧ ಪಕ್ಷವಾಗಿರುವುದರಿಂದ ಅಧಿವೇಶನದಲ್ಲಿ ಮತಾಂತರ ನಿಷೇಧ ಮಸೂದೆ ವಿರೋಧ ವ್ಯಕ್ತಪಡಿಸುವುದು ವಿಶೇಷವಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ಸರಕಾರ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ತಿಳಿಸಿದರು.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೋವಿಡ್ ಪರೀಕ್ಷೆಗೆ 3000-3500 ರೂ.ಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಇದರ ಮೂಲಕ ಬಿಜೆಪಿ ಸರಕಾರ ವಸೂಲಿಗೆ ಇಳಿದಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿಎಂ, ಇದು ತಂತ್ರಜ್ಞಾನ ಆಧಾರಿತ. 500 ರೂ.ಗೂ ಪರೀಕ್ಷೆ ಆಗುತ್ತದೆ. ಇನ್ನೂ ತ್ವರಿತವಾಗಿ ಪರೀಕ್ಷೆ ಮಾಡಬೇಕಾದರೆ ವಿಶೇಷ ಉಪಕರಣಗಳನ್ನು ಬಳಸಬೇಕು. ಅದಕ್ಕಾಗಿ ಹೆಚ್ಚಿನ ಶುಲ್ಕ ವಿಧಿಸಲಾಗುತ್ತಿದೆ. ನಮ್ಮಲ್ಲಿ ಕಡಿಮೆ ಇದೆ. ತಮಿಳುನಾಡು, ಬೇರೆ ಬೇರೆ ರಾಜ್ಯಗಳಲ್ಲಿ ನಮಗಿಂತಲೂ ಜಾಸ್ತಿ ಇದೆ ಎಂದು ಸ್ಪಷ್ಟಪಡಿಸಿದರು.
ಡಿ. 14ರಂದು ಯುಪಿ ಪ್ರವಾಸ
ಉತ್ತರ ಪ್ರದೇಶದಲ್ಲಿ ಭಾರತೀಯ ಜನತಾ ಪಾರ್ಟಿಯ ಮುಖ್ಯಮಂತ್ರಿಗಳ ಕಾನ್ಫರೆನ್ಸ್ ಏರ್ಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅದರಲ್ಲಿ ಭಾಗವಹಿಸುವುದಕ್ಕೆ ಒಂದು ದಿನ ಪ್ರವಾಸ ಕೈಗೊಳ್ಳುತ್ತಿದ್ದೇನೆ. ಡಿ. 13ರಂದು ಸಂಜೆ ಬೆಂಗಳೂರಿಂದ ಹೊರಡು, ಮರುದಿನ ಸಂಜೆ ವಾಪಸ್ಸಾಗುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments