Daily Horoscope

ವಿಪಕ್ಷ ಕಾಂಗ್ರೆಸ್ ವಿರೋಧ ವಿಶೇಷವಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Webdunia
ಭಾನುವಾರ, 12 ಡಿಸೆಂಬರ್ 2021 (19:47 IST)
ಬೆಂಗಳೂರು: ಕಾಂಗ್ರೆಸ್ ವಿರೋಧ ಪಕ್ಷವಾಗಿರುವುದರಿಂದ ಅಧಿವೇಶನದಲ್ಲಿ ಮತಾಂತರ ನಿಷೇಧ ಮಸೂದೆ ವಿರೋಧ ವ್ಯಕ್ತಪಡಿಸುವುದು ವಿಶೇಷವಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ಸರಕಾರ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ತಿಳಿಸಿದರು.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೋವಿಡ್ ಪರೀಕ್ಷೆಗೆ 3000-3500 ರೂ.ಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಇದರ ಮೂಲಕ ಬಿಜೆಪಿ ಸರಕಾರ ವಸೂಲಿಗೆ ಇಳಿದಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿಎಂ, ಇದು ತಂತ್ರಜ್ಞಾನ ಆಧಾರಿತ. 500 ರೂ.ಗೂ ಪರೀಕ್ಷೆ ಆಗುತ್ತದೆ. ಇನ್ನೂ ತ್ವರಿತವಾಗಿ ಪರೀಕ್ಷೆ ಮಾಡಬೇಕಾದರೆ ವಿಶೇಷ ಉಪಕರಣಗಳನ್ನು ಬಳಸಬೇಕು. ಅದಕ್ಕಾಗಿ ಹೆಚ್ಚಿನ ಶುಲ್ಕ ವಿಧಿಸಲಾಗುತ್ತಿದೆ. ನಮ್ಮಲ್ಲಿ ಕಡಿಮೆ ಇದೆ. ತಮಿಳುನಾಡು, ಬೇರೆ ಬೇರೆ ರಾಜ್ಯಗಳಲ್ಲಿ ನಮಗಿಂತಲೂ ಜಾಸ್ತಿ ಇದೆ ಎಂದು ಸ್ಪಷ್ಟಪಡಿಸಿದರು.
ಡಿ. 14ರಂದು ಯುಪಿ ಪ್ರವಾಸ
ಉತ್ತರ ಪ್ರದೇಶದಲ್ಲಿ ಭಾರತೀಯ ಜನತಾ ಪಾರ್ಟಿಯ ಮುಖ್ಯಮಂತ್ರಿಗಳ ಕಾನ್ಫರೆನ್ಸ್ ಏರ್ಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅದರಲ್ಲಿ ಭಾಗವಹಿಸುವುದಕ್ಕೆ ಒಂದು ದಿನ ಪ್ರವಾಸ ಕೈಗೊಳ್ಳುತ್ತಿದ್ದೇನೆ. ಡಿ. 13ರಂದು ಸಂಜೆ ಬೆಂಗಳೂರಿಂದ ಹೊರಡು, ಮರುದಿನ ಸಂಜೆ ವಾಪಸ್ಸಾಗುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments